12:02 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಇಲ್ಲಿ ಕುಡಿಯುವ ನೀರಿನಲ್ಲೇ ಖಾಸಗಿ ಬಸ್ಸಿಗೆ ನಿತ್ಯ ಸ್ನಾನ!: ಗಬ್ಬೇದ್ದ ಖಾಸಗಿ ಬಸ್ ನಿಲ್ದಾಣ; ನಾಗರಿಕರ ಆಕ್ರೋಶ

24/10/2024, 22:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಖಾಸಗಿ ಬಸ್ ನಿಲ್ದಾಣದಲ್ಲಿ ಕುಡಿಯುವ ಟ್ಯಾಂಕ್ ನೀರು ಬಳಸಿ ಖಾಸಗಿ ಬಸ್ ಸಿಬ್ಬಂದಿ ಬಸ್ ತೊಳೆದು ಪರಿಸರ ಕಲುಷಿತಗೊಳಿಸುವ ಘಟನೆ ನಡೆದಿದೆ.

ಬೆಂಗಳೂರಿನ ಕಾವೇರಿ ಬಸ್ ನ ಸಿಬ್ಬಂದಿಯೋರ್ವರು ಬಸ್ ಅನ್ನು ಅಲ್ಲೇ ತೊಳೆಯುವ ಮೂಲಕ ಬಸ್ ನಿಲ್ದಾಣ ಅವ್ಯವಸ್ಥೆಯ ಅಗರವಾಗಿದೆ. ಬಸ್ ತೊಳೆದ ನೀರು ಚರಂಡಿ ಇಲ್ಲದೇ ಬಂದ್ ಆಗಿರುವುದರಿಂದ ಬಸ್ ನಿಲ್ದಾಣ ನೀರು ತುಂಬಿಕೊಂಡು ರಸ್ತೆಯ ಡಾಂಬಾರು ಕೂಡ ಹಾಳಾಗುತ್ತಿದೆ. ಮೊದಲೇ ಮಳೆಯಿಂದ ಗುಂಡಿ ಬಿದ್ದಿರುವ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನಿಂದ ಬಸ್ ತೊಳೆದು ಜನರಿಗೆ ಕುಡಿಯುವ ನೀರಿಗೆ ಕೊರತೆ ಉಂಟು ಮಾಡುತ್ತಿದ್ದಾರೆ. ಅಲ್ಲದೇ ಅನೇಕ ಸಮಯದಿಂದ ಕಾವೇರಿ ಬಸ್ ಸಿಬ್ಬಂದಿಗಳು ಈ ಬಗ್ಗೆ ಕೇಳಿದರೆ ಉಡಾಫೆ ಮಾತನಾಡುತ್ತಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಕೊಟ್ಟಿಗೆಹಾರ ಖಾಸಗಿ ಬಸ್ ನಿಲ್ದಾಣ ಅವ್ಯವಸ್ಥೆಯ ಅಗರವಾಗಿದೆ. ಈ ಬೆನ್ನಲ್ಲೇ ಖಾಸಗಿ ಬೆಂಗಳೂರಿಗೆ ರಾತ್ರಿ ಬಿಡುವ ಕಾವೇರಿ ಬಸ್ ನಿತ್ಯ ಬಸ್ ನಿಲ್ದಾಣವೆಲ್ಲ ನೀರುಮಯ ಮಾಡಿ ಸಾಗುತ್ತಿದ್ದು ಇದರಿಂದ ಸಮಸ್ಯೆಯಾಗಿದೆ. ಸಂಬಂಧಿಸಿದ ಅಧಿಕಾರಿಗಳು ಬಸ್ ಸಿಬ್ಬಂದಿಯ ವಿರುದ್ದ ಸೂಕ್ತ ಕ್ರಮ ಜರುಗಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು