3:05 PM Wednesday19 - August 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :…

ಇತ್ತೀಚಿನ ಸುದ್ದಿ

ನವಂಬರ್ 10ರಂದು ಸುರತ್ಕಲ್ ನಲ್ಲಿ ರಂಗ ಚಾವಡಿ ವರ್ಷದ ಹಬ್ಬ: ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ

02/11/2024, 17:16

ಸುರತ್ಕಲ್ (reporterkarnataka.com): ಸಾಹಿತ್ಯಿಕ ಸಾಂಸ್ಕೃತಿಕ ಸಂಘಟನೆ ರಂಗಚಾವಡಿ ಮಂಗಳೂರು ಇದರ ಆಶ್ರಯದಲ್ಲಿ ನವಂಬರ್ 10 ರಂದು ಭಾನುವಾರ ಸಂಜೆ 4.30ಕ್ಕೆ ಸುರತ್ಕಲ್ ಬಂಟರ ಭವನದಲ್ಲಿ ರಂಗಚಾವಡಿ ವರ್ಷದ ಹಬ್ಬ ಕಾರ್ಯಕ್ರಮ ನಡೆಯಲಿದ್ದು, ರಂಗ ಚಾವಡಿ ಪ್ರಶಸ್ತಿ 2024 ಪ್ರದಾನ ಸಮಾರಂಭ ನಡೆಯಲಿದೆ.
ರಂಗ ಸವ್ಯಸಾಚಿ ಲಯನ್ ಕಿಶೋರ್ ಡಿ ಶೆಟ್ಟಿ ಅವರನ್ನು 2024ನೇ ಸಾಲಿನ ರಂಗಚಾವಡಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.
ಸಮಾರಂಭವನ್ನು ಮುಂಬೈ ವಿ.ಕೆ. ಸಮೂಹ ಸಂಸ್ಥೆಗಳ ಅಧ್ಯಕ್ಷ ಕರುಣಾಕರ ಎಂ ಶೆಟ್ಟಿ ಮಧ್ಯಗುತ್ತು ಉದ್ಘಾಟಿಸಲಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮುಂಬೈಯ ಉದ್ಯಮಿ ಅನಿಲ್ ಶೆಟ್ಟಿ ತೇವು ಸೂರಿಂಜೆ, ಚಲನ ಚಿತ್ರ ನಿರ್ಮಾಪಕ ಡಾ ಸಂಜೀವ ದಂಡೆಕೇರಿ, ಶ್ರೀ ಡೆವಲಪರ್ಸ್ ಕಟೀಲು ಸಂಸ್ಥೆಯ ಮಾಲಕ ಗಿರೀಶ್ ಎಂ ಶೆಟ್ಟಿ ಕಟೀಲು, ಚಲನ ಚಿತ್ರ ನಿರ್ಮಾಪಕ ಚಂದ್ರಶೇಖರ ಮಾಡ ಕುದ್ರಾಡಿಗುತ್ತು, ಥಾಣೆ ಬಂಟ್ಸ್ ಎಸೋಸಿಯೇಶನ್ ನ ಮಾಜಿ ಅಧ್ಯಕ್ಷ ವೇಣುಗೋಪಾಲ್ ಶೆಟ್ಟಿ, ಸುರತ್ಕಲ್ ಬಂಟರ ಸಂಘದ ನಿರ್ದೇಶಕ, ಉದ್ಯಮಿ ಜಗಧೀಶ್ ಶೆಟ್ಟಿ ಪೆರ್ಮುದೆ, ಚಲನ‌ಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್, ಯಕ್ಷಧ್ರುವ ಪಟ್ಲ ಫೌಂಡೇಶನ್ ಸುರತ್ಕಲ್ ಘಟಕದ ಅಧ್ಯಕ್ಷ ಸುಧಾಕರ ಪೂಂಜ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಎಂ ಲೋಕಯ್ಯ ಶೆಟ್ಟಿ, ಸುಭಾಷಿತನಗರ ರೆಸಿಡೆಂಟ್ಸ್ ವೆಲ್ಪೇರ್ ಅಸೋಸಿಯೇಶನ್
ಅಧ್ಯಕ್ಷ ರಮೇಶ್ ಶೆಟ್ಟಿ ಭಾಗವಹಿಸಲಿದ್ದಾರೆ. ಸಮಾರಂಭದಲ್ಲಿ ಲಕುಮಿ ತಂಡದ ವ್ಯವಸ್ಥಾಪಕ, ರಂಗಸವ್ಯಸಾಚಿ ನಿರ್ದೇಶಕ, ಸಂಘಟಕ ಕಿಶೋರ್ ಡಿ ಶೆಟ್ಟಿ ಅವರನ್ನು ರಂಗಚಾವಡಿ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು.
ಬಳಿಕ ಕಲಾವಿದರಿಂದ ಗಾನ ಲಹರಿ ಮತ್ತು ಶ್ರೀ ಲಲಿತೆ ನಾಟಕ ತಂಡದಿಂದ “ಶನಿ ಮಹಾತ್ಮೆ” ನಾಟಕ ಪ್ರದರ್ಶನಗೊಳ್ಳಲಿದೆ ಎಂದು ರಂಗಚಾವಡಿಯ ಪ್ರಕಟನೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು