6:42 PM Tuesday31 - March 2026
ಬ್ರೇಕಿಂಗ್ ನ್ಯೂಸ್
ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.…

ಇತ್ತೀಚಿನ ಸುದ್ದಿ

ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ: ಸಂಸದ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

21/10/2024, 23:32

ಮಂಗಳೂರು(reporterkarnataka.com): ಮಂಗಳೂರು-ಕೇರಳ ಮಾರ್ಗವಾದ ಉಳ್ಳಾಲದ ತೊಕ್ಕೊಟ್ಟು ರೈಲ್ವೆ ಓವರ್‌ ಬ್ರಿಡ್ಜ್‌ ಹಳಿ ಮೇಲೆ ಕಲ್ಲುಗಳನ್ನು ಇಟ್ಟು ಅಪಾಯಕಾರಿ ಕೃತ್ಯವೆಸಗಿರುವುದು ಗಂಭೀರ ವಿಚಾರವಾಗಿದ್ದು, ಪೊಲೀಸರು ಕೂಡಲೇ ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಆಗ್ರಹಿಸಿದ್ದಾರೆ.
ಮಂಗಳೂರಿನಲ್ಲಿ ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಕ್ಯಾ. ಚೌಟ ಅವರು, ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟು ವಿಕೃತಿ ಮೆರೆದಿರುವ ಈ ಕೃತ್ಯದ ಬಗ್ಗೆ ಈಗಾಗಲೇ ನಾನು ಸಂಬಂಧಪಟ್ಟ ಪೊಲೀಸರು ಹಾಗೂ ರೈಲ್ವೆ ಇಲಾಖೆ ರಕ್ಷಣಾ ಪಡೆ(RPF) ಅಧಿಕಾರಿಗಳ ಜತೆ ಮಾತನಾಡಿದ್ದೇನೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಬಾರಿಗೆ ಈ ರೀತಿಯ ಘಟನೆ ನಡೆಯುತ್ತಿದೆ. ರೈಲ್ವೆ ಇಲಾಖೆಗೆ ಸೇರಿದ ನಮ್ಮ ರಾಷ್ಟ್ರೀಯ ಸಂಪತ್ತಿನ ಮೇಲೆ ಈ ರೀತಿ ದಾಳಿ ಮಾಡಿ ಅದನ್ನು ಹಾನಿಗೊಳಿಸುವುದಕ್ಕೆ ಪ್ರಯತ್ನಿಸಿರುವುದು ದೇಶದ್ರೋಹದ ಕೆಲಸವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾರ್ವಜನಿಕರು ಕೂಡ ನಮ್ಮ ರಾಷ್ಟ್ರೀಯ ಸಂಪತ್ತುಗಳನ್ನು ನಮ್ಮ ಸೊತ್ತು ಎನ್ನುವ ರೀತಿಯಲ್ಲಿ ರಕ್ಷಿಸುವ ಕೆಲಸವನ್ನು ಮಾಡಬೇಕು. ಜತೆಗೆ, ಸಮಾಜದಲ್ಲಿ ಈ ರೀತಿಯ ಮಾನಸಿಕತೆ ಹೊಂದಿರುವ ವ್ಯಕ್ತಿಗಳು ಯಾರಿದ್ದಾರೆಯೋ ಅಂಥಹ ದೇಶದ್ರೋಹಿಗಳನ್ನು ಗುರುತಿಸುವ ಕೆಲಸವನ್ನು ಜನತೆ ಕೂಡ ಮಾಡಬೇಕೆಂದು ಕ್ಯಾ. ಚೌಟ ಅವರು ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು