6:00 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ನಾಯಿ ಅಡ್ಡ ಬಂದು ಬೈಕ್ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಸಾವು; ಶ್ವಾನ ಕೂಡ ಬಲಿ

01/11/2024, 20:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬೈಕಿಗೆ ಬೀದಿನಾಯಿ ಅಡ್ಡಬಂದು ಅಪಘಾತ ಸಂಭವಿಸಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೂಡಿಗೆರೆ ತಾಲ್ಲೂಕಿನ ಗೋಣಿಬೀಡು ಪಟ್ಟಣದಲ್ಲಿ ನಡೆದಿದೆ.
ಮೃತ ಯುವಕ ಗೋಣಿಬೀಡು ಸಮೀಪದ ಆನೆದಿಬ್ಬ ನಿವಾಸಿ ಜಾಫರ್ (24) ಎಂದು ಗುರುತಿಸಲಾಗಿದೆ.
ಆನೆದಿಬ್ಬ ಗ್ರಾಮದ ಇಸಾಕ್ ಎಂಬುವವರ ಪುತ್ರ ಜಾಫರ್ ಶುಕ್ರವಾರ ಬೆಳಿಗ್ಗೆ ಸಮೀಪದ ಬೆಟ್ಟದಮನೆಯ ಗ್ರಾಮದಲ್ಲಿ ತಾನು ಕೆಲಸ ಮಾಡಿದ್ದ ಹಣವನ್ನು ಪಡೆಯಲು ಹೋಗಿದ್ದರು ಎನ್ನಲಾಗಿದೆ. ಬೆಟ್ಟದಮನೆಯಿಂದ ವಾಪಾಸಾಗುತ್ತಿದ್ದ ವೇಳೆ ಗೋಣಿಬೀಡು ಪಟ್ಟಣ ವ್ಯಾಪ್ತಿಯಲ್ಲಿ ಬೀದಿನಾಯಿಯೊಂದು ಬೈಕಿಗೆ ಅಡ್ಡಬಂದಿದ್ದು, ಬೈಕ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಚರಂಡಿಗೆ ಮಗುಚಿದೆ. ಈ ಸಂದರ್ಭ ಚರಂಡಿಗೆ ಅಳವಡಿಸಿದ್ದ ಸಿಮೆಂಟ್ ಚಪ್ಪಡಿಗಳಿಗೆ ಜಾಫರ್ ತಲೆ ಹೊಡೆದಿದ್ದು, ತೀವ್ರ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ನಾಯಿಯೂ ಕೂಡ ಸ್ಥಳದಲ್ಲೇ ಮೃತಪಟ್ಟಿದೆ ಎಂದು ತಿಳಿದುಬಂದಿದೆ.
ಗೋಣಿಬೀಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಸ್ನೇಹಜೀವಿಯಾಗಿದ್ದ ಜಾಫರ್ ನಿಧನಕ್ಕೆ ಸ್ಥಳೀಯರು ಕಂಬನಿ ಮಿಡಿದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು