9:00 AM Saturday13 - June 2026
ಬ್ರೇಕಿಂಗ್ ನ್ಯೂಸ್
ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ… ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

‘ಪಿಲಿಪಂಜ’ ತುಳು ಸಿನಿಮಾ ಶೀರ್ಷಿಕೆ ಬಿಡುಗಡೆ: ನವೆಂಬರ್‌ 7ರಂದು ಮಂಗಳೂರಿನಲ್ಲಿ ಚಿತ್ರೀಕರಣ ಆರಂಭ

01/11/2024, 23:44

ಮಂಗಳೂರು(reporterkarnataka.com): ಎಸ್ ಬಿ ಗ್ರೂಪ್ಸ್ ಅರ್ಪಿಸುವ, ಶಿಯಾನ ಪ್ರೊಡಕ್ಷನ್ ಹೌಸ್ ನಿರ್ಮಾಣದ, ಪಿಲಿಪಂಜ ಸಿನಿಮಾದ ಶೀರ್ಷಿಕೆ ಬಿಡುಗಡೆ ಕಾರ್ಯಕ್ರಮ ನಗರದ ಬಂದರಿನ ಶ್ರೀ ನಿತ್ಯಾನಂದ ಸೇವಾಶ್ರಮದಲ್ಲಿ ನಡೆಯಿತು.
ಹಿರಿಯ ತುಳು ರಂಗಭೂಮಿ ಹಾಗೂ ಚಲನಚಿತ್ರ ನಿರ್ಮಾಪಕ, ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಶೀರ್ಷಿಕೆ ಬಿಡುಗಡೆ ಮಾಡುತ್ತಾ, “ಪಿಲಿಪಂಜ” ಒಂದು ವಿಭಿನ್ನ ಹಾಗೂ ಕುತೂಹಲ ಮೂಡಿಸುವ ಟೈಟಲ್. ಇದೊಂದು ವಿಭಿನ್ನ ಚಿತ್ರವಾಗಿ ಮೂಡಿಬರುವುದರಲ್ಲಿ ಸಂಶಯವಿಲ್ಲ. ಒಂದೊಳ್ಳೆ ಕಥೆಯೊಂದಿಗೆ ಚಿತ್ರ ತಂಡ ನಮ್ಮ ಮುಂದೆ ಬರುತ್ತಿದೆ, ತುಳುನಾಡಿನ ಜನತೆ ಈ ಚಿತ್ರವನ್ನು ಗೆಲ್ಲಿಸಿ ಕೊಡ ಬೇಕು. ಗುರು ನಿತ್ಯಾನಂದರ ಆಶೀರ್ವಾದ ಚಿತ್ರ ತಂಡದ ಮೇಲಿರಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಶಿಯಾನ ಪ್ರೊಡಕ್ಷನ್ ಹೌಸ್ ನ ಪ್ರತೀಕ್ ಪೂಜಾರಿ, ಚಿತ್ರದ ನಿರ್ದೇಶಕ ಭರತ್ ಶೆಟ್ಟಿ, ಎಕ್ಸಿಕ್ಯುಟಿವ್ ಪ್ರೊಡ್ಯುಷರ್ ರಮೇಶ್ ರೈ ಕುಕ್ಕುವಳ್ಳಿ, ಮುಂಬಯಿಯ ರಂಗ ನಿರ್ದೇಶಕ, ಭ್ರಾಮರಿ ಸುದ್ದಿವಾಹಿನಿಯ ರೂವಾರಿ ಬಾಬಾ ಪ್ರಸಾದ್ ಅರಸ, ಪ್ರಕಾಶ್ ಶೆಟ್ಟಿ ಧರ್ಮನಗರ, ರಾಜೇಶ್ ಕಣ್ಣೂರು, ರಕ್ಷಣ್ ಮಾಡೂರು, ಅಕ್ಷತ್ ವಿಟ್ಲ, ಸುರೇಶ್ ಬಲ್ಮಠ,ಅಭಿಷೇಕ್ ಕುಲಾಲ್, ಚಿತ್ರದ ಸಂಕಲನಕಾರ ಶ್ರೀನಾಥ್ ಪವರ್ ಮುಂತಾದವರು ಉಪಸ್ಥಿತರಿದ್ದರು.
ನವೆಂಬರ್‌ 7ಕ್ಕೆ ಮಂಗಳೂರಿನಲ್ಲಿ ಚಿತ್ರೀಕರಣ ಪ್ರಾರಂಭಗೊಳ್ಳಲಿದೆ.
ಚಿತ್ರದಲ್ಲಿ ರಮೇಶ್ ರೈ ಕುಕ್ಕುವಳ್ಳಿ, ಭೋಜರಾಜ್ ವಾಮಂಜೂರು, ರವಿ ರಾಮಕುಂಜ, ಸುಂದರ್ ರೈ ಮಂದಾರ, ಶಿವಪ್ರಕಾಶ್ ಪೂಂಜ, ರೂಪಾಶ್ರೀ ವರ್ಕಾಡಿ, ಪ್ರಕಾಶ್ ಶೆಟ್ಟಿ ಧರ್ಮನಗರ, ರಕ್ಷಣ್ ಮಾಡೂರು, ಪ್ರವೀಣ್ ಕೊಡಕ್ಕಲ್, ರಂಜನ್ ಬೋಳಾರ್ , ದಿಶಾ ರಾಣಿ ಮುಂತಾದವರು ನಟಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು