12:00 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಇಲ್ಲಿ ಕುಡಿಯುವ ನೀರಿನಲ್ಲೇ ಖಾಸಗಿ ಬಸ್ಸಿಗೆ ನಿತ್ಯ ಸ್ನಾನ!: ಗಬ್ಬೇದ್ದ ಖಾಸಗಿ ಬಸ್ ನಿಲ್ದಾಣ; ನಾಗರಿಕರ ಆಕ್ರೋಶ

24/10/2024, 22:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಖಾಸಗಿ ಬಸ್ ನಿಲ್ದಾಣದಲ್ಲಿ ಕುಡಿಯುವ ಟ್ಯಾಂಕ್ ನೀರು ಬಳಸಿ ಖಾಸಗಿ ಬಸ್ ಸಿಬ್ಬಂದಿ ಬಸ್ ತೊಳೆದು ಪರಿಸರ ಕಲುಷಿತಗೊಳಿಸುವ ಘಟನೆ ನಡೆದಿದೆ.

ಬೆಂಗಳೂರಿನ ಕಾವೇರಿ ಬಸ್ ನ ಸಿಬ್ಬಂದಿಯೋರ್ವರು ಬಸ್ ಅನ್ನು ಅಲ್ಲೇ ತೊಳೆಯುವ ಮೂಲಕ ಬಸ್ ನಿಲ್ದಾಣ ಅವ್ಯವಸ್ಥೆಯ ಅಗರವಾಗಿದೆ. ಬಸ್ ತೊಳೆದ ನೀರು ಚರಂಡಿ ಇಲ್ಲದೇ ಬಂದ್ ಆಗಿರುವುದರಿಂದ ಬಸ್ ನಿಲ್ದಾಣ ನೀರು ತುಂಬಿಕೊಂಡು ರಸ್ತೆಯ ಡಾಂಬಾರು ಕೂಡ ಹಾಳಾಗುತ್ತಿದೆ. ಮೊದಲೇ ಮಳೆಯಿಂದ ಗುಂಡಿ ಬಿದ್ದಿರುವ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನಿಂದ ಬಸ್ ತೊಳೆದು ಜನರಿಗೆ ಕುಡಿಯುವ ನೀರಿಗೆ ಕೊರತೆ ಉಂಟು ಮಾಡುತ್ತಿದ್ದಾರೆ. ಅಲ್ಲದೇ ಅನೇಕ ಸಮಯದಿಂದ ಕಾವೇರಿ ಬಸ್ ಸಿಬ್ಬಂದಿಗಳು ಈ ಬಗ್ಗೆ ಕೇಳಿದರೆ ಉಡಾಫೆ ಮಾತನಾಡುತ್ತಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಕೊಟ್ಟಿಗೆಹಾರ ಖಾಸಗಿ ಬಸ್ ನಿಲ್ದಾಣ ಅವ್ಯವಸ್ಥೆಯ ಅಗರವಾಗಿದೆ. ಈ ಬೆನ್ನಲ್ಲೇ ಖಾಸಗಿ ಬೆಂಗಳೂರಿಗೆ ರಾತ್ರಿ ಬಿಡುವ ಕಾವೇರಿ ಬಸ್ ನಿತ್ಯ ಬಸ್ ನಿಲ್ದಾಣವೆಲ್ಲ ನೀರುಮಯ ಮಾಡಿ ಸಾಗುತ್ತಿದ್ದು ಇದರಿಂದ ಸಮಸ್ಯೆಯಾಗಿದೆ. ಸಂಬಂಧಿಸಿದ ಅಧಿಕಾರಿಗಳು ಬಸ್ ಸಿಬ್ಬಂದಿಯ ವಿರುದ್ದ ಸೂಕ್ತ ಕ್ರಮ ಜರುಗಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು