2:06 AM Monday21 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಇಲ್ಲಿ ಕುಡಿಯುವ ನೀರಿನಲ್ಲೇ ಖಾಸಗಿ ಬಸ್ಸಿಗೆ ನಿತ್ಯ ಸ್ನಾನ!: ಗಬ್ಬೇದ್ದ ಖಾಸಗಿ ಬಸ್ ನಿಲ್ದಾಣ; ನಾಗರಿಕರ ಆಕ್ರೋಶ

24/10/2024, 22:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಖಾಸಗಿ ಬಸ್ ನಿಲ್ದಾಣದಲ್ಲಿ ಕುಡಿಯುವ ಟ್ಯಾಂಕ್ ನೀರು ಬಳಸಿ ಖಾಸಗಿ ಬಸ್ ಸಿಬ್ಬಂದಿ ಬಸ್ ತೊಳೆದು ಪರಿಸರ ಕಲುಷಿತಗೊಳಿಸುವ ಘಟನೆ ನಡೆದಿದೆ.

ಬೆಂಗಳೂರಿನ ಕಾವೇರಿ ಬಸ್ ನ ಸಿಬ್ಬಂದಿಯೋರ್ವರು ಬಸ್ ಅನ್ನು ಅಲ್ಲೇ ತೊಳೆಯುವ ಮೂಲಕ ಬಸ್ ನಿಲ್ದಾಣ ಅವ್ಯವಸ್ಥೆಯ ಅಗರವಾಗಿದೆ. ಬಸ್ ತೊಳೆದ ನೀರು ಚರಂಡಿ ಇಲ್ಲದೇ ಬಂದ್ ಆಗಿರುವುದರಿಂದ ಬಸ್ ನಿಲ್ದಾಣ ನೀರು ತುಂಬಿಕೊಂಡು ರಸ್ತೆಯ ಡಾಂಬಾರು ಕೂಡ ಹಾಳಾಗುತ್ತಿದೆ. ಮೊದಲೇ ಮಳೆಯಿಂದ ಗುಂಡಿ ಬಿದ್ದಿರುವ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನಿಂದ ಬಸ್ ತೊಳೆದು ಜನರಿಗೆ ಕುಡಿಯುವ ನೀರಿಗೆ ಕೊರತೆ ಉಂಟು ಮಾಡುತ್ತಿದ್ದಾರೆ. ಅಲ್ಲದೇ ಅನೇಕ ಸಮಯದಿಂದ ಕಾವೇರಿ ಬಸ್ ಸಿಬ್ಬಂದಿಗಳು ಈ ಬಗ್ಗೆ ಕೇಳಿದರೆ ಉಡಾಫೆ ಮಾತನಾಡುತ್ತಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಕೊಟ್ಟಿಗೆಹಾರ ಖಾಸಗಿ ಬಸ್ ನಿಲ್ದಾಣ ಅವ್ಯವಸ್ಥೆಯ ಅಗರವಾಗಿದೆ. ಈ ಬೆನ್ನಲ್ಲೇ ಖಾಸಗಿ ಬೆಂಗಳೂರಿಗೆ ರಾತ್ರಿ ಬಿಡುವ ಕಾವೇರಿ ಬಸ್ ನಿತ್ಯ ಬಸ್ ನಿಲ್ದಾಣವೆಲ್ಲ ನೀರುಮಯ ಮಾಡಿ ಸಾಗುತ್ತಿದ್ದು ಇದರಿಂದ ಸಮಸ್ಯೆಯಾಗಿದೆ. ಸಂಬಂಧಿಸಿದ ಅಧಿಕಾರಿಗಳು ಬಸ್ ಸಿಬ್ಬಂದಿಯ ವಿರುದ್ದ ಸೂಕ್ತ ಕ್ರಮ ಜರುಗಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು