8:22 PM Sunday29 - March 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಪಂಡರಾಪುರ ಶ್ರೀಪಾಂಡುರಂಗ ದರ್ಶನಕ್ಕೆ ಭಕ್ತರ ದಂಡು ಪಾದಯಾತ್ರೆ

27/10/2024, 23:37

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಮಹಾರಾಷ್ಟ್ರದ ಪಂಡರಾಪುರ ಶ್ರೀಪಾಂಡುರಂಗ ದೇವರ ಸನ್ನಿದೆಗೆ, ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ. ತಳವಾರಹಟ್ಟಿ ಬಳಗಟ್ಟ ಗ್ರಾಮದ ಪಂಡರಾಪುರ ಶ್ರೀಪ‍ಾಂಡು ರಂಗ ಸ್ವಾಮಿ ಪಾದಯಾತ್ರೆ ಭಕ್ತರ ಸೇವಾ ಸಮಿತಿ, ಸತತ 11ನೇ ವರ್ಷದ ಪಾದಯಾತ್ರೆ ಹಮ್ಮಿಕೊಂಡಿದ್ದು. ಪಾದಾಯಾತ್ರೆ ಭಕ್ತರ ದಂಡು ಅಕ್ಟೋಬರ್‌ 26ರಂದು ಸಂಜೆ, ಕೂಡ್ಲಿಗಿ ಪಟ್ಟಣ ಪ್ರವೇಶಿಸಿ ಶ್ರೀಕೊತ್ತಲಾಂಜನೇಯ ಫೇವಸ್ಥಾನದಲ್ಲಿ ಕೆಲ ಹೊತ್ತು ವಿಶ್ರಮಿಸಿತ್ತು.


ಪಾದಯಾತ್ರೆ ತಂಡದಲ್ಲಿ ಮಹಿಳಾ ಭಕ್ತರು ಯುವಕರು ವೃದ್ಧರಾದಿ‌ಯಾಗಿ, ಒಟ್ಟು ಮೂವತ್ತು ಜನರುಳ್ಳ ಭಕ್ತರ ದಂಡು ಭಜನೆ ಮಾಡುತ್ತಲೆ ಪ‍ಾದಯಾತ್ರೆ ಮೂಲಕ ಮುಂದೆ ತೆರಳಿತು. ಪ್ರತಿ ದಿನ ಒಂದಕ್ಕೆ ಇಪ್ಪತ್ತೈದು ಮೂವತ್ತು ಕಿಲೋ ಮೀಟರ್ ದೂರಾ, ಪಾದಯಾತ್ರೆ ಮೂಲಕ ಕ್ರಮಿಸುವ ತಂಡ. ದಾರಿಯುದ್ದಕ್ಕೂ ಶ್ರೀರಂಗನ ಜಪ ತಪ ನಾಮಸ್ಮರಣೆ ಮಾಡುತ್ತ, ಪಂಡರಾಪುರ ಶ್ರೀರಂಗನ ಭಜನೆಗಳನ್ನು ಆಡುಗಳನ್ನು ಹಾಡುತ್ತ. ತಳಕ್ಕೆ ತಕ್ಕಬಹಾಗೆ ಕುಣಿಯುತ್ತ ನಲಿಯುತ್ತ, ಮಾರ್ಗ ಮದ್ಯದಲ್ಲಿ ಬರುವ ಗ್ರಾಮ ಪಟ್ಟಣಗಳ ಭಕ್ತರು. ಪಾದಯಾತ್ತಿಕರನ್ನು ಬರ ಮಾಡಿಕೊಂಡು, ಆಹ್ವಾನಿಸಿ ಭಕ್ತರು ನೀಡುವ ಆತಿಥ್ಯವನ್ನು ಸ್ವೀಕರಿಸಿ. ಅಗತ್ಯವಿದ್ದಲ್ಲಿ ಹತ್ತಿರದ ದೇವಸ್ಥಾನದಲ್ಲಿ ರಾತ್ರಿ ಹೊತ್ತಲ್ಲಿ ತಂಗಿ ಬೆಳಿಗ್ಗೆ ಹೊರಡುತ್ತಾರೆ, ಮಧ್ಯಾಹ್ನದ ಬಿರು ಬಿಸಿಲಿದ್ದಲ್ಲಿ ಊಟ ಉಪಹಾರಾದಿಗಳನ್ನು ಸ್ವೀಕರಿಸಿ. ಕೆಲ ಹೊತ್ತು ವಿಶ್ರಮಿಸಿ ಧಣಿವಾರಿದ ನಂತರ, ಮತ್ತೆ ಅವರ ಪಾದಯಾತ್ರೆ ಪುನರಾರಂಭಗೊಳ್ಳುತ್ತದೆ. ಹೀಗೆ ಪಂಡರಾ ಪುರಕ್ಕೆ ಬಹು ದೂರದೂರಿನ ಭಕ್ತರು, ಸಾವಿರಾರು ಕಿ ಮೀ ದೂರದಿಂದ. ನಿರಂತರ ಪಾದಯಾತ್ರೆ ಮೂಲಕ ಕ್ರಮಿಸಿ, ಶ್ರದ್ಧೆ ಭಕ್ತಿಯಿಂದ ಪಾಂಡುರಂಗನನ್ನು ಭಜಿಸುತ್ತ. ನೆರೆ ರ‍ಾಜ್ಯ ಮಹರಾಷ್ಟ್ರದಲ್ಲಿರುವ, ಪಂಡರಾಪುರ ಸುಕ್ಷೇತ್ರಕ್ಕೆ ಭಕ್ತರ ದಂಡು ತಮ್ಮ ಪಾದಯಾತ್ರೆ ಯಶಸ್ವೀಗೊಳಿಸಿ ಸಮಾಪ್ತಿ ಗೊಳಿಸುತ್ತಾರೆ. ಇದೇ ರೀತಿ ನೂರಾರು ಕಿಮೀ ದೂರದ ಕರ್ನಾಟಕದ ಮೂಲೆ ಮೂಲೆಯ ಗಡಿ ಗ್ರ‍ಾಮಗಳಿಂದ, ಸತತ ಹತ್ತಾರು ವರ್ಷಗಳಿಂದ ಪಾದಯಾತ್ರೆ ಹಮ್ಮಿಕೊಳ್ಳುತ್ತಾರೆ. ಗ್ರಾಮವೊಂದರಿಂದ ಇಪ್ಪತ್ತೇದು ಮೂವತ್ತು ಪಾಂಡು ರಂಗ ಭಕ್ತರ ದಂಡು, ನೆರೆ ಹೊರೆಯ ಗ್ರಾಮಗಳ ಭಕ್ತರೊಂದಿಗೆ ಸೇರಿ. ಐವತ್ತರಿಂದ ಎಪ್ಪತ್ತು ನೂರು ಭಕ್ತರಿರುವ ಪಾದಯಾತ್ರಿಕರ ದಂಡು, ಒಟ್ಟೊಟ್ಟಾಗಿ ಪಂಡರಾಪುರಕ್ಕೆ ಪಾದಯಾತ್ರೆ ಮೂಲಕ ತೆರಳಿ. ಶ್ರದ್ಧಾ ಭಕ್ತಿಯಿಂದ ‍ಅರಾಧಿಸಿ ದೇವರ ದರ್ಶನ ಪಡೆದು, ಧಾರ್ಮಿಕ ವಿಧಿ ವಿದಾನಗಳನ್ನು ಮುಗಿಸಿಕೊಂಡು ತಮ್ಮೂರಿಗೆ ಸಂಚಾರಿ ವಾಹನಗಳ ಮೂಲಕ ಪ್ರಯಾಣಿೆೆಸಿ ಮರಳುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು