2:55 PM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ನಟ, ನಿರ್ದೇಶಕ‌ ಗುರುಪ್ರಸಾದ್ ನೇಣಿಗೆ ಶರಣು: ಅಪಾರ್ಟ್ ಮೆಂಟಿನಲ್ಲಿ ಆತ್ಮಹತ್ಯೆ

03/11/2024, 13:52

ಬೆಂಗಳೂರು(reporterkarnataka.com): ನಟ, ನಿರ್ದೇಶಕ ಗುರುಪ್ರಸಾದ್ ಅವರು ನಗರದ ಮಾದನಾಯಕನಹಳ್ಳಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಗುರುಪ್ರಸಾದ್ ಅವರು ನೇಣಿಗೆ ಶರಣಾಗಿದ್ದು ಯಾರಿಗೂ ಗೊತ್ತಿರಲಿಲ್ಲ. ಅಪಾರ್ಟ್ ಮೆಂಟ್ ನಲ್ಲಿ ವಾಸನೆ ಬಂದ ಬಳಿಕ ಬಾಗಿಲು ತೆರೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಮಠ ಸಿನಿಮಾ ಮೂಲಕ ಖ್ಯಾತಿ ಗಳಿಸಿದ್ದ ಗುರುಪ್ರಸಾದ್ ಅವರು ಕೆಲವು ಚಲನಚಿತ್ರಗಳಲ್ಲಿ ನಟಿಸಿದ್ದರು.
ಮಾದನಾಯಕನಹಳ್ಳಿಯ ಅಪಾರ್ಟ್ ಮೆಂಟ್ ನಲ್ಲಿ ಕಳೆದ ಎಂಟು ತಿಂಗಳಿನಿಂದ ವಾಸ ಮಾಡುತ್ತಿದ್ದರು. ಆತ್ಮಹತ್ಯೆ ನಿಖರ ಕಾರಣ ತಿಳಿದು ಬಂದಿಲ್ಪ. ಕೌಟುಂಬಿಕ ಕಲಹ ಹಾಗೂ ಆರ್ಥಿಕ ಬಿಕ್ಕಟ್ಟಿನಿಂದ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಅಂದಾಜಿಸಲಾಗಿದೆ.
1972ರಲ್ಲಿ ಕನಕಪುರದಲ್ಲಿ ಜನಿಸಿದ್ದ ಗುರುಪ್ರಸಾದ್ ಅವರು ಮಠ, ಎದ್ದೇಳು ಮಂಜುನಾಥ, ಡೈರೆಕ್ಟರ್ ಸ್ಪೆಷಲ್, ರಂಗನಾಯಕ ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ದೇಶಿಸಿದ್ದರು. ಮಠ ಸಿನಿಮಾ ಅವರಿಗೆ ಹೆಸರು ತಂದು ಕೊಟ್ಟಿತ್ತು. ಬಿಗ್ ಬಾಸ್ ನಲ್ಲಿಯೂ ಸ್ಪರ್ಧಿಯಾಗಿದ್ದರು.
ಅವರ ಅಡೆಮಾ ಸಿನಿಮಾ ಶೂಟಿಂಗ್ ನಡೆಯುತಿತ್ತು.
ಡೆತ್ ನೋಟ್ ಬರೆದಿಟ್ಟಿದ್ದು, ಮಾಹಿತಿ ಇನ್ನು ಹೊರಬರಬೇಕಿದೆ. ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಡೆತ್ ನೋಟ್ ವಶಪಡಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು