12:52 AM Friday3 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ: ಸಂಸದ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

21/10/2024, 23:32

ಮಂಗಳೂರು(reporterkarnataka.com): ಮಂಗಳೂರು-ಕೇರಳ ಮಾರ್ಗವಾದ ಉಳ್ಳಾಲದ ತೊಕ್ಕೊಟ್ಟು ರೈಲ್ವೆ ಓವರ್‌ ಬ್ರಿಡ್ಜ್‌ ಹಳಿ ಮೇಲೆ ಕಲ್ಲುಗಳನ್ನು ಇಟ್ಟು ಅಪಾಯಕಾರಿ ಕೃತ್ಯವೆಸಗಿರುವುದು ಗಂಭೀರ ವಿಚಾರವಾಗಿದ್ದು, ಪೊಲೀಸರು ಕೂಡಲೇ ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಆಗ್ರಹಿಸಿದ್ದಾರೆ.
ಮಂಗಳೂರಿನಲ್ಲಿ ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಕ್ಯಾ. ಚೌಟ ಅವರು, ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟು ವಿಕೃತಿ ಮೆರೆದಿರುವ ಈ ಕೃತ್ಯದ ಬಗ್ಗೆ ಈಗಾಗಲೇ ನಾನು ಸಂಬಂಧಪಟ್ಟ ಪೊಲೀಸರು ಹಾಗೂ ರೈಲ್ವೆ ಇಲಾಖೆ ರಕ್ಷಣಾ ಪಡೆ(RPF) ಅಧಿಕಾರಿಗಳ ಜತೆ ಮಾತನಾಡಿದ್ದೇನೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಬಾರಿಗೆ ಈ ರೀತಿಯ ಘಟನೆ ನಡೆಯುತ್ತಿದೆ. ರೈಲ್ವೆ ಇಲಾಖೆಗೆ ಸೇರಿದ ನಮ್ಮ ರಾಷ್ಟ್ರೀಯ ಸಂಪತ್ತಿನ ಮೇಲೆ ಈ ರೀತಿ ದಾಳಿ ಮಾಡಿ ಅದನ್ನು ಹಾನಿಗೊಳಿಸುವುದಕ್ಕೆ ಪ್ರಯತ್ನಿಸಿರುವುದು ದೇಶದ್ರೋಹದ ಕೆಲಸವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾರ್ವಜನಿಕರು ಕೂಡ ನಮ್ಮ ರಾಷ್ಟ್ರೀಯ ಸಂಪತ್ತುಗಳನ್ನು ನಮ್ಮ ಸೊತ್ತು ಎನ್ನುವ ರೀತಿಯಲ್ಲಿ ರಕ್ಷಿಸುವ ಕೆಲಸವನ್ನು ಮಾಡಬೇಕು. ಜತೆಗೆ, ಸಮಾಜದಲ್ಲಿ ಈ ರೀತಿಯ ಮಾನಸಿಕತೆ ಹೊಂದಿರುವ ವ್ಯಕ್ತಿಗಳು ಯಾರಿದ್ದಾರೆಯೋ ಅಂಥಹ ದೇಶದ್ರೋಹಿಗಳನ್ನು ಗುರುತಿಸುವ ಕೆಲಸವನ್ನು ಜನತೆ ಕೂಡ ಮಾಡಬೇಕೆಂದು ಕ್ಯಾ. ಚೌಟ ಅವರು ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು