7:23 PM Sunday18 - January 2026
ಬ್ರೇಕಿಂಗ್ ನ್ಯೂಸ್
ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ದುಬೈ ಗಡಿನಾಡ ಉತ್ಸವದಲ್ಲಿ ಶೈಕ್ಷಣಿಕ ಶ್ರೇಷ್ಠತೆಗಾಗಿ ಡಾ. ಫಖ್ರುದ್ದೀನ್ ಕುನಿಲ್ ಅವರಿಗೆ ಸನ್ಮಾನ

22/10/2024, 23:49

ಮಂಗಳೂರು(reporterkarnataka.com):ಅಕ್ಟೋಬರ್ 13ರಂದು, ದುಬೈನ ಔದ್ ಮೆಥಾದಲ್ಲಿರುವ ‘ಜೆಮ್’ ಖಾಸಗಿ ಶಾಲೆಯು, ಗಡಿನಾಡು ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಯುಎಇ ಘಟಕದಿಂದ ಆಯೋಜಿಸಲಾದ ದುಬೈ ಗಡಿನಾಡ ಉತ್ಸವಕ್ಕೆ ಸಾಕ್ಷಿಯಾಯಿತು. ಈ ವಿಶೇಷ ಕಾರ್ಯಕ್ರಮದಲ್ಲಿ ಅಕಾಡೆಮಿಯು ತನ್ನ 50ನೇ ವಾರ್ಷಿಕೋತ್ಸವವನ್ನು ಆಚರಿಸಿತು. ಈ ಸುಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಅಮೂಲ್ಯ ಕೊಡುಗೆಗಳಿಗಾಗಿ ಪ್ರತಿಷ್ಠಿತ ಗಡಿನಾಡ ಪ್ರಶಸ್ತಿಯನ್ನು ಕುನಿಲ್ ಗ್ರೂಪ್ ಅಧ್ಯಕ್ಷರಾದ ಡಾ। ಫಖ್ರುದ್ದೀನ್ ಕುನಿಲ್ ಅವರಿಗೆ ನೀಡಿ ಗೌರವಿಸಿತು.


35 ವರ್ಷಗಳ ಹಿಂದೆ ಕಾಸರಗೋಡು ಜಿಲ್ಲೆಯ ಶಿರಿಯಾ ಎಂಬ ಸಣ್ಣ ಗ್ರಾಮದಲ್ಲಿ ಡಾ। ಕುನಿಲ್ ಅವರ ಶೈಕ್ಷಣಿಕ ಯಾತ್ರೆಯು ಪ್ರಾರಂಭವಾಯಿತು. ಅಲ್ಲಿ ಅವರು ಎಲ್.ಕೆ.ಜಿ.ಯಿಂದ 12ನೇ ತರಗತಿಯವರೆಗೆ ಸಮಗ್ರ ಶಿಕ್ಷಣವನ್ನು ನೀಡುವ ಶಾಲೆಯನ್ನು ಸ್ಥಾಪಿಸಿದರು. ಸ್ಥಳೀಯ ಸಮುದಾಯದ ಸಹಕಾರದೊಂದಿಗೆ ಅವರು ಬದಿಯಡ್ಕದಲ್ಲಿ ಎರಡನೇ ಶಾಲೆಯನ್ನು ಸ್ಥಾಪಿಸಿದರು ಹಾಗೂ ಅವರ ನಿರಂತರ ಬೆಂಬಲದಿಂದ ಉತ್ತೇಜಿತರಾಗಿ, ಕರ್ನಾಟಕದ ನಾಟೆಕಲ್’ನಲ್ಲಿ ಮತ್ತು ತುಂಬೆಯಲ್ಲಿ ಕುನಿಲ್ ಶಾಲೆಗಳನ್ನು ವಿಸ್ತರಿಸಿದರು.
ನಾಲ್ಕು ಶಾಲೆಗಳು 7000 ವಿದ್ಯಾರ್ಥಿಗಳಿಗೆ ಪೋಷಕ ಭೂಮಿಯಾಗಿ ಮಾರ್ಪಟ್ಟಿವೆ. 600 ವೃತ್ತಿಪರ ಸಿಬ್ಬಂದಿ ಮತ್ತು 125 ಶಾಲಾ ವಾಹನಗಳೊಂದಿಗೆ ಈ ಶಾಲೆಗಳು ಅತ್ತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿವೆ. 100% ಫಲಿತಾಂಶವನ್ನು ನಿರಂತರವಾಗಿ ಕುನಿಲ್ ಶಾಲೆಗಳು ಸಾಧಿಸುತ್ತಿವೆ, ಇದು ಡಾ. ಫಖ್ರುದ್ದೀನ್ ಕುನಿಲ್ ಅವರ ಶಿಕ್ಷಣದಲ್ಲಿನ ಶ್ರೇಷ್ಠತೆಯ ಬದ್ಧತೆಗೆ ಸಾಕ್ಷಿಯಾಗಿದೆ. ಮುಂದಿನ ದಿನಗಳಲ್ಲಿ ಸರ್ಕಾರದ ಅನುಮತಿ ದೊರೆತರೆ ಅಧ್ಯಕ್ಷರಾದ ಡಾ। ಫಖ್ರುದ್ದೀನ್ ಕುನಿಲ್ ಅವರು ಬಿ.ಎ., ಬಿ.ಕಾಂ, ಬಿ.ಎಸ್ಸಿ ಮತ್ತು ಬಿ.ಬಿ.ಎ.ಯಲ್ಲಿ ಪದವಿ ಕೋರ್ಸ್‌ಗಳನ್ನು ಪರಿಚಯಿಸಲು ಯೋಜನೆಯನ್ನು ರೂಪಿಸಿದ್ದಾರೆ. ಇದರಿಂದಾಗಿ ಶೈಕ್ಷಣಿಕ ಅವಕಾಶಗಳನ್ನು ಇನ್ನಷ್ಟು ಸಮೃದ್ಧಗೊಳಿಸಿ, ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶಗಳನ್ನು ಒದಗಿಸಬಹುದಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಕುನಿಲ್ ಗ್ರೂಪ್ ಅಧ್ಯಕ್ಷ ಡಾ। ಫಖ್ರುದ್ದೀನ್ ಕುನಿಲ್, ಕುನಿಲ್ ಗ್ರೂಪ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ
ಶ್ರೀ ರಾಜ್ ಪ್ರಸಾದ್ ನಾಯ್ಕ್, ಅವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು