2:19 AM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

ನಟ, ನಿರ್ದೇಶಕ‌ ಗುರುಪ್ರಸಾದ್ ನೇಣಿಗೆ ಶರಣು: ಅಪಾರ್ಟ್ ಮೆಂಟಿನಲ್ಲಿ ಆತ್ಮಹತ್ಯೆ

03/11/2024, 13:52

ಬೆಂಗಳೂರು(reporterkarnataka.com): ನಟ, ನಿರ್ದೇಶಕ ಗುರುಪ್ರಸಾದ್ ಅವರು ನಗರದ ಮಾದನಾಯಕನಹಳ್ಳಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಗುರುಪ್ರಸಾದ್ ಅವರು ನೇಣಿಗೆ ಶರಣಾಗಿದ್ದು ಯಾರಿಗೂ ಗೊತ್ತಿರಲಿಲ್ಲ. ಅಪಾರ್ಟ್ ಮೆಂಟ್ ನಲ್ಲಿ ವಾಸನೆ ಬಂದ ಬಳಿಕ ಬಾಗಿಲು ತೆರೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಮಠ ಸಿನಿಮಾ ಮೂಲಕ ಖ್ಯಾತಿ ಗಳಿಸಿದ್ದ ಗುರುಪ್ರಸಾದ್ ಅವರು ಕೆಲವು ಚಲನಚಿತ್ರಗಳಲ್ಲಿ ನಟಿಸಿದ್ದರು.
ಮಾದನಾಯಕನಹಳ್ಳಿಯ ಅಪಾರ್ಟ್ ಮೆಂಟ್ ನಲ್ಲಿ ಕಳೆದ ಎಂಟು ತಿಂಗಳಿನಿಂದ ವಾಸ ಮಾಡುತ್ತಿದ್ದರು. ಆತ್ಮಹತ್ಯೆ ನಿಖರ ಕಾರಣ ತಿಳಿದು ಬಂದಿಲ್ಪ. ಕೌಟುಂಬಿಕ ಕಲಹ ಹಾಗೂ ಆರ್ಥಿಕ ಬಿಕ್ಕಟ್ಟಿನಿಂದ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಅಂದಾಜಿಸಲಾಗಿದೆ.
1972ರಲ್ಲಿ ಕನಕಪುರದಲ್ಲಿ ಜನಿಸಿದ್ದ ಗುರುಪ್ರಸಾದ್ ಅವರು ಮಠ, ಎದ್ದೇಳು ಮಂಜುನಾಥ, ಡೈರೆಕ್ಟರ್ ಸ್ಪೆಷಲ್, ರಂಗನಾಯಕ ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ದೇಶಿಸಿದ್ದರು. ಮಠ ಸಿನಿಮಾ ಅವರಿಗೆ ಹೆಸರು ತಂದು ಕೊಟ್ಟಿತ್ತು. ಬಿಗ್ ಬಾಸ್ ನಲ್ಲಿಯೂ ಸ್ಪರ್ಧಿಯಾಗಿದ್ದರು.
ಅವರ ಅಡೆಮಾ ಸಿನಿಮಾ ಶೂಟಿಂಗ್ ನಡೆಯುತಿತ್ತು.
ಡೆತ್ ನೋಟ್ ಬರೆದಿಟ್ಟಿದ್ದು, ಮಾಹಿತಿ ಇನ್ನು ಹೊರಬರಬೇಕಿದೆ. ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಡೆತ್ ನೋಟ್ ವಶಪಡಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು