2:29 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಇಲ್ಲಿ ಕುಡಿಯುವ ನೀರಿನಲ್ಲೇ ಖಾಸಗಿ ಬಸ್ಸಿಗೆ ನಿತ್ಯ ಸ್ನಾನ!: ಗಬ್ಬೇದ್ದ ಖಾಸಗಿ ಬಸ್ ನಿಲ್ದಾಣ; ನಾಗರಿಕರ ಆಕ್ರೋಶ

24/10/2024, 22:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಖಾಸಗಿ ಬಸ್ ನಿಲ್ದಾಣದಲ್ಲಿ ಕುಡಿಯುವ ಟ್ಯಾಂಕ್ ನೀರು ಬಳಸಿ ಖಾಸಗಿ ಬಸ್ ಸಿಬ್ಬಂದಿ ಬಸ್ ತೊಳೆದು ಪರಿಸರ ಕಲುಷಿತಗೊಳಿಸುವ ಘಟನೆ ನಡೆದಿದೆ.

ಬೆಂಗಳೂರಿನ ಕಾವೇರಿ ಬಸ್ ನ ಸಿಬ್ಬಂದಿಯೋರ್ವರು ಬಸ್ ಅನ್ನು ಅಲ್ಲೇ ತೊಳೆಯುವ ಮೂಲಕ ಬಸ್ ನಿಲ್ದಾಣ ಅವ್ಯವಸ್ಥೆಯ ಅಗರವಾಗಿದೆ. ಬಸ್ ತೊಳೆದ ನೀರು ಚರಂಡಿ ಇಲ್ಲದೇ ಬಂದ್ ಆಗಿರುವುದರಿಂದ ಬಸ್ ನಿಲ್ದಾಣ ನೀರು ತುಂಬಿಕೊಂಡು ರಸ್ತೆಯ ಡಾಂಬಾರು ಕೂಡ ಹಾಳಾಗುತ್ತಿದೆ. ಮೊದಲೇ ಮಳೆಯಿಂದ ಗುಂಡಿ ಬಿದ್ದಿರುವ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನಿಂದ ಬಸ್ ತೊಳೆದು ಜನರಿಗೆ ಕುಡಿಯುವ ನೀರಿಗೆ ಕೊರತೆ ಉಂಟು ಮಾಡುತ್ತಿದ್ದಾರೆ. ಅಲ್ಲದೇ ಅನೇಕ ಸಮಯದಿಂದ ಕಾವೇರಿ ಬಸ್ ಸಿಬ್ಬಂದಿಗಳು ಈ ಬಗ್ಗೆ ಕೇಳಿದರೆ ಉಡಾಫೆ ಮಾತನಾಡುತ್ತಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಕೊಟ್ಟಿಗೆಹಾರ ಖಾಸಗಿ ಬಸ್ ನಿಲ್ದಾಣ ಅವ್ಯವಸ್ಥೆಯ ಅಗರವಾಗಿದೆ. ಈ ಬೆನ್ನಲ್ಲೇ ಖಾಸಗಿ ಬೆಂಗಳೂರಿಗೆ ರಾತ್ರಿ ಬಿಡುವ ಕಾವೇರಿ ಬಸ್ ನಿತ್ಯ ಬಸ್ ನಿಲ್ದಾಣವೆಲ್ಲ ನೀರುಮಯ ಮಾಡಿ ಸಾಗುತ್ತಿದ್ದು ಇದರಿಂದ ಸಮಸ್ಯೆಯಾಗಿದೆ. ಸಂಬಂಧಿಸಿದ ಅಧಿಕಾರಿಗಳು ಬಸ್ ಸಿಬ್ಬಂದಿಯ ವಿರುದ್ದ ಸೂಕ್ತ ಕ್ರಮ ಜರುಗಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು