9:25 AM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ನವಂಬರ್ 10ರಂದು ಸುರತ್ಕಲ್ ನಲ್ಲಿ ರಂಗ ಚಾವಡಿ ವರ್ಷದ ಹಬ್ಬ: ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ

02/11/2024, 17:16

ಸುರತ್ಕಲ್ (reporterkarnataka.com): ಸಾಹಿತ್ಯಿಕ ಸಾಂಸ್ಕೃತಿಕ ಸಂಘಟನೆ ರಂಗಚಾವಡಿ ಮಂಗಳೂರು ಇದರ ಆಶ್ರಯದಲ್ಲಿ ನವಂಬರ್ 10 ರಂದು ಭಾನುವಾರ ಸಂಜೆ 4.30ಕ್ಕೆ ಸುರತ್ಕಲ್ ಬಂಟರ ಭವನದಲ್ಲಿ ರಂಗಚಾವಡಿ ವರ್ಷದ ಹಬ್ಬ ಕಾರ್ಯಕ್ರಮ ನಡೆಯಲಿದ್ದು, ರಂಗ ಚಾವಡಿ ಪ್ರಶಸ್ತಿ 2024 ಪ್ರದಾನ ಸಮಾರಂಭ ನಡೆಯಲಿದೆ.
ರಂಗ ಸವ್ಯಸಾಚಿ ಲಯನ್ ಕಿಶೋರ್ ಡಿ ಶೆಟ್ಟಿ ಅವರನ್ನು 2024ನೇ ಸಾಲಿನ ರಂಗಚಾವಡಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.
ಸಮಾರಂಭವನ್ನು ಮುಂಬೈ ವಿ.ಕೆ. ಸಮೂಹ ಸಂಸ್ಥೆಗಳ ಅಧ್ಯಕ್ಷ ಕರುಣಾಕರ ಎಂ ಶೆಟ್ಟಿ ಮಧ್ಯಗುತ್ತು ಉದ್ಘಾಟಿಸಲಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮುಂಬೈಯ ಉದ್ಯಮಿ ಅನಿಲ್ ಶೆಟ್ಟಿ ತೇವು ಸೂರಿಂಜೆ, ಚಲನ ಚಿತ್ರ ನಿರ್ಮಾಪಕ ಡಾ ಸಂಜೀವ ದಂಡೆಕೇರಿ, ಶ್ರೀ ಡೆವಲಪರ್ಸ್ ಕಟೀಲು ಸಂಸ್ಥೆಯ ಮಾಲಕ ಗಿರೀಶ್ ಎಂ ಶೆಟ್ಟಿ ಕಟೀಲು, ಚಲನ ಚಿತ್ರ ನಿರ್ಮಾಪಕ ಚಂದ್ರಶೇಖರ ಮಾಡ ಕುದ್ರಾಡಿಗುತ್ತು, ಥಾಣೆ ಬಂಟ್ಸ್ ಎಸೋಸಿಯೇಶನ್ ನ ಮಾಜಿ ಅಧ್ಯಕ್ಷ ವೇಣುಗೋಪಾಲ್ ಶೆಟ್ಟಿ, ಸುರತ್ಕಲ್ ಬಂಟರ ಸಂಘದ ನಿರ್ದೇಶಕ, ಉದ್ಯಮಿ ಜಗಧೀಶ್ ಶೆಟ್ಟಿ ಪೆರ್ಮುದೆ, ಚಲನ‌ಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್, ಯಕ್ಷಧ್ರುವ ಪಟ್ಲ ಫೌಂಡೇಶನ್ ಸುರತ್ಕಲ್ ಘಟಕದ ಅಧ್ಯಕ್ಷ ಸುಧಾಕರ ಪೂಂಜ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಎಂ ಲೋಕಯ್ಯ ಶೆಟ್ಟಿ, ಸುಭಾಷಿತನಗರ ರೆಸಿಡೆಂಟ್ಸ್ ವೆಲ್ಪೇರ್ ಅಸೋಸಿಯೇಶನ್
ಅಧ್ಯಕ್ಷ ರಮೇಶ್ ಶೆಟ್ಟಿ ಭಾಗವಹಿಸಲಿದ್ದಾರೆ. ಸಮಾರಂಭದಲ್ಲಿ ಲಕುಮಿ ತಂಡದ ವ್ಯವಸ್ಥಾಪಕ, ರಂಗಸವ್ಯಸಾಚಿ ನಿರ್ದೇಶಕ, ಸಂಘಟಕ ಕಿಶೋರ್ ಡಿ ಶೆಟ್ಟಿ ಅವರನ್ನು ರಂಗಚಾವಡಿ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು.
ಬಳಿಕ ಕಲಾವಿದರಿಂದ ಗಾನ ಲಹರಿ ಮತ್ತು ಶ್ರೀ ಲಲಿತೆ ನಾಟಕ ತಂಡದಿಂದ “ಶನಿ ಮಹಾತ್ಮೆ” ನಾಟಕ ಪ್ರದರ್ಶನಗೊಳ್ಳಲಿದೆ ಎಂದು ರಂಗಚಾವಡಿಯ ಪ್ರಕಟನೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು