10:44 AM Tuesday23 - December 2025
ಬ್ರೇಕಿಂಗ್ ನ್ಯೂಸ್
ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ

ಇತ್ತೀಚಿನ ಸುದ್ದಿ

ಅಧ್ಯಯನ ಪ್ರವಾಸ: ದಕ್ಷಿಣ ಕೊರಿಯಾಕ್ಕೆ ಸ್ಪೀಕರ್ ಖಾದರ್ ಭೇಟಿ; ಶಿಕ್ಷಣ, ಆರೋಗ್ಯ, ವ್ಯಾಪಾರ ಕುರಿತು ಚರ್ಚೆ

28/10/2024, 22:39

ಮಂಗಳೂರು(reporterkarnataka.com): ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್ ಅವರು ಕಾಮನ್‍ವೆಲ್ತ್ ಸಂಸದೀಯ ಸಂಘ, ಕರ್ನಾಟಕ ಶಾಖೆ ಇದರ ಪ್ರತಿನಿಧಿಯಾಗಿ ಆಸ್ಟ್ರೇಲಿಯಾ ದೇಶದ ಸಿಡ್ನಿಯಲ್ಲಿ ನವೆಂಬರ್ 5 ರಿಂದ 8ವರೆಗೆ ನಡೆಯಲಿರುವ 67ನೇ ಕಾಮನ್‍ವೆಲ್ತ್ ಸಂಸದೀಯ ಸಮ್ಮೇಳನದಲ್ಲಿ ಭಾಗವಹಿಸಲಿದ್ದು, ಈ ಸಂದರ್ಭದಲ್ಲಿ ಅಕ್ಟೋಬರ್ 25ರಿಂದ 28ರವರೆಗೆ ದಕ್ಷಿಣ ಕೊರಿಯಾ ದೇಶದಲ್ಲಿ ಅಧ್ಯಯನ ಪ್ರವಾಸ ಕೈಗೊಂಡರು.
ಈ ಅಧ್ಯಯನ ಪ್ರವಾಸ ಸಂದರ್ಭದಲ್ಲಿ ಸ್ಪೀಕರ್ ಅವರು ದಕ್ಷಿಣ ಕೊರಿಯಾದ ಸಿಯೋಲ್‍ನಲ್ಲಿ ಭಾರತದ ರಾಯಭಾರಿ ಅಮಿತ್ ಕುಮಾರ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಈ ಸಂದರ್ಭದಲ್ಲಿ ಉಭಯ ದೇಶಗಳ ಸಂಬಂಧಗಳು, ಶಿಕ್ಷಣ, ವ್ಯಾಪಾರ, ಆರೋಗ್ಯ, ಮಾಹಿತಿ ತಂತ್ರಜ್ಞಾನ ಕ್ಷೇತ್ರಗಳ ಕುರಿತು ಅನೌಪಚಾರಿಕವಾಗಿ ಚರ್ಚಿಸುತ್ತಾ, ದಕ್ಷಿಣ ಕೊರಿಯಾ ದೇಶದ. ಕರ್ನಾಟಕದಲ್ಲಿ ಹೂಡಿಕೆಯ ನಿರೀಕ್ಷೆಗಳು/ಅವಕಾಶಗಳ ಬಗ್ಗೆ ವಿಚಾರ ವಿನಿಮಯ ಮಾಡಿಕೊಂಡರು. ಸಭಾಧ್ಯಕ್ಷರು ಕರ್ನಾಟಕದ ವಿಶ್ವವಿದ್ಯಾಲಯಗಳು ಕೊರಿಯಾ ದೇಶದ ವಿಶ್ವವಿದ್ಯಾಲಯಗಳೊಂದಿಗೆ ಕಾಲೇಜುಗಳಲ್ಲಿನ ವಿವಿಧ ಕೋರ್ಸ್‍ಗಳ ಮತ್ತು ಉದ್ಯೋಗಾವಕಾಶಗಳ ಕುರಿತು ಪರಸ್ಪರ ಒಪ್ಪಂದಗಳನ್ನು ಮಾಡಿಕೊಳ್ಳುವ ಬಗ್ಗೆ ಭಾರತದ ರಾಯಭಾರಿಗಳೊಂದಿಗೆ ಚರ್ಚಿಸಿದರು.
ಉಭಯ ದೇಶಗಳ ಮೂಲಸೌಲಭ್ಯಗಳು, ಆರ್ಥಿಕತೆ ಕುರಿತಾಗಿ ಚರ್ಚಿಸಿ ಈ ಭೇಟಿಯು ಫಲಪ್ರದವಾಗಿದ್ದು, ವಿಶೇಷವಾಗಿ ದಕ್ಷಿಣ ಕೊರಿಯಾ ಮತ್ತು ಕರ್ನಾಟಕದ ನಡುವಿನ ಸಂಬಂಧಗಳು ಇನ್ನು ಹೆಚ್ಚಿನ ರೀತಿ ಬೆಳೆಯಲಿ ಎಂದು ಸಭಾಧ್ಯಕ್ಷರು ಆಶಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು