2:54 PM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಸುಪ್ರಸಿದ್ದ ಹಾಸನಾಂಬೆ ದೇವಿಯ ಉತ್ಸವಕ್ಕೆ ತೆರೆ: 10 ದಿನಗಳಲ್ಲಿ 20 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

03/11/2024, 19:58

ಅನುಷಾ ಪಾಟೀಲ್ ಹೊಳೆನರಸೀಪುರ ಹಾಸನ

info.reporterkarnataka@gmail.com

ಕಳೆದ 10 ದಿನಗಳಿಂದ ನಡೆಯುತ್ತಿರುವ ಹಾಸನದ ಸುಪ್ರಸಿದ್ದ ಹಾಸನಾಂಬೆ ದೇವಿಯ ಉತ್ಸವಕ್ಕೆ ಇಂದು ವಿಧ್ಯುಕ್ತವಾಗಿ ಮಂಗಳ ಹಾಡಲಾಯಿತು. ಹಾಸನಾಂಬೆಯ ದರ್ಶನಕ್ಕೆ ಇಂದು ಇಂದು ಮಧ್ಯಾಹ್ನ 12 ಗಂಟೆಗೆ ದೇಗುಲದ ಬಾಗಿಲನ್ನು ಬಂದ್ ಮಾಡುವ ಮೂಲಕ ತೆರೆ ಎಳೆಯಲಾಯಿತು.
ಹಾಸನಾಂಬೆ ಉತ್ಸವ ಕಳೆದ 10 ದಿನಗಳಿಂದ ನಡೆಯುತ್ತಿದೆ. ಹಾಸನಾಂಬೆಯ ದರ್ಶನಕ್ಕೆ ಇಡೀ ರಾಜ್ಯದ ವಿವಿಧ ಕಡೆಗಳಿಂದ ಭಕ್ತಾಧಿಗಳ ಪ್ರವಾಹ ಹಾಸನಕ್ಕೆ ಕಳೆದ 10 ದಿನಗಳಿಂದ ಪ್ರವಹಿಸುತ್ತಿತ್ತು. ಬೆಂಗಳೂರು ಹಾಗೂ ಹಾಸನದಿಂದ ಕೆಎಸ್ಸಾರ್ಟಿಸಿ ವಿಶೇಷ ಬಸ್ ವ್ಯವಸ್ಥೆ ಮಾಡಿತ್ತು. ಬೆಂಗಳೂರು ಟು ಹಾಸನ ಪಾಯಿಂಟ್ ಟು ಪಾಯಿಂಟ್ ಅಶ್ವಮೇಧ ಬಸ್ಸಿಗೆ ಸರತಿ ಸಾಲಿನಲ್ಲಿ ಪ್ರಯಾಣಿಕರನ್ನು ಕಳುಹಿಸುವ ವ್ಯವಸ್ಥೆಯನ್ನು ಪೊಲೀಸ್ ಇಲಾಖೆಯ ನೆರವಿನಿಂದ ಕೆಎಸ್ಸಾರ್ಟಿಸಿ ಮಾಡಿದೆ. ಬಸ್ ಏರಿದವರು ಯಾವುದೇ ಕಾರಣಕ್ಕೆ ಕೆಳಗೆ ಇಳಿಯುವಂತಿರಲಿಲ್ಲ. ಈ ಷರತ್ತನ್ನು ಪ್ರಯಾಣಿಕರಿಗೆ ಮುಂಚೆಯೇ ತಿಳಿಸಿ ಬಸ್ ಹತ್ತಿಸಲಾಗುತ್ತಿತ್ತು.
ವೀಕೆಂಡ್ ದಿನಗಳಾದ ಶನಿವಾರ ಮತ್ತು ಭಾನುವಾರ ದೇವಿಯ ದರ್ಶನಕ್ಕೆ ಭಾರೀ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು. ಲಕ್ಷಾಂತರ ಭಕ್ತರು ಸರತಿ ಸಾಲಿನಲ್ಲಿ ನಿಂತು ಅಧಿ ದೇವತೆಯ ದರ್ಶನ ಪಡೆದು ಪುನೀತರಾದರು. ಒಂದು ಅಂದಾಜು ಪ್ರಕಾರ 20 ಲಕ್ಷಕ್ಕೂ ಹೆಚ್ಚು ಭಕ್ತರು ಹಾಸನಾಂಬೆ ದೇವಿ ದರ್ಶನ ಪಡೆದಿದ್ದಾರೆ. ಅಕ್ಟೋಬರ್ 24 ರಿಂದ ಆರಂಭಗೊಂಡಿದ್ದ ಹಾಸನಾಂಬೆ ದೇವಿ ಜಾತ್ರಾ ಮಹೋತ್ಸವ ಅದ್ದೂರಿ ಮತ್ತು ವಿಜೃಂಭಣೆಯಿಂದ ಜರುಗಿತು.

ಇತ್ತೀಚಿನ ಸುದ್ದಿ

ಜಾಹೀರಾತು