7:47 PM Wednesday20 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ

ಇತ್ತೀಚಿನ ಸುದ್ದಿ

ನಂಜನಗೂಡು: ಮಹಿಳೆಯರಿಗೆ ಪರಿಕರಗಳ ವಿತರಿಸಿದ ತಹಶೀಲ್ದಾರ್

01/11/2024, 23:41

ಮೋಹನ್ ನಂಜನಗೂಡು ಮೈಸೂರು

info.reporterkarnataka.com

ನಂಜನಗೂಡು ತಾಲ್ಲೂಕಿನ ಹದಿನಾರು ಗ್ರಾಮದ ಶ್ರೀ ಗುರುಮಲ್ಲೇಶ್ವರ ದಾಸೋಹ ಮಠದ ಸಭಾಂಗಣದಲ್ಲಿ ಐಟಿಸಿ ಮತ್ತು ಬಂಧನ್ ಕೊನ್ನಗರ್ ಟಿಎಚ್ ಪಿ ವತಿಯಿಂದ ಆಯೋಜಿಸಿದ್ದ ಮಹಿಳೆಯರಿಗೆ ಉಚಿತ ಪರಿಕರಗಳ ವಿತರಣೆ ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ತಹಶೀಲ್ದಾರ್ ಗ್ರೇಡ್ 2 ಮಹೇಶ್ ಪಾಟೀಲ್ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿ ವಾಸಿಸುವ ಜನರಿಗೆ ಉದ್ಯೋಗವಕಾಶಗಳನ್ನು ನೀಡಬೇಕು ಹಾಗಾಗಿ
ಐಟಿಸಿ ಮತ್ತು ಬಂಧನ್ ಕೊನ್ನಗರ್ ಸಂಸ್ಥೆಯವರು ಬಡತನದಲ್ಲಿರುವ ಮಹಿಳೆಯರನ್ನು ಗುರುತಿಸಿ ಅವರಿಗೆ ಸ್ವಾವಲಂಬಿ ಜೀವನವನ್ನು ನಡೆಸಲು ಟೈಲರಿಂಗ್ ತರಬೇತಿಯನ್ನು ನೀಡಿ, ಹೊಲಿಗೆ ಯಂತ್ರ, ತಳ್ಳುವ ಗಾಡಿ, ದಿನಸಿ ಅಂಗಡಿಗೆ ಬೇಕಾದ ದವಸ ಧಾನ್ಯಗಳ ವಸ್ತುಗಳು, ಪಾತ್ರೆ ಅಂಗಡಿಗೆ ಬೇಕಾದ ಪಾತ್ರೆಗಳ ಸಾಮಗ್ರಿಗಳು ಸೇರಿದಂತೆ ವಿವಿಧ ಬಗೆಯ ಪರಿಕರಗಳನ್ನು ಮಹಿಳೆಯರಿಗೆ ನೀಡಿ ಅವರ ಬದುಕಿಗೆ ಆಶ್ರಯವಾಗುತ್ತಿದ್ದಾರೆ. ಮಹಿಳೆಯರು ಇದರ ಸದುಪಯೋಗವನ್ನು ಪಡಿಸಿಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಮಹಿಳೆಯರು ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳಬೇಕು. ನೀವು ಕಲಿತ ಕೆಲಸವನ್ನು ಇನ್ನೊಬ್ಬರಿಗೆ ಹೇಳಿಕೊಂಡು ಅವರಿಗೂ ಆಶ್ರಯ ನೀಡಬೇಕು ಎಂದು ತಿಳಿಸಿದರು.
ಸುಮಾರು 50ಕ್ಕೂ ಹೆಚ್ಚು ಮಹಿಳಾ ಫಲಾನುಭವಿಗಳಿಗೆ ಹೊಲಿಗೆ ಯಂತ್ರ, ರೆಡಿಮೇಡ್ ಉಡುಪುಗಳು, ಸೌಂದರ್ಯ ವರ್ಧಕಗಳು, ದಿನಸಿ ವಸ್ತುಗಳು, ಬ್ಯಾಗ್ ಮೇಕಿಂಗ್, ಪಾಸ್ಟ್ ಫುಡ್, ತಳ್ಳುವ ಗಾಡಿ, ಪಾತ್ರೆ ಸೇರಿದಂತೆ ವಿವಿಧ ಪರಿಕರಗಳನ್ನು ಉಚಿತವಾಗಿ ವಿತರಣೆ ಮಾಡಲಾಯಿತು.


ಈ ಸಂದರ್ಭದಲ್ಲಿ ಐಟಿಸಿ ಸಂಸ್ಥೆಯ ಮುಖ್ಯಸ್ಥರಾದ ವಿಜಯ್ ಸಿಂಗ್, ಕಾರ್ಯನಿರ್ವಾಹಕ ಅಧಿಕಾರಿ ಮಂಜು, ಹಿರಿಯ ಮೇಲ್ವಿಚಾರಕರಾದ ಮನೋಜ್, ಹದಿನಾರು ಗ್ರಾಪಂ ಅಧ್ಯಕ್ಷೆ ಸಣ್ಣತಾಯಮ್ಮ, ಬಿಳಿಗೆರೆ ಗ್ರಾ.ಪಂ ಅಧ್ಯಕ್ಷೆ ರಾಜಮ್ಮ, ಕೆಂಪಿಸಿದ್ದನಹುಂಡಿ ಗ್ರಾಪಂ ಉಪಾಧ್ಯಕ್ಷೆ ಲಕ್ಷ್ಮಮ್ಮ, ಮುಖಂಡ ಪುನೀತ್ ಕುಮಾರ್, ಬಂಧನ್ ಸಂಸ್ಥೆಯ ಕಾರ್ಯಕ್ರಮ ಅಧಿಕಾರಿ ದೀಪಕ್ ದಾಸ್, ಸಮುದಾಯ ಅಧಿಕಾರಿ ಮಂಜುನಾಥ್, ಸಂಯೋಜಕ ಮುಸ್ತಕಿನ್ ಸೇರಿದಂತೆ ಮಹಿಳೆಯರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು