12:24 AM Tuesday27 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

‘ಪಿಲಿಪಂಜ’ ತುಳು ಸಿನಿಮಾ ಶೀರ್ಷಿಕೆ ಬಿಡುಗಡೆ: ನವೆಂಬರ್‌ 7ರಂದು ಮಂಗಳೂರಿನಲ್ಲಿ ಚಿತ್ರೀಕರಣ ಆರಂಭ

01/11/2024, 23:44

ಮಂಗಳೂರು(reporterkarnataka.com): ಎಸ್ ಬಿ ಗ್ರೂಪ್ಸ್ ಅರ್ಪಿಸುವ, ಶಿಯಾನ ಪ್ರೊಡಕ್ಷನ್ ಹೌಸ್ ನಿರ್ಮಾಣದ, ಪಿಲಿಪಂಜ ಸಿನಿಮಾದ ಶೀರ್ಷಿಕೆ ಬಿಡುಗಡೆ ಕಾರ್ಯಕ್ರಮ ನಗರದ ಬಂದರಿನ ಶ್ರೀ ನಿತ್ಯಾನಂದ ಸೇವಾಶ್ರಮದಲ್ಲಿ ನಡೆಯಿತು.
ಹಿರಿಯ ತುಳು ರಂಗಭೂಮಿ ಹಾಗೂ ಚಲನಚಿತ್ರ ನಿರ್ಮಾಪಕ, ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಶೀರ್ಷಿಕೆ ಬಿಡುಗಡೆ ಮಾಡುತ್ತಾ, “ಪಿಲಿಪಂಜ” ಒಂದು ವಿಭಿನ್ನ ಹಾಗೂ ಕುತೂಹಲ ಮೂಡಿಸುವ ಟೈಟಲ್. ಇದೊಂದು ವಿಭಿನ್ನ ಚಿತ್ರವಾಗಿ ಮೂಡಿಬರುವುದರಲ್ಲಿ ಸಂಶಯವಿಲ್ಲ. ಒಂದೊಳ್ಳೆ ಕಥೆಯೊಂದಿಗೆ ಚಿತ್ರ ತಂಡ ನಮ್ಮ ಮುಂದೆ ಬರುತ್ತಿದೆ, ತುಳುನಾಡಿನ ಜನತೆ ಈ ಚಿತ್ರವನ್ನು ಗೆಲ್ಲಿಸಿ ಕೊಡ ಬೇಕು. ಗುರು ನಿತ್ಯಾನಂದರ ಆಶೀರ್ವಾದ ಚಿತ್ರ ತಂಡದ ಮೇಲಿರಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಶಿಯಾನ ಪ್ರೊಡಕ್ಷನ್ ಹೌಸ್ ನ ಪ್ರತೀಕ್ ಪೂಜಾರಿ, ಚಿತ್ರದ ನಿರ್ದೇಶಕ ಭರತ್ ಶೆಟ್ಟಿ, ಎಕ್ಸಿಕ್ಯುಟಿವ್ ಪ್ರೊಡ್ಯುಷರ್ ರಮೇಶ್ ರೈ ಕುಕ್ಕುವಳ್ಳಿ, ಮುಂಬಯಿಯ ರಂಗ ನಿರ್ದೇಶಕ, ಭ್ರಾಮರಿ ಸುದ್ದಿವಾಹಿನಿಯ ರೂವಾರಿ ಬಾಬಾ ಪ್ರಸಾದ್ ಅರಸ, ಪ್ರಕಾಶ್ ಶೆಟ್ಟಿ ಧರ್ಮನಗರ, ರಾಜೇಶ್ ಕಣ್ಣೂರು, ರಕ್ಷಣ್ ಮಾಡೂರು, ಅಕ್ಷತ್ ವಿಟ್ಲ, ಸುರೇಶ್ ಬಲ್ಮಠ,ಅಭಿಷೇಕ್ ಕುಲಾಲ್, ಚಿತ್ರದ ಸಂಕಲನಕಾರ ಶ್ರೀನಾಥ್ ಪವರ್ ಮುಂತಾದವರು ಉಪಸ್ಥಿತರಿದ್ದರು.
ನವೆಂಬರ್‌ 7ಕ್ಕೆ ಮಂಗಳೂರಿನಲ್ಲಿ ಚಿತ್ರೀಕರಣ ಪ್ರಾರಂಭಗೊಳ್ಳಲಿದೆ.
ಚಿತ್ರದಲ್ಲಿ ರಮೇಶ್ ರೈ ಕುಕ್ಕುವಳ್ಳಿ, ಭೋಜರಾಜ್ ವಾಮಂಜೂರು, ರವಿ ರಾಮಕುಂಜ, ಸುಂದರ್ ರೈ ಮಂದಾರ, ಶಿವಪ್ರಕಾಶ್ ಪೂಂಜ, ರೂಪಾಶ್ರೀ ವರ್ಕಾಡಿ, ಪ್ರಕಾಶ್ ಶೆಟ್ಟಿ ಧರ್ಮನಗರ, ರಕ್ಷಣ್ ಮಾಡೂರು, ಪ್ರವೀಣ್ ಕೊಡಕ್ಕಲ್, ರಂಜನ್ ಬೋಳಾರ್ , ದಿಶಾ ರಾಣಿ ಮುಂತಾದವರು ನಟಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು