6:27 AM Monday11 - May 2026
ಬ್ರೇಕಿಂಗ್ ನ್ಯೂಸ್
ತಿರುಚಿ ಪೂರ್ವ ಕ್ಷೇತ್ರಕ್ಕೆ ತಮಿಳುನಾಡು ಸಿಎಂ ವಿಜಯ್ ರಾಜೀನಾಮೆ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಇನ್ನಿಲ್ಲ: ಅನಾರೋಗ್ಯದಿಂದ ನಿಧನ ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ

ಇತ್ತೀಚಿನ ಸುದ್ದಿ

ಆಂಜೆಲೊರ್ ಧರ್ಮಕ್ಷೇತ್ರದಲ್ಲಿ ‘ವೈಸಿಎಸ್ ಯುವ ದಬಾಜೊ’: ಕುಲಶೇಖರ ಘಟಕ ಪ್ರಥಮ, ಆಂಜೆಲೊರ್ ಘಟಕ ದ್ವಿತೀಯ

02/11/2024, 16:23

ಮಂಗಳೂರು(reporterkarnataka.com): ಮಂಗಳೂರು ಧರ್ಮಪ್ರಾಂತ್ಯದ ಸಿಟಿ ವಲಯದ ಯಂಗ್ ಕ್ಯಾಥೋಲಿಕ್‌ ಸ್ಟೂಡೆಂಟ್ಸ್ ಸಂಚಾಲನದ ವಿದ್ಯಾರ್ಥಿಗಳಿಗೆ ವೈಸಿಎಸ್ ಯುವ ದಬಾಜೊ 2024 ಎಂಬ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮವನ್ನು ಆಂಜೆಲೊರ್ ಧರ್ಮಕ್ಷೇತ್ರದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳಗ್ಗೆ 9 ಗಂಟೆಗೆ ಸಿಟಿ ವಲಯದ ಪ್ರಧಾನ ಗುರುಗಳಾದ ವಂದನೀಯ ಜೇಮ್ಸ್ ಡಿಸೋಜ ಅವರು ನೆರವೇರಿಸಿದರು. ವೇದಿಕೆಯಲ್ಲಿ ಧರ್ಮ ಕ್ಷೇತ್ರದ ಧರ್ಮಗುರುಗಳಾದ ವಂದನೀಯ ಫೆಡ್ರಿಕ್ ಲೋಬೊ, ವಸತಿ ಯಾಜಕರಾದ ವಂದನೀಯ ಸ್ಟ್ತಾನಿ ಫೆರ್ನಾಂಡಿಸ್, ಸೇವಾದರ್ಶಿ ಬ್ರ. ಜೀವನ್ ಲೋಬೊ, ವೈಸಿಎಸ್ ವಲಯ ನಿರ್ದೇಶಕರಾದ ವಂದನೀಯ ವಿಜಯ ಮೊಂತೆರೊ, ಧರ್ಮಕ್ಷೇತ್ರದ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಪೌಲ್ ರೊಡ್ರಿಗಸ್, ಕಾರ್ಯದರ್ಶಿ ಲೊಲಿನಾ ಡಿಸೋಜ, ವಲಯ ಸಚೇತಕಿ ರೆನಿಟಾ ಮಿನೇಜಸ್, ಘಟಕ ಸಚೇತಕ ರೋಶನ್ ಪತ್ರಾವೊ, ಧರ್ಮಪ್ರಾಂತ್ಯದ ವೈಸಿಎಸ್ ಅಧ್ಯಕ್ಷ ಡಿಯೋನ್ ಸಲ್ದಾನಾ, ವಲಯ ವೈಸಿಎಸ್ ಅಧ್ಯಕ್ಷ ಡ್ಯಾರೆಲ್ ಮೊಂತೇರೊ, ಘಟಕಾಧ್ಯಕ್ಷ ಲಿಯೋನ್ ಡಿಸೋಜ ಅವರು ಉಪಸ್ಥಿತರಿದ್ದರು.
ವೈಯಕ್ತಿಕ ಗಾಯನ, ಪಂಗಡ ಗಾಯನ ಹಾಗೂ ವೆರೈಟಿ ವಿಭಾಗಗಳಲ್ಲಿ 9 ಘಟಕಗಳ 130 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸಂಜೆ 4.30ಕ್ಕೆ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವೈಸಿಎಸ್ ಕುಲಶೇಖರ ಘಟಕ ಪ್ರಥಮ ಸಮಗ್ರ ಪ್ರಶಸ್ತಿ, ಆಂಜೆಲೊರ್ ವೈಸಿಎಸ್ ಘಟಕ ದ್ವಿತೀಯ ಸಮಗ್ರ ಪ್ರಶಸ್ತಿ ಪಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು