3:47 AM Saturday14 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ಆಂಜೆಲೊರ್ ಧರ್ಮಕ್ಷೇತ್ರದಲ್ಲಿ ‘ವೈಸಿಎಸ್ ಯುವ ದಬಾಜೊ’: ಕುಲಶೇಖರ ಘಟಕ ಪ್ರಥಮ, ಆಂಜೆಲೊರ್ ಘಟಕ ದ್ವಿತೀಯ

02/11/2024, 16:23

ಮಂಗಳೂರು(reporterkarnataka.com): ಮಂಗಳೂರು ಧರ್ಮಪ್ರಾಂತ್ಯದ ಸಿಟಿ ವಲಯದ ಯಂಗ್ ಕ್ಯಾಥೋಲಿಕ್‌ ಸ್ಟೂಡೆಂಟ್ಸ್ ಸಂಚಾಲನದ ವಿದ್ಯಾರ್ಥಿಗಳಿಗೆ ವೈಸಿಎಸ್ ಯುವ ದಬಾಜೊ 2024 ಎಂಬ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮವನ್ನು ಆಂಜೆಲೊರ್ ಧರ್ಮಕ್ಷೇತ್ರದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳಗ್ಗೆ 9 ಗಂಟೆಗೆ ಸಿಟಿ ವಲಯದ ಪ್ರಧಾನ ಗುರುಗಳಾದ ವಂದನೀಯ ಜೇಮ್ಸ್ ಡಿಸೋಜ ಅವರು ನೆರವೇರಿಸಿದರು. ವೇದಿಕೆಯಲ್ಲಿ ಧರ್ಮ ಕ್ಷೇತ್ರದ ಧರ್ಮಗುರುಗಳಾದ ವಂದನೀಯ ಫೆಡ್ರಿಕ್ ಲೋಬೊ, ವಸತಿ ಯಾಜಕರಾದ ವಂದನೀಯ ಸ್ಟ್ತಾನಿ ಫೆರ್ನಾಂಡಿಸ್, ಸೇವಾದರ್ಶಿ ಬ್ರ. ಜೀವನ್ ಲೋಬೊ, ವೈಸಿಎಸ್ ವಲಯ ನಿರ್ದೇಶಕರಾದ ವಂದನೀಯ ವಿಜಯ ಮೊಂತೆರೊ, ಧರ್ಮಕ್ಷೇತ್ರದ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಪೌಲ್ ರೊಡ್ರಿಗಸ್, ಕಾರ್ಯದರ್ಶಿ ಲೊಲಿನಾ ಡಿಸೋಜ, ವಲಯ ಸಚೇತಕಿ ರೆನಿಟಾ ಮಿನೇಜಸ್, ಘಟಕ ಸಚೇತಕ ರೋಶನ್ ಪತ್ರಾವೊ, ಧರ್ಮಪ್ರಾಂತ್ಯದ ವೈಸಿಎಸ್ ಅಧ್ಯಕ್ಷ ಡಿಯೋನ್ ಸಲ್ದಾನಾ, ವಲಯ ವೈಸಿಎಸ್ ಅಧ್ಯಕ್ಷ ಡ್ಯಾರೆಲ್ ಮೊಂತೇರೊ, ಘಟಕಾಧ್ಯಕ್ಷ ಲಿಯೋನ್ ಡಿಸೋಜ ಅವರು ಉಪಸ್ಥಿತರಿದ್ದರು.
ವೈಯಕ್ತಿಕ ಗಾಯನ, ಪಂಗಡ ಗಾಯನ ಹಾಗೂ ವೆರೈಟಿ ವಿಭಾಗಗಳಲ್ಲಿ 9 ಘಟಕಗಳ 130 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸಂಜೆ 4.30ಕ್ಕೆ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವೈಸಿಎಸ್ ಕುಲಶೇಖರ ಘಟಕ ಪ್ರಥಮ ಸಮಗ್ರ ಪ್ರಶಸ್ತಿ, ಆಂಜೆಲೊರ್ ವೈಸಿಎಸ್ ಘಟಕ ದ್ವಿತೀಯ ಸಮಗ್ರ ಪ್ರಶಸ್ತಿ ಪಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು