8:06 PM Saturday11 - October 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ… ಇಂಗಾಲಮುಕ್ತ ಸರಕು ಸಾಗಣೆ ಪ್ರಧಾನಿ ಮೋದಿ ಅವರ ಕನಸು: ಕೇಂದ್ರ ಸಚಿವ ಕುಮಾರಸ್ವಾಮಿ ಮೈಸೂರು ಧರ್ಮಪ್ರಾಂತ್ಯ ಹೊಸ ಧರ್ಮಾಧ್ಯಕ್ಷರಾಗಿ ಡಾ. ಫ್ರಾನ್ಸಿಸ್ ಸೆರಾವೊ: ಧಾರ್ಮಿಕ ವಿಧಿ ವಿಧಾನ…

ಇತ್ತೀಚಿನ ಸುದ್ದಿ

ಕುಲಶೇಖರದ ಹೋಲಿ ಕ್ರಾಸ್ ಚರ್ಚಿನ ಸಭಾಂಗಣದಲ್ಲಿ 21 ಆಯೋಗದ ಸದಸ್ಯರಿಗೆ ಕಾರ್ಯಾಗಾರ

24/10/2024, 14:55

ಮಂಗಳೂರು(reporterkarnataka.com):ಮಂಗಳೂರು ಧರ್ಮಪ್ರಾಂತ್ಯದ ಸಿಟಿ ವಲಯದ ವ್ಯಾಪ್ತಿಯಲ್ಲಿ ಬರುವ ಕುಲಶೇಖರ, ಬೊಂದೇಲ್, ನೀರುಮಾರ್ಗ, ಪಾಲ್ದನೆ, ಬಜಾಲ್, ಕೆಲರೈ, ದೇರೆಬೈಲ್, ಪೆರ್ಮಯ್, ವಾಮಂಜೂರು, ಅಂಜೆಲೊರ್, ಶಕ್ತನಗರ ಇದರ 21 ಆಯೋಗದ ಸದಸ್ಯರಿಗೆ ಕಾರ್ಯಾಗಾರವನ್ನು ನಗರದ ಕುಲಶೇಖರದ ಹೋಲಿ ಕ್ರಾಸ್ ಚರ್ಚಿನ ಸಭಾಂಗಣದಲ್ಲಿ ಏರ್ಪಡಿಸಲಾಗಿತು.
ಈ ಕಾರ್ಯಾಗಾರದಲ್ಲಿ ಚರ್ಚಿನ 21 ಆಯೋಗದ ಸದಸ್ಯರಿಗೆ ಮಾಹಿತಿ, ವಿಚಾರ ವಿನಿಮಯ, ಸಂದೇಹಗಳಿಗೆ ಉತ್ತರ ನೀಡುವ ಮೂಲಕ ಸಹಕಾರಿಯಾಯಿತು. ಕಾರ್ಯಾಗಾರದಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ| ಪೀಟರ್ ಪಾವುಲ್ ಸಲ್ಡಾನ ಅವರು ಕಾರ್ಯಾಗಾರದ ಉದ್ಘಾಟಣೆ ಮಾಡಿ ಮಾಹಿತಿ ನೀಡಿದರು. ಮುಂದೆ ಸುಮಾರು 2 ಗಂಟೆಗಳ ಕಾಲ ವಂದನೀಯ ಪಾ| ಪಾವೊಸ್ತಿನ್ ಲೋಬೊ ಅವರು ಆಯೋಗದ ಬಗ್ಗೆ ಸವಿಸ್ತಾರವಾದ ವಿವರ ನೀಡಿದರು.
ವೇದಿಕೆಯಲ್ಲಿ ಸಿಟಿ ವಲಯದ ವಿಕಾರ್ ವಾರ್ ವಂ| ಪಾ| ಜೇಮ್ಸ್ ಡಿ’ಸೋಜ ಅವರು ಕಾರ್ಯಗಾರದ ಮಹತ್ವ ವಿವರಿಸಿ ಸ್ವಾಗತಿಸಿದರು. ವಂ| ಪಾ| ವಿಜಯ್ ಮೊಂತೆರೋ ಅವರು ಪ್ರಾರ್ಥನಾ ವಿದಿ ನೆರವೇರಿಸಿದರು.
ವ| ಪಾ| ಕ್ಲಾನೀ ಡಿ’ಸೋಜಾ, ವಂ| ಪಾ| ಆಲ್ವಿನ್ ಡಿ’ಸೋಜ, ಕೊರ್ಡೆಲ್ ಚರ್ಚಿನ ಪ್ರಧಾನ ಧರ್ಮಗುರುಗಳಾದ ವಂ| ಪಾ| ಕ್ಲಿಫರ್ಡ್ ಫೆರ್ನಾಂಡಿಸ್, ಧರ್ಮಪ್ರಾಂತ್ಯದ ಸಾರ್ವಜನಿಕ ಅಧಿಕಾರಿ ರೋಯ್ ಕ್ಯಾಸ್ಟಲೀನೊ ಉಪಸ್ಥಿತರಿದ್ದರು. ಕಾರ್ಯಾಗಾರದಲ್ಲಿ ಎಲ್ಲಾ ಚರ್ಚುಗಳ ಧರ್ಮಗುರುಗಳು, ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಆಯೋಗದ ಸಂಚಾಲಕರು, ಧರ್ಮ ಭಗಿನಿಯರು ಭಾಗವಹಿಸಿದ್ದರು.
ಆಂಜೆಲೋರ್ ಚರ್ಚಿನ ಪ್ರಧಾನ ಧರ್ಮಗುರುಗಳಾದ ವಂ| ಪಾ| ಫೆಡ್ರಿಕ್ ಮೊಂತೇರೊ ಅವರು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಸಂತೋಷ್ ಡಿ’ಕೋಸ್ತಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು