4:15 PM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಕುಲಶೇಖರದ ಹೋಲಿ ಕ್ರಾಸ್ ಚರ್ಚಿನ ಸಭಾಂಗಣದಲ್ಲಿ 21 ಆಯೋಗದ ಸದಸ್ಯರಿಗೆ ಕಾರ್ಯಾಗಾರ

24/10/2024, 14:55

ಮಂಗಳೂರು(reporterkarnataka.com):ಮಂಗಳೂರು ಧರ್ಮಪ್ರಾಂತ್ಯದ ಸಿಟಿ ವಲಯದ ವ್ಯಾಪ್ತಿಯಲ್ಲಿ ಬರುವ ಕುಲಶೇಖರ, ಬೊಂದೇಲ್, ನೀರುಮಾರ್ಗ, ಪಾಲ್ದನೆ, ಬಜಾಲ್, ಕೆಲರೈ, ದೇರೆಬೈಲ್, ಪೆರ್ಮಯ್, ವಾಮಂಜೂರು, ಅಂಜೆಲೊರ್, ಶಕ್ತನಗರ ಇದರ 21 ಆಯೋಗದ ಸದಸ್ಯರಿಗೆ ಕಾರ್ಯಾಗಾರವನ್ನು ನಗರದ ಕುಲಶೇಖರದ ಹೋಲಿ ಕ್ರಾಸ್ ಚರ್ಚಿನ ಸಭಾಂಗಣದಲ್ಲಿ ಏರ್ಪಡಿಸಲಾಗಿತು.
ಈ ಕಾರ್ಯಾಗಾರದಲ್ಲಿ ಚರ್ಚಿನ 21 ಆಯೋಗದ ಸದಸ್ಯರಿಗೆ ಮಾಹಿತಿ, ವಿಚಾರ ವಿನಿಮಯ, ಸಂದೇಹಗಳಿಗೆ ಉತ್ತರ ನೀಡುವ ಮೂಲಕ ಸಹಕಾರಿಯಾಯಿತು. ಕಾರ್ಯಾಗಾರದಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ| ಪೀಟರ್ ಪಾವುಲ್ ಸಲ್ಡಾನ ಅವರು ಕಾರ್ಯಾಗಾರದ ಉದ್ಘಾಟಣೆ ಮಾಡಿ ಮಾಹಿತಿ ನೀಡಿದರು. ಮುಂದೆ ಸುಮಾರು 2 ಗಂಟೆಗಳ ಕಾಲ ವಂದನೀಯ ಪಾ| ಪಾವೊಸ್ತಿನ್ ಲೋಬೊ ಅವರು ಆಯೋಗದ ಬಗ್ಗೆ ಸವಿಸ್ತಾರವಾದ ವಿವರ ನೀಡಿದರು.
ವೇದಿಕೆಯಲ್ಲಿ ಸಿಟಿ ವಲಯದ ವಿಕಾರ್ ವಾರ್ ವಂ| ಪಾ| ಜೇಮ್ಸ್ ಡಿ’ಸೋಜ ಅವರು ಕಾರ್ಯಗಾರದ ಮಹತ್ವ ವಿವರಿಸಿ ಸ್ವಾಗತಿಸಿದರು. ವಂ| ಪಾ| ವಿಜಯ್ ಮೊಂತೆರೋ ಅವರು ಪ್ರಾರ್ಥನಾ ವಿದಿ ನೆರವೇರಿಸಿದರು.
ವ| ಪಾ| ಕ್ಲಾನೀ ಡಿ’ಸೋಜಾ, ವಂ| ಪಾ| ಆಲ್ವಿನ್ ಡಿ’ಸೋಜ, ಕೊರ್ಡೆಲ್ ಚರ್ಚಿನ ಪ್ರಧಾನ ಧರ್ಮಗುರುಗಳಾದ ವಂ| ಪಾ| ಕ್ಲಿಫರ್ಡ್ ಫೆರ್ನಾಂಡಿಸ್, ಧರ್ಮಪ್ರಾಂತ್ಯದ ಸಾರ್ವಜನಿಕ ಅಧಿಕಾರಿ ರೋಯ್ ಕ್ಯಾಸ್ಟಲೀನೊ ಉಪಸ್ಥಿತರಿದ್ದರು. ಕಾರ್ಯಾಗಾರದಲ್ಲಿ ಎಲ್ಲಾ ಚರ್ಚುಗಳ ಧರ್ಮಗುರುಗಳು, ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಆಯೋಗದ ಸಂಚಾಲಕರು, ಧರ್ಮ ಭಗಿನಿಯರು ಭಾಗವಹಿಸಿದ್ದರು.
ಆಂಜೆಲೋರ್ ಚರ್ಚಿನ ಪ್ರಧಾನ ಧರ್ಮಗುರುಗಳಾದ ವಂ| ಪಾ| ಫೆಡ್ರಿಕ್ ಮೊಂತೇರೊ ಅವರು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಸಂತೋಷ್ ಡಿ’ಕೋಸ್ತಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು