11:34 AM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಅ. 27: ಸಿಪಿಎಂ ಮಂಗಳೂರು ನಗರ ದಕ್ಷಿಣ ಸಮ್ಮೇಳನ; ಸಂಜೆ ಬಹಿರಂಗ ಸಭೆ

25/10/2024, 10:59

ಮಂಗಳೂರು(reporterkarnataka.com): ಸಿಪಿಎಂ ಮಂಗಳೂರು ನಗರ ದಕ್ಷಿಣ ಸಮ್ಮೇಳನ ಅಕ್ಟೋಬರ್ 27 ರಂದು ನಗರದ ಕೊಟ್ಟಾರ ಚೌಕಿಯ ವಿ.ಎಸ್.ಕೆ. ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಸಿಪಿಎಂ ಪಕ್ಷದ 24ನೇ ಅಖಿಲ ಭಾರತ ಮಹಾ ಅಧಿವೇಶನ 2025 ಎಪ್ರಿಲ್ ನಲ್ಲಿ ಮಧುರೈ ನಲ್ಲಿ ಆರು ದಿನಗಳ ಕಾಲ ನಡೆಯಲಿದೆ. ಅದರ ಪೂರ್ವ ಭಾವಿಯಾಗಿ ಎಲ್ಲ ಹಂತಗಳ ಸಮ್ಮೇಳನಗಳು ದೇಶಾದ್ಯಂತ ಆರಂಭಗೊಂಡಿವೆ. ದ.ಕ. ಜಿಲ್ಲೆಯಲ್ಲಿಯೂ ಸಮ್ಮೇಳನದ ಪ್ರಕ್ರಿಯೆಗಳು ಆರಂಭಗೊಂಡಿದೆ. ಮಂಗಳೂರು ನಗರ ದಕ್ಷಿಣ ಸಮ್ಮೇಳನವು ಉರ್ವಸ್ಟೋರಿನಲ್ಲಿ ಕಾಮ್ರೇಡ್ ಸೀತಾರಾಮ್ ಯೆಚೂರಿ ವೇದಿಕೆ, ಕಾಮ್ರೇಡ್ ಕೊರಗಪ್ಪ ಶೆಟ್ಟಿ ಸಭಾಂಗಣ ಹಾಗೂ ಕಾಂ ಜೆರಿ ಪತ್ರಾವೋ ನಗರದಲ್ಲಿ ಹಮ್ಮಿಕೊಳ್ಳಲಾಗಿದೆ. ಅಕ್ಟೋಬರ್ 27 ರಂದು ಬೆಳಿಗ್ಗೆ 9:30ಕ್ಕೆ ಧ್ವಜಾರೋಹಣದೊಂದಿಗೆ ಸಮ್ಮೇಳನಕ್ಕೆ ಚಾಲನೆ ದೊರೆಯಲಿದೆ. ಸಿಪಿಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ ಯಾದವ ಶೆಟ್ಟಿ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರುಗಳಾದ ಜೆ ಬಾಲಕೃಷ್ಣಶೆಟ್ಟಿ, ಪದ್ಮಾವತಿ ಶೆಟ್ಟಿ, ಸುನೀಲ್ ಕುಮಾರ್ ಬಜಾಲ್ ಮಾರ್ಗದರ್ಶಕರಾಗಿ ಉಪಸ್ಥಿತರಿರುತ್ತಾರೆ. ಆ ನಂತರ ಸಮ್ಮೇಳನದ ಪ್ರತಿನಿಧಿ ಕಲಾಪಗಳು ನಡೆಯಲಿವೆ .ಅದೇ ದಿನ ಸಂಜೆ 4 ಗಂಟೆಗೆ ಸಭಾಂಗಣದ ವಠಾರದಿಂದ ಉರ್ವಸ್ಟೋರ್ ಜಂಕ್ಷನ್ ವರೆಗೆ ಆಕರ್ಷಕ ಮೆರವಣೆಗೆ ಹಾಗೂ ಕಾಂ ಚಂದು ಭಂಡಾರಿ ವೇದಿಕೆ, ಕಾಂ ಸುಂದರ ಸಾಲ್ಯಾನ್ ನಗರದಲ್ಲಿ ಬಹಿರಂಗ ಸಭೆ ನಡೆಯಲಿದೆ. ಈ ಬಹಿರಂಗ ಸಭೆಗೆ ಪ್ರಮುಖ ಭಾಷಣಗಾರರಾಗಿ ಸಿಪಿಐಎಂ ಪಕ್ಷದ ಕರ್ನಾಟಕ ರಾಜ್ಯ ಮುಖಂಡರಾದ ಕೆ ಮಹಾಂತೇಶ್ ಭಾಗವಹಿಸಲಿದ್ದಾರೆ ಎಂದು ಸಿಪಿಐಎಂ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸಂತೋಷ್ ಬಜಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು