11:53 PM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಅಧ್ಯಯನ ಪ್ರವಾಸ: ದಕ್ಷಿಣ ಕೊರಿಯಾಕ್ಕೆ ಸ್ಪೀಕರ್ ಖಾದರ್ ಭೇಟಿ; ಶಿಕ್ಷಣ, ಆರೋಗ್ಯ, ವ್ಯಾಪಾರ ಕುರಿತು ಚರ್ಚೆ

28/10/2024, 22:39

ಮಂಗಳೂರು(reporterkarnataka.com): ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್ ಅವರು ಕಾಮನ್‍ವೆಲ್ತ್ ಸಂಸದೀಯ ಸಂಘ, ಕರ್ನಾಟಕ ಶಾಖೆ ಇದರ ಪ್ರತಿನಿಧಿಯಾಗಿ ಆಸ್ಟ್ರೇಲಿಯಾ ದೇಶದ ಸಿಡ್ನಿಯಲ್ಲಿ ನವೆಂಬರ್ 5 ರಿಂದ 8ವರೆಗೆ ನಡೆಯಲಿರುವ 67ನೇ ಕಾಮನ್‍ವೆಲ್ತ್ ಸಂಸದೀಯ ಸಮ್ಮೇಳನದಲ್ಲಿ ಭಾಗವಹಿಸಲಿದ್ದು, ಈ ಸಂದರ್ಭದಲ್ಲಿ ಅಕ್ಟೋಬರ್ 25ರಿಂದ 28ರವರೆಗೆ ದಕ್ಷಿಣ ಕೊರಿಯಾ ದೇಶದಲ್ಲಿ ಅಧ್ಯಯನ ಪ್ರವಾಸ ಕೈಗೊಂಡರು.
ಈ ಅಧ್ಯಯನ ಪ್ರವಾಸ ಸಂದರ್ಭದಲ್ಲಿ ಸ್ಪೀಕರ್ ಅವರು ದಕ್ಷಿಣ ಕೊರಿಯಾದ ಸಿಯೋಲ್‍ನಲ್ಲಿ ಭಾರತದ ರಾಯಭಾರಿ ಅಮಿತ್ ಕುಮಾರ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಈ ಸಂದರ್ಭದಲ್ಲಿ ಉಭಯ ದೇಶಗಳ ಸಂಬಂಧಗಳು, ಶಿಕ್ಷಣ, ವ್ಯಾಪಾರ, ಆರೋಗ್ಯ, ಮಾಹಿತಿ ತಂತ್ರಜ್ಞಾನ ಕ್ಷೇತ್ರಗಳ ಕುರಿತು ಅನೌಪಚಾರಿಕವಾಗಿ ಚರ್ಚಿಸುತ್ತಾ, ದಕ್ಷಿಣ ಕೊರಿಯಾ ದೇಶದ. ಕರ್ನಾಟಕದಲ್ಲಿ ಹೂಡಿಕೆಯ ನಿರೀಕ್ಷೆಗಳು/ಅವಕಾಶಗಳ ಬಗ್ಗೆ ವಿಚಾರ ವಿನಿಮಯ ಮಾಡಿಕೊಂಡರು. ಸಭಾಧ್ಯಕ್ಷರು ಕರ್ನಾಟಕದ ವಿಶ್ವವಿದ್ಯಾಲಯಗಳು ಕೊರಿಯಾ ದೇಶದ ವಿಶ್ವವಿದ್ಯಾಲಯಗಳೊಂದಿಗೆ ಕಾಲೇಜುಗಳಲ್ಲಿನ ವಿವಿಧ ಕೋರ್ಸ್‍ಗಳ ಮತ್ತು ಉದ್ಯೋಗಾವಕಾಶಗಳ ಕುರಿತು ಪರಸ್ಪರ ಒಪ್ಪಂದಗಳನ್ನು ಮಾಡಿಕೊಳ್ಳುವ ಬಗ್ಗೆ ಭಾರತದ ರಾಯಭಾರಿಗಳೊಂದಿಗೆ ಚರ್ಚಿಸಿದರು.
ಉಭಯ ದೇಶಗಳ ಮೂಲಸೌಲಭ್ಯಗಳು, ಆರ್ಥಿಕತೆ ಕುರಿತಾಗಿ ಚರ್ಚಿಸಿ ಈ ಭೇಟಿಯು ಫಲಪ್ರದವಾಗಿದ್ದು, ವಿಶೇಷವಾಗಿ ದಕ್ಷಿಣ ಕೊರಿಯಾ ಮತ್ತು ಕರ್ನಾಟಕದ ನಡುವಿನ ಸಂಬಂಧಗಳು ಇನ್ನು ಹೆಚ್ಚಿನ ರೀತಿ ಬೆಳೆಯಲಿ ಎಂದು ಸಭಾಧ್ಯಕ್ಷರು ಆಶಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು