1:02 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ತೊಕ್ಕೊಟ್ಟು ಸೇತುವೆಯ ತಗಡು ಶೀಟಿಗೆ ಬೈಕ್ ಡಿಕ್ಕಿ: ಸಹ ಸವಾರ ಸ್ಥಳದಲ್ಲೇ ಸಾವು; ಇನ್ನೋರ್ವ ಗಂಭೀರ

01/11/2024, 23:32

ಮಂಗಳೂರು(reporterkarnataka.com): ತೊಕ್ಕೊಟ್ಟು ಸಮೀಪದ ನೇತ್ರಾವತಿ ಸೇತುವೆ ಮೇಲೆ ಇಂದು ಸಂಜೆ ನಡೆದ ಬೈಕ್ ಅಪಘಾತದಲ್ಲಿ ಸಹ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಬಿ.ಸಿ.ರೋಡ್ ಸಮೀಪದ ಲೊರೆಟ್ಟೋ ಪದವು ನಿವಾಸಿ ಸಲ್ಮಾನ್ ಫಾರೀಶ್ (19) ಎಂದು ಗುರುತಿಸಲಾಗಿದೆ.


ಸೇತುವೆಗೆ ಅಳವಡಿಸಿದ ಕಬ್ಬಿಣದ ತಗಡು ಶೀಟ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸಹ ಸವಾರ ವಿದ್ಯಾರ್ಥಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ..
ಸವಾರ ಮೊಹಮ್ಮದ್ ಶಾಕೀರ್ ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೂಲತಃ ಬಿ.ಸಿ.ರೋಡ್ ನಿವಾಸಿಗಳಾದ ಅವರಿಬ್ಬರು ಕೊಣಾಜೆಯ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಅವರು ಇಂದು ಸಂಜೆ ಕೊಣಾಜೆ ಯಿಂದ ಮಂಗಳೂರಿನ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ನೇತ್ರಾವತಿ ಸೇತುವೆ ಬಳಿ ಬೈಕ್ ಕಬ್ಬಿಣದ ತಗಡು ಶೀಟ್ ಗೆ ಢಿಕ್ಕಿ ಹೊಡೆದು ಅಪಘಾತಕ್ಕೀಡಾಗಿದೆ. ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು