12:31 PM Monday24 - August 2026
ಬ್ರೇಕಿಂಗ್ ನ್ಯೂಸ್
ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು

ಇತ್ತೀಚಿನ ಸುದ್ದಿ

ಆಂಜೆಲೊರ್ ಧರ್ಮಕ್ಷೇತ್ರದಲ್ಲಿ ‘ವೈಸಿಎಸ್ ಯುವ ದಬಾಜೊ’: ಕುಲಶೇಖರ ಘಟಕ ಪ್ರಥಮ, ಆಂಜೆಲೊರ್ ಘಟಕ ದ್ವಿತೀಯ

02/11/2024, 16:23

ಮಂಗಳೂರು(reporterkarnataka.com): ಮಂಗಳೂರು ಧರ್ಮಪ್ರಾಂತ್ಯದ ಸಿಟಿ ವಲಯದ ಯಂಗ್ ಕ್ಯಾಥೋಲಿಕ್‌ ಸ್ಟೂಡೆಂಟ್ಸ್ ಸಂಚಾಲನದ ವಿದ್ಯಾರ್ಥಿಗಳಿಗೆ ವೈಸಿಎಸ್ ಯುವ ದಬಾಜೊ 2024 ಎಂಬ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮವನ್ನು ಆಂಜೆಲೊರ್ ಧರ್ಮಕ್ಷೇತ್ರದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳಗ್ಗೆ 9 ಗಂಟೆಗೆ ಸಿಟಿ ವಲಯದ ಪ್ರಧಾನ ಗುರುಗಳಾದ ವಂದನೀಯ ಜೇಮ್ಸ್ ಡಿಸೋಜ ಅವರು ನೆರವೇರಿಸಿದರು. ವೇದಿಕೆಯಲ್ಲಿ ಧರ್ಮ ಕ್ಷೇತ್ರದ ಧರ್ಮಗುರುಗಳಾದ ವಂದನೀಯ ಫೆಡ್ರಿಕ್ ಲೋಬೊ, ವಸತಿ ಯಾಜಕರಾದ ವಂದನೀಯ ಸ್ಟ್ತಾನಿ ಫೆರ್ನಾಂಡಿಸ್, ಸೇವಾದರ್ಶಿ ಬ್ರ. ಜೀವನ್ ಲೋಬೊ, ವೈಸಿಎಸ್ ವಲಯ ನಿರ್ದೇಶಕರಾದ ವಂದನೀಯ ವಿಜಯ ಮೊಂತೆರೊ, ಧರ್ಮಕ್ಷೇತ್ರದ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಪೌಲ್ ರೊಡ್ರಿಗಸ್, ಕಾರ್ಯದರ್ಶಿ ಲೊಲಿನಾ ಡಿಸೋಜ, ವಲಯ ಸಚೇತಕಿ ರೆನಿಟಾ ಮಿನೇಜಸ್, ಘಟಕ ಸಚೇತಕ ರೋಶನ್ ಪತ್ರಾವೊ, ಧರ್ಮಪ್ರಾಂತ್ಯದ ವೈಸಿಎಸ್ ಅಧ್ಯಕ್ಷ ಡಿಯೋನ್ ಸಲ್ದಾನಾ, ವಲಯ ವೈಸಿಎಸ್ ಅಧ್ಯಕ್ಷ ಡ್ಯಾರೆಲ್ ಮೊಂತೇರೊ, ಘಟಕಾಧ್ಯಕ್ಷ ಲಿಯೋನ್ ಡಿಸೋಜ ಅವರು ಉಪಸ್ಥಿತರಿದ್ದರು.
ವೈಯಕ್ತಿಕ ಗಾಯನ, ಪಂಗಡ ಗಾಯನ ಹಾಗೂ ವೆರೈಟಿ ವಿಭಾಗಗಳಲ್ಲಿ 9 ಘಟಕಗಳ 130 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸಂಜೆ 4.30ಕ್ಕೆ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವೈಸಿಎಸ್ ಕುಲಶೇಖರ ಘಟಕ ಪ್ರಥಮ ಸಮಗ್ರ ಪ್ರಶಸ್ತಿ, ಆಂಜೆಲೊರ್ ವೈಸಿಎಸ್ ಘಟಕ ದ್ವಿತೀಯ ಸಮಗ್ರ ಪ್ರಶಸ್ತಿ ಪಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು