5:31 AM Friday23 - January 2026
ಬ್ರೇಕಿಂಗ್ ನ್ಯೂಸ್
ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:…

ಇತ್ತೀಚಿನ ಸುದ್ದಿ

ನಾಯಿ ಅಡ್ಡ ಬಂದು ಬೈಕ್ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಸಾವು; ಶ್ವಾನ ಕೂಡ ಬಲಿ

01/11/2024, 20:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬೈಕಿಗೆ ಬೀದಿನಾಯಿ ಅಡ್ಡಬಂದು ಅಪಘಾತ ಸಂಭವಿಸಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೂಡಿಗೆರೆ ತಾಲ್ಲೂಕಿನ ಗೋಣಿಬೀಡು ಪಟ್ಟಣದಲ್ಲಿ ನಡೆದಿದೆ.
ಮೃತ ಯುವಕ ಗೋಣಿಬೀಡು ಸಮೀಪದ ಆನೆದಿಬ್ಬ ನಿವಾಸಿ ಜಾಫರ್ (24) ಎಂದು ಗುರುತಿಸಲಾಗಿದೆ.
ಆನೆದಿಬ್ಬ ಗ್ರಾಮದ ಇಸಾಕ್ ಎಂಬುವವರ ಪುತ್ರ ಜಾಫರ್ ಶುಕ್ರವಾರ ಬೆಳಿಗ್ಗೆ ಸಮೀಪದ ಬೆಟ್ಟದಮನೆಯ ಗ್ರಾಮದಲ್ಲಿ ತಾನು ಕೆಲಸ ಮಾಡಿದ್ದ ಹಣವನ್ನು ಪಡೆಯಲು ಹೋಗಿದ್ದರು ಎನ್ನಲಾಗಿದೆ. ಬೆಟ್ಟದಮನೆಯಿಂದ ವಾಪಾಸಾಗುತ್ತಿದ್ದ ವೇಳೆ ಗೋಣಿಬೀಡು ಪಟ್ಟಣ ವ್ಯಾಪ್ತಿಯಲ್ಲಿ ಬೀದಿನಾಯಿಯೊಂದು ಬೈಕಿಗೆ ಅಡ್ಡಬಂದಿದ್ದು, ಬೈಕ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಚರಂಡಿಗೆ ಮಗುಚಿದೆ. ಈ ಸಂದರ್ಭ ಚರಂಡಿಗೆ ಅಳವಡಿಸಿದ್ದ ಸಿಮೆಂಟ್ ಚಪ್ಪಡಿಗಳಿಗೆ ಜಾಫರ್ ತಲೆ ಹೊಡೆದಿದ್ದು, ತೀವ್ರ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ನಾಯಿಯೂ ಕೂಡ ಸ್ಥಳದಲ್ಲೇ ಮೃತಪಟ್ಟಿದೆ ಎಂದು ತಿಳಿದುಬಂದಿದೆ.
ಗೋಣಿಬೀಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಸ್ನೇಹಜೀವಿಯಾಗಿದ್ದ ಜಾಫರ್ ನಿಧನಕ್ಕೆ ಸ್ಥಳೀಯರು ಕಂಬನಿ ಮಿಡಿದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು