11:01 PM Saturday17 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

ಮಾಣಿ: ಕರ್ನಾಟಕ ಪ್ರೌಢಶಾಲೆಯಲ್ಲಿ ರಾಜ್ಯೋತ್ಸವ ಕವಿಗೋಷ್ಠಿ

03/11/2024, 11:55

ಬಂಟ್ವಾಳ(reporterkarnataka.com): ಕರ್ನಾಟಕ ರಾಜ್ಯ ಬರಹಗಾರರ ಸಂಘ
ಹೂವಿನಹಡಗಲಿ ಜಿಲ್ಲಾ ಬರಹಗಾರರ ಸಂಘ ದಕ್ಷಿಣ ಕನ್ನಡ ಮತ್ತು ಕರ್ನಾಟಕ ಪ್ರೌಢ ಶಾಲೆ ಮಾಣಿ ಇವರ ಸಹಯೋಗದಲ್ಲಿ ಕರ್ನಾಟಕ ರಾಜ್ಯೋತ್ಸವ ಕವಿಗೋಷ್ಠಿ ನಡೆಯಿತು.


ಸರಕಾರಿ ಪ್ರೌಢಶಾಲೆ ಕಬಕದ ಶಿಕ್ಷಕಿ, ಕವಿ, ಸಾಹಿತಿ ಶಾಂತಾ ಪುತ್ತೂರು ಅಧ್ಯಕ್ಷತೆ ವಹಿಸಿದ್ದರು. ಬರಹಗಾರರ ಸಂಘದ ಜಿಲ್ಲಾಧ್ಯಕ್ಷ ಜಯಾನಂದ ಪೆರಾಜೆ ಮುಖ್ಯ ಅತಿಥಿಯಾಗಿ ಕನ್ನಡ ನಾಡು ನುಡಿ, ಸಂಸ್ಕೃತಿಯ ಉಪನ್ಯಾಸ ನೀಡಿದರು. ರಾಜ್ಯೋತ್ಸವ ಕವಿಗೋಷ್ಠಿಗೆ ಉಪನ್ಯಾಸಕಿ ಗೀತಾ ಕೊಂಕೋಡಿ ಕವನ ವಾಚಿಸಿ ಚಾಲನೆ ನೀಡಿದರು.
ಹಿರಿಯ ಕವಿಗಳಾದ ಎಂ. ಡಿ. ಮಂಚಿ, ಡಾ.ಮೈತ್ರಿ ಭಟ್ ವಿಟ್ಲ, ಆನಂದ ರೈ ಅಡ್ಕಸ್ಥಳ, ಸತೀಶ್ ಬಿಳಿಯೂರು, ಎಸ್. ಜಯಶ್ರೀ ಶೆಣೈ ಬಂಟ್ವಾಳ, ರವೀಂದ್ರ ಕುಕ್ಕಾಜೆ, ಹೇಮಂತ್ ಕುಮಾರ್ ಡಿ, ಶ್ವೇತಾ ಡಿ.ಬಡಗಬೆಳ್ಳೂರು, ವಿಸ್ಮಿತಾ ಎಂ. ಪಡುಮಲೆ, ಚೇತನ್ ಹೆಚ್.ಎಂ, ದೇವಕಿ ಜೆ.ಜಿ ಬನ್ನೂರು, ಶ್ರೀಶಾವಾಸವಿ ತುಳುನಾಡ್, ಫಿಲೋಮಿನಾ ಐಡಾ ಲೋಬೊ, ಜಯರಾಮ ಕಾಂಚನ, ಯಶೋದಾ, ಮರಿಯಮ್ಮ ಸ್ವಾಬಿರಾ, ಜಮಿಹಾ ತಮ್ಮ ಸ್ವರಚಿತ ಕವನ ವಾಚಿಸಿದರು.
ಬರಹಗಾರರು ಹೆಚ್ಚು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು.ಕೇವಲ ನವಯುಗದ ಸಾಹಿತ್ಯಗಳನ್ನಷ್ಟೇ ಅಲ್ಲ ಹಳಗನ್ನಡ, ನಡುಗನ್ನಡವನ್ನೂ ಓದುವ ಅಭ್ಯಾಸ ಮಾಡಿಕೊಳ್ಳಬೇಕು.ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಬರೆಯಲು ಅಭ್ಯಾಸ ಮಾಡಬೇಕು .ಕನ್ನಡವನ್ನು ನಿತ್ಯ ಬಳಸಬೇಕು.ಬರವಣಿಗೆಯಲ್ಲಿ ನಿರಂತರತೆ ಕಾಯ್ದುಕೊಳ್ಳಬೇಕು ಎಂದು ಅಧ್ಯಕ್ಷತೆ ನೆಲೆಯಲ್ಲಿ ಶಾಂತಾ ಪುತ್ತೂರು ಹೇಳಿದರು. ಕವನಗಳ ವಿಮರ್ಶೆ ಮಾಡಿ ಸ್ವರಚಿತ ಕವನ ವಾಚನ ಮಾಡಿದರು.
ಜಯರಾಮ ಕಾಂಚನ ಸ್ವಾಗತಿಸಿದರು.ಅಪೂರ್ವ ಕಾರಂತ್ ಕಾರ್ಯಕ್ರಮ ನಿರೂಪಿಸಿದರು. ಶ್ಯಾಮಲಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು