11:33 PM Monday21 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಸುಪ್ರಸಿದ್ದ ಹಾಸನಾಂಬೆ ದೇವಿಯ ಉತ್ಸವಕ್ಕೆ ತೆರೆ: 10 ದಿನಗಳಲ್ಲಿ 20 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

03/11/2024, 19:58

ಅನುಷಾ ಪಾಟೀಲ್ ಹೊಳೆನರಸೀಪುರ ಹಾಸನ

info.reporterkarnataka@gmail.com

ಕಳೆದ 10 ದಿನಗಳಿಂದ ನಡೆಯುತ್ತಿರುವ ಹಾಸನದ ಸುಪ್ರಸಿದ್ದ ಹಾಸನಾಂಬೆ ದೇವಿಯ ಉತ್ಸವಕ್ಕೆ ಇಂದು ವಿಧ್ಯುಕ್ತವಾಗಿ ಮಂಗಳ ಹಾಡಲಾಯಿತು. ಹಾಸನಾಂಬೆಯ ದರ್ಶನಕ್ಕೆ ಇಂದು ಇಂದು ಮಧ್ಯಾಹ್ನ 12 ಗಂಟೆಗೆ ದೇಗುಲದ ಬಾಗಿಲನ್ನು ಬಂದ್ ಮಾಡುವ ಮೂಲಕ ತೆರೆ ಎಳೆಯಲಾಯಿತು.
ಹಾಸನಾಂಬೆ ಉತ್ಸವ ಕಳೆದ 10 ದಿನಗಳಿಂದ ನಡೆಯುತ್ತಿದೆ. ಹಾಸನಾಂಬೆಯ ದರ್ಶನಕ್ಕೆ ಇಡೀ ರಾಜ್ಯದ ವಿವಿಧ ಕಡೆಗಳಿಂದ ಭಕ್ತಾಧಿಗಳ ಪ್ರವಾಹ ಹಾಸನಕ್ಕೆ ಕಳೆದ 10 ದಿನಗಳಿಂದ ಪ್ರವಹಿಸುತ್ತಿತ್ತು. ಬೆಂಗಳೂರು ಹಾಗೂ ಹಾಸನದಿಂದ ಕೆಎಸ್ಸಾರ್ಟಿಸಿ ವಿಶೇಷ ಬಸ್ ವ್ಯವಸ್ಥೆ ಮಾಡಿತ್ತು. ಬೆಂಗಳೂರು ಟು ಹಾಸನ ಪಾಯಿಂಟ್ ಟು ಪಾಯಿಂಟ್ ಅಶ್ವಮೇಧ ಬಸ್ಸಿಗೆ ಸರತಿ ಸಾಲಿನಲ್ಲಿ ಪ್ರಯಾಣಿಕರನ್ನು ಕಳುಹಿಸುವ ವ್ಯವಸ್ಥೆಯನ್ನು ಪೊಲೀಸ್ ಇಲಾಖೆಯ ನೆರವಿನಿಂದ ಕೆಎಸ್ಸಾರ್ಟಿಸಿ ಮಾಡಿದೆ. ಬಸ್ ಏರಿದವರು ಯಾವುದೇ ಕಾರಣಕ್ಕೆ ಕೆಳಗೆ ಇಳಿಯುವಂತಿರಲಿಲ್ಲ. ಈ ಷರತ್ತನ್ನು ಪ್ರಯಾಣಿಕರಿಗೆ ಮುಂಚೆಯೇ ತಿಳಿಸಿ ಬಸ್ ಹತ್ತಿಸಲಾಗುತ್ತಿತ್ತು.
ವೀಕೆಂಡ್ ದಿನಗಳಾದ ಶನಿವಾರ ಮತ್ತು ಭಾನುವಾರ ದೇವಿಯ ದರ್ಶನಕ್ಕೆ ಭಾರೀ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು. ಲಕ್ಷಾಂತರ ಭಕ್ತರು ಸರತಿ ಸಾಲಿನಲ್ಲಿ ನಿಂತು ಅಧಿ ದೇವತೆಯ ದರ್ಶನ ಪಡೆದು ಪುನೀತರಾದರು. ಒಂದು ಅಂದಾಜು ಪ್ರಕಾರ 20 ಲಕ್ಷಕ್ಕೂ ಹೆಚ್ಚು ಭಕ್ತರು ಹಾಸನಾಂಬೆ ದೇವಿ ದರ್ಶನ ಪಡೆದಿದ್ದಾರೆ. ಅಕ್ಟೋಬರ್ 24 ರಿಂದ ಆರಂಭಗೊಂಡಿದ್ದ ಹಾಸನಾಂಬೆ ದೇವಿ ಜಾತ್ರಾ ಮಹೋತ್ಸವ ಅದ್ದೂರಿ ಮತ್ತು ವಿಜೃಂಭಣೆಯಿಂದ ಜರುಗಿತು.

ಇತ್ತೀಚಿನ ಸುದ್ದಿ

ಜಾಹೀರಾತು