12:25 AM Wednesday21 - January 2026
ಬ್ರೇಕಿಂಗ್ ನ್ಯೂಸ್
ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ…

ಇತ್ತೀಚಿನ ಸುದ್ದಿ

ಆಂಜೆಲೊರ್ ಧರ್ಮಕ್ಷೇತ್ರದಲ್ಲಿ ‘ವೈಸಿಎಸ್ ಯುವ ದಬಾಜೊ’: ಕುಲಶೇಖರ ಘಟಕ ಪ್ರಥಮ, ಆಂಜೆಲೊರ್ ಘಟಕ ದ್ವಿತೀಯ

02/11/2024, 16:23

ಮಂಗಳೂರು(reporterkarnataka.com): ಮಂಗಳೂರು ಧರ್ಮಪ್ರಾಂತ್ಯದ ಸಿಟಿ ವಲಯದ ಯಂಗ್ ಕ್ಯಾಥೋಲಿಕ್‌ ಸ್ಟೂಡೆಂಟ್ಸ್ ಸಂಚಾಲನದ ವಿದ್ಯಾರ್ಥಿಗಳಿಗೆ ವೈಸಿಎಸ್ ಯುವ ದಬಾಜೊ 2024 ಎಂಬ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮವನ್ನು ಆಂಜೆಲೊರ್ ಧರ್ಮಕ್ಷೇತ್ರದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳಗ್ಗೆ 9 ಗಂಟೆಗೆ ಸಿಟಿ ವಲಯದ ಪ್ರಧಾನ ಗುರುಗಳಾದ ವಂದನೀಯ ಜೇಮ್ಸ್ ಡಿಸೋಜ ಅವರು ನೆರವೇರಿಸಿದರು. ವೇದಿಕೆಯಲ್ಲಿ ಧರ್ಮ ಕ್ಷೇತ್ರದ ಧರ್ಮಗುರುಗಳಾದ ವಂದನೀಯ ಫೆಡ್ರಿಕ್ ಲೋಬೊ, ವಸತಿ ಯಾಜಕರಾದ ವಂದನೀಯ ಸ್ಟ್ತಾನಿ ಫೆರ್ನಾಂಡಿಸ್, ಸೇವಾದರ್ಶಿ ಬ್ರ. ಜೀವನ್ ಲೋಬೊ, ವೈಸಿಎಸ್ ವಲಯ ನಿರ್ದೇಶಕರಾದ ವಂದನೀಯ ವಿಜಯ ಮೊಂತೆರೊ, ಧರ್ಮಕ್ಷೇತ್ರದ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಪೌಲ್ ರೊಡ್ರಿಗಸ್, ಕಾರ್ಯದರ್ಶಿ ಲೊಲಿನಾ ಡಿಸೋಜ, ವಲಯ ಸಚೇತಕಿ ರೆನಿಟಾ ಮಿನೇಜಸ್, ಘಟಕ ಸಚೇತಕ ರೋಶನ್ ಪತ್ರಾವೊ, ಧರ್ಮಪ್ರಾಂತ್ಯದ ವೈಸಿಎಸ್ ಅಧ್ಯಕ್ಷ ಡಿಯೋನ್ ಸಲ್ದಾನಾ, ವಲಯ ವೈಸಿಎಸ್ ಅಧ್ಯಕ್ಷ ಡ್ಯಾರೆಲ್ ಮೊಂತೇರೊ, ಘಟಕಾಧ್ಯಕ್ಷ ಲಿಯೋನ್ ಡಿಸೋಜ ಅವರು ಉಪಸ್ಥಿತರಿದ್ದರು.
ವೈಯಕ್ತಿಕ ಗಾಯನ, ಪಂಗಡ ಗಾಯನ ಹಾಗೂ ವೆರೈಟಿ ವಿಭಾಗಗಳಲ್ಲಿ 9 ಘಟಕಗಳ 130 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸಂಜೆ 4.30ಕ್ಕೆ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವೈಸಿಎಸ್ ಕುಲಶೇಖರ ಘಟಕ ಪ್ರಥಮ ಸಮಗ್ರ ಪ್ರಶಸ್ತಿ, ಆಂಜೆಲೊರ್ ವೈಸಿಎಸ್ ಘಟಕ ದ್ವಿತೀಯ ಸಮಗ್ರ ಪ್ರಶಸ್ತಿ ಪಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು