12:14 PM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ದುಬೈ ಗಡಿನಾಡ ಉತ್ಸವದಲ್ಲಿ ಶೈಕ್ಷಣಿಕ ಶ್ರೇಷ್ಠತೆಗಾಗಿ ಡಾ. ಫಖ್ರುದ್ದೀನ್ ಕುನಿಲ್ ಅವರಿಗೆ ಸನ್ಮಾನ

22/10/2024, 23:49

ಮಂಗಳೂರು(reporterkarnataka.com):ಅಕ್ಟೋಬರ್ 13ರಂದು, ದುಬೈನ ಔದ್ ಮೆಥಾದಲ್ಲಿರುವ ‘ಜೆಮ್’ ಖಾಸಗಿ ಶಾಲೆಯು, ಗಡಿನಾಡು ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಯುಎಇ ಘಟಕದಿಂದ ಆಯೋಜಿಸಲಾದ ದುಬೈ ಗಡಿನಾಡ ಉತ್ಸವಕ್ಕೆ ಸಾಕ್ಷಿಯಾಯಿತು. ಈ ವಿಶೇಷ ಕಾರ್ಯಕ್ರಮದಲ್ಲಿ ಅಕಾಡೆಮಿಯು ತನ್ನ 50ನೇ ವಾರ್ಷಿಕೋತ್ಸವವನ್ನು ಆಚರಿಸಿತು. ಈ ಸುಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಅಮೂಲ್ಯ ಕೊಡುಗೆಗಳಿಗಾಗಿ ಪ್ರತಿಷ್ಠಿತ ಗಡಿನಾಡ ಪ್ರಶಸ್ತಿಯನ್ನು ಕುನಿಲ್ ಗ್ರೂಪ್ ಅಧ್ಯಕ್ಷರಾದ ಡಾ। ಫಖ್ರುದ್ದೀನ್ ಕುನಿಲ್ ಅವರಿಗೆ ನೀಡಿ ಗೌರವಿಸಿತು.


35 ವರ್ಷಗಳ ಹಿಂದೆ ಕಾಸರಗೋಡು ಜಿಲ್ಲೆಯ ಶಿರಿಯಾ ಎಂಬ ಸಣ್ಣ ಗ್ರಾಮದಲ್ಲಿ ಡಾ। ಕುನಿಲ್ ಅವರ ಶೈಕ್ಷಣಿಕ ಯಾತ್ರೆಯು ಪ್ರಾರಂಭವಾಯಿತು. ಅಲ್ಲಿ ಅವರು ಎಲ್.ಕೆ.ಜಿ.ಯಿಂದ 12ನೇ ತರಗತಿಯವರೆಗೆ ಸಮಗ್ರ ಶಿಕ್ಷಣವನ್ನು ನೀಡುವ ಶಾಲೆಯನ್ನು ಸ್ಥಾಪಿಸಿದರು. ಸ್ಥಳೀಯ ಸಮುದಾಯದ ಸಹಕಾರದೊಂದಿಗೆ ಅವರು ಬದಿಯಡ್ಕದಲ್ಲಿ ಎರಡನೇ ಶಾಲೆಯನ್ನು ಸ್ಥಾಪಿಸಿದರು ಹಾಗೂ ಅವರ ನಿರಂತರ ಬೆಂಬಲದಿಂದ ಉತ್ತೇಜಿತರಾಗಿ, ಕರ್ನಾಟಕದ ನಾಟೆಕಲ್’ನಲ್ಲಿ ಮತ್ತು ತುಂಬೆಯಲ್ಲಿ ಕುನಿಲ್ ಶಾಲೆಗಳನ್ನು ವಿಸ್ತರಿಸಿದರು.
ನಾಲ್ಕು ಶಾಲೆಗಳು 7000 ವಿದ್ಯಾರ್ಥಿಗಳಿಗೆ ಪೋಷಕ ಭೂಮಿಯಾಗಿ ಮಾರ್ಪಟ್ಟಿವೆ. 600 ವೃತ್ತಿಪರ ಸಿಬ್ಬಂದಿ ಮತ್ತು 125 ಶಾಲಾ ವಾಹನಗಳೊಂದಿಗೆ ಈ ಶಾಲೆಗಳು ಅತ್ತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿವೆ. 100% ಫಲಿತಾಂಶವನ್ನು ನಿರಂತರವಾಗಿ ಕುನಿಲ್ ಶಾಲೆಗಳು ಸಾಧಿಸುತ್ತಿವೆ, ಇದು ಡಾ. ಫಖ್ರುದ್ದೀನ್ ಕುನಿಲ್ ಅವರ ಶಿಕ್ಷಣದಲ್ಲಿನ ಶ್ರೇಷ್ಠತೆಯ ಬದ್ಧತೆಗೆ ಸಾಕ್ಷಿಯಾಗಿದೆ. ಮುಂದಿನ ದಿನಗಳಲ್ಲಿ ಸರ್ಕಾರದ ಅನುಮತಿ ದೊರೆತರೆ ಅಧ್ಯಕ್ಷರಾದ ಡಾ। ಫಖ್ರುದ್ದೀನ್ ಕುನಿಲ್ ಅವರು ಬಿ.ಎ., ಬಿ.ಕಾಂ, ಬಿ.ಎಸ್ಸಿ ಮತ್ತು ಬಿ.ಬಿ.ಎ.ಯಲ್ಲಿ ಪದವಿ ಕೋರ್ಸ್‌ಗಳನ್ನು ಪರಿಚಯಿಸಲು ಯೋಜನೆಯನ್ನು ರೂಪಿಸಿದ್ದಾರೆ. ಇದರಿಂದಾಗಿ ಶೈಕ್ಷಣಿಕ ಅವಕಾಶಗಳನ್ನು ಇನ್ನಷ್ಟು ಸಮೃದ್ಧಗೊಳಿಸಿ, ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶಗಳನ್ನು ಒದಗಿಸಬಹುದಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಕುನಿಲ್ ಗ್ರೂಪ್ ಅಧ್ಯಕ್ಷ ಡಾ। ಫಖ್ರುದ್ದೀನ್ ಕುನಿಲ್, ಕುನಿಲ್ ಗ್ರೂಪ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ
ಶ್ರೀ ರಾಜ್ ಪ್ರಸಾದ್ ನಾಯ್ಕ್, ಅವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು