5:23 AM Saturday4 - October 2025
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್

ಇತ್ತೀಚಿನ ಸುದ್ದಿ

‘ಪಿಲಿಪಂಜ’ ತುಳು ಸಿನಿಮಾ ಶೀರ್ಷಿಕೆ ಬಿಡುಗಡೆ: ನವೆಂಬರ್‌ 7ರಂದು ಮಂಗಳೂರಿನಲ್ಲಿ ಚಿತ್ರೀಕರಣ ಆರಂಭ

01/11/2024, 23:44

ಮಂಗಳೂರು(reporterkarnataka.com): ಎಸ್ ಬಿ ಗ್ರೂಪ್ಸ್ ಅರ್ಪಿಸುವ, ಶಿಯಾನ ಪ್ರೊಡಕ್ಷನ್ ಹೌಸ್ ನಿರ್ಮಾಣದ, ಪಿಲಿಪಂಜ ಸಿನಿಮಾದ ಶೀರ್ಷಿಕೆ ಬಿಡುಗಡೆ ಕಾರ್ಯಕ್ರಮ ನಗರದ ಬಂದರಿನ ಶ್ರೀ ನಿತ್ಯಾನಂದ ಸೇವಾಶ್ರಮದಲ್ಲಿ ನಡೆಯಿತು.
ಹಿರಿಯ ತುಳು ರಂಗಭೂಮಿ ಹಾಗೂ ಚಲನಚಿತ್ರ ನಿರ್ಮಾಪಕ, ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಶೀರ್ಷಿಕೆ ಬಿಡುಗಡೆ ಮಾಡುತ್ತಾ, “ಪಿಲಿಪಂಜ” ಒಂದು ವಿಭಿನ್ನ ಹಾಗೂ ಕುತೂಹಲ ಮೂಡಿಸುವ ಟೈಟಲ್. ಇದೊಂದು ವಿಭಿನ್ನ ಚಿತ್ರವಾಗಿ ಮೂಡಿಬರುವುದರಲ್ಲಿ ಸಂಶಯವಿಲ್ಲ. ಒಂದೊಳ್ಳೆ ಕಥೆಯೊಂದಿಗೆ ಚಿತ್ರ ತಂಡ ನಮ್ಮ ಮುಂದೆ ಬರುತ್ತಿದೆ, ತುಳುನಾಡಿನ ಜನತೆ ಈ ಚಿತ್ರವನ್ನು ಗೆಲ್ಲಿಸಿ ಕೊಡ ಬೇಕು. ಗುರು ನಿತ್ಯಾನಂದರ ಆಶೀರ್ವಾದ ಚಿತ್ರ ತಂಡದ ಮೇಲಿರಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಶಿಯಾನ ಪ್ರೊಡಕ್ಷನ್ ಹೌಸ್ ನ ಪ್ರತೀಕ್ ಪೂಜಾರಿ, ಚಿತ್ರದ ನಿರ್ದೇಶಕ ಭರತ್ ಶೆಟ್ಟಿ, ಎಕ್ಸಿಕ್ಯುಟಿವ್ ಪ್ರೊಡ್ಯುಷರ್ ರಮೇಶ್ ರೈ ಕುಕ್ಕುವಳ್ಳಿ, ಮುಂಬಯಿಯ ರಂಗ ನಿರ್ದೇಶಕ, ಭ್ರಾಮರಿ ಸುದ್ದಿವಾಹಿನಿಯ ರೂವಾರಿ ಬಾಬಾ ಪ್ರಸಾದ್ ಅರಸ, ಪ್ರಕಾಶ್ ಶೆಟ್ಟಿ ಧರ್ಮನಗರ, ರಾಜೇಶ್ ಕಣ್ಣೂರು, ರಕ್ಷಣ್ ಮಾಡೂರು, ಅಕ್ಷತ್ ವಿಟ್ಲ, ಸುರೇಶ್ ಬಲ್ಮಠ,ಅಭಿಷೇಕ್ ಕುಲಾಲ್, ಚಿತ್ರದ ಸಂಕಲನಕಾರ ಶ್ರೀನಾಥ್ ಪವರ್ ಮುಂತಾದವರು ಉಪಸ್ಥಿತರಿದ್ದರು.
ನವೆಂಬರ್‌ 7ಕ್ಕೆ ಮಂಗಳೂರಿನಲ್ಲಿ ಚಿತ್ರೀಕರಣ ಪ್ರಾರಂಭಗೊಳ್ಳಲಿದೆ.
ಚಿತ್ರದಲ್ಲಿ ರಮೇಶ್ ರೈ ಕುಕ್ಕುವಳ್ಳಿ, ಭೋಜರಾಜ್ ವಾಮಂಜೂರು, ರವಿ ರಾಮಕುಂಜ, ಸುಂದರ್ ರೈ ಮಂದಾರ, ಶಿವಪ್ರಕಾಶ್ ಪೂಂಜ, ರೂಪಾಶ್ರೀ ವರ್ಕಾಡಿ, ಪ್ರಕಾಶ್ ಶೆಟ್ಟಿ ಧರ್ಮನಗರ, ರಕ್ಷಣ್ ಮಾಡೂರು, ಪ್ರವೀಣ್ ಕೊಡಕ್ಕಲ್, ರಂಜನ್ ಬೋಳಾರ್ , ದಿಶಾ ರಾಣಿ ಮುಂತಾದವರು ನಟಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು