5:56 PM Saturday16 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ: ಸಂಸದ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

21/10/2024, 23:32

ಮಂಗಳೂರು(reporterkarnataka.com): ಮಂಗಳೂರು-ಕೇರಳ ಮಾರ್ಗವಾದ ಉಳ್ಳಾಲದ ತೊಕ್ಕೊಟ್ಟು ರೈಲ್ವೆ ಓವರ್‌ ಬ್ರಿಡ್ಜ್‌ ಹಳಿ ಮೇಲೆ ಕಲ್ಲುಗಳನ್ನು ಇಟ್ಟು ಅಪಾಯಕಾರಿ ಕೃತ್ಯವೆಸಗಿರುವುದು ಗಂಭೀರ ವಿಚಾರವಾಗಿದ್ದು, ಪೊಲೀಸರು ಕೂಡಲೇ ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಆಗ್ರಹಿಸಿದ್ದಾರೆ.
ಮಂಗಳೂರಿನಲ್ಲಿ ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಕ್ಯಾ. ಚೌಟ ಅವರು, ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟು ವಿಕೃತಿ ಮೆರೆದಿರುವ ಈ ಕೃತ್ಯದ ಬಗ್ಗೆ ಈಗಾಗಲೇ ನಾನು ಸಂಬಂಧಪಟ್ಟ ಪೊಲೀಸರು ಹಾಗೂ ರೈಲ್ವೆ ಇಲಾಖೆ ರಕ್ಷಣಾ ಪಡೆ(RPF) ಅಧಿಕಾರಿಗಳ ಜತೆ ಮಾತನಾಡಿದ್ದೇನೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಬಾರಿಗೆ ಈ ರೀತಿಯ ಘಟನೆ ನಡೆಯುತ್ತಿದೆ. ರೈಲ್ವೆ ಇಲಾಖೆಗೆ ಸೇರಿದ ನಮ್ಮ ರಾಷ್ಟ್ರೀಯ ಸಂಪತ್ತಿನ ಮೇಲೆ ಈ ರೀತಿ ದಾಳಿ ಮಾಡಿ ಅದನ್ನು ಹಾನಿಗೊಳಿಸುವುದಕ್ಕೆ ಪ್ರಯತ್ನಿಸಿರುವುದು ದೇಶದ್ರೋಹದ ಕೆಲಸವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾರ್ವಜನಿಕರು ಕೂಡ ನಮ್ಮ ರಾಷ್ಟ್ರೀಯ ಸಂಪತ್ತುಗಳನ್ನು ನಮ್ಮ ಸೊತ್ತು ಎನ್ನುವ ರೀತಿಯಲ್ಲಿ ರಕ್ಷಿಸುವ ಕೆಲಸವನ್ನು ಮಾಡಬೇಕು. ಜತೆಗೆ, ಸಮಾಜದಲ್ಲಿ ಈ ರೀತಿಯ ಮಾನಸಿಕತೆ ಹೊಂದಿರುವ ವ್ಯಕ್ತಿಗಳು ಯಾರಿದ್ದಾರೆಯೋ ಅಂಥಹ ದೇಶದ್ರೋಹಿಗಳನ್ನು ಗುರುತಿಸುವ ಕೆಲಸವನ್ನು ಜನತೆ ಕೂಡ ಮಾಡಬೇಕೆಂದು ಕ್ಯಾ. ಚೌಟ ಅವರು ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು