1:19 AM Saturday25 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ಡೋಲ್ಪಿ ಡಿಸೋಜ ನಿರ್ಮಾಣದ ’90 ಎಮ್ ಎಲ್’ ತುಳು ಸಿನಿಮಾಕ್ಕೆ ಶರವು ದೇವಸ್ಥಾನದಲ್ಲಿ ಮುಹೂರ್ತ

02/11/2024, 11:33

ಮಂಗಳೂರು(reporterkarnataka.com): ಡಿ ಡಿ ಪ್ರೊಡಕ್ಷನ್ ಲಾಂಛನದಲ್ಲಿ ರಂಜಿತ್ ಸಿ. ಬಜಾಲ್ ನಿರ್ದೇಶನದಲ್ಲಿ ಡೋಲ್ಪಿ ಡಿ ಸೋಜ ನಿರ್ಮಾಣದಲ್ಲಿ ತಯಾರಾಗುತ್ತಿರುವ “90 ಎಮ್ ಎಲ್” ತುಳು ಚಲನ ಚಿತ್ರದ ಮುಹೂರ್ತ ಸಮಾರಂಭವು ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯಿತು.


ಶರವು ರಾಘವೇಂದ್ರ ಶಾಸ್ತ್ರಿ ಸಿನಿಮಾಕ್ಕೆ ಕ್ಲಾಪ್ ಮಾಡಿದರು.
ನಟ ವಿನೀತ್ ಕುಮಾರ್, ನಟಿ ರುಹಾನಿ ಶೆಟ್ಟಿ, ರೋಶನ್ ಶೆಟ್ಟಿ, ಪುಷ್ಪರಾಜ್ ಬೊಳ್ಳೂರು, ನಿರ್ದೇಶಕ ರಂಜಿತ್ ಸಿ ಬಜಾಲ್, ನಿರ್ಮಾಪಕ ಡೋಲ್ಪಿ ಡಿ ಸೋಜ ಮತ್ತಿತರರು ಉಪಸ್ಥಿತರಿದ್ದರು.
ವಿನೀತ್ ಕುಮಾರ್ ಅಭಿನಯದ 90 ಎಮ್ ಎಲ್ ಸಿನಿಮಾದಲ್ಲಿ ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ರೋಶನ್ ಶೆಟ್ಟಿ, ದೀಪಕ್ ರೈ ಪಾಣಾಜೆ, ಉಮೇಶ್ ಮಿಜಾರ್, ಪುಷ್ಪರಾಜ್ ಬೊಳ್ಳೂರು ಅಭಿನಯಿಸಲಿದ್ದಾರೆ.
ರಂಜಿತ್ ಸಿ ಬಜಾಲ್ ಚಿತ್ರಕತೆ, ನಿರ್ದೇಶನ, ಸಂಭಾಷಣೆ ತುಳಸಿದಾಸ್ ಮಂಜೇಶ್ವರ್, ಛಾಯಾಗ್ರಾಹಣ ಅರ್ಜುನ್ ಎಂವಿ, ಸಂಗೀತ ಸೃಜನ್ ಕುಮಾರ್ ತೋನ್ಸೆ, ಸಂಕಲನ ವಿಶಾಲ್ ದೇವಾಡಿಗ, ಪಿಆರ್ ಒ ಬಾಳ ಜಗನ್ನಾಥ ಶೆಟ್ಟಿ, ಡಿಸೈನ್ ಆಚಾರ್ಯ ಗುರು. ಮಂಗಳೂರು ಸುತ್ತ ಮುತ್ತ ಒಂದೇ ಹಂತದಲ್ಲಿ ಚಿತ್ರೀಕರಣ ನಡೆಯಲಿದೆ ಎಂದು ಸಿನಿಮಾ ನಿರ್ದೇಶಕ ರಂಜಿತ್ ಸಿ. ಬಜಾಲ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು