3:50 PM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಪ್ರವಾಸಕ್ಕೆ ಬಂದಿದ್ದ ಬೆಂಗಳೂರು ಟೆಕ್ಕಿ ಹೆಬ್ಬೆ ಜಲಪಾತದಲ್ಲಿ ನೀರುಪಾಲು: ಗೆಳೆಯರ ಜತೆ ಬಂದಿದ್ದ ಯುವಕ

04/11/2024, 11:08

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹೆಬ್ಬೆ ಜಲಪಾತದಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಅಮಿತ್ ಕುಮಾರ್ (30) ಮೃತ‌ ದುರ್ದೈವಿ.


ತರೀಕೆರೆ ತಾಲೂಕಿನ ಕೆಮ್ಮಣ್ಣುಗುಂಡಿ ಸಮೀಪದ ಹೆಬ್ಬೆ ಜಲಪಾತದಲ್ಲಿ ಯುವಕ ನೀರು ಪಾಲಾಗಿದ್ದ. ಮೃತ ಅಮಿತ್ ಮೂಲತಃ ಛತ್ತೀಸ್ ಘಡದ ನಿವಾಸಿ.ಸಲಾಂ ಕರೀಂ ಎಂಬ ಸ್ನೇಹಿತನ ಜೊತೆ ಪ್ರವಾಸಕ್ಕೆ ಅಮಿತ್ ಬಂದಿದ್ದ.
ಸಲಾಂ ಕರೀಂ ಮೂಲತಃ ತಮಿಳು‌ನಾಡಿನ ಸ್ನೇಹಿತ.
ಬೆಂಗಳೂರಿನಲ್ಲಿ ಇಬ್ಬರು ಒಂದೇ ರೂಂನಲ್ಲಿದ್ದು, ಬೇರೆ-ಬೇರೆ ಕಂಪನಿಯಲ್ಲಿ ಕೆಲಸ ಮಾಡ್ತಿದ್ರು. 3 ದಿನಗಳ ಹಿಂದೆ ಚಿಕ್ಕಮಗಳೂರು ಜಿಲ್ಲೆಗೆ ಪ್ರವಾಸಕ್ಕೆ ಬಂದಿದ್ದರು.
ಇಂದು ಹೆಬ್ಬೆ ಜಲಪಾತದಲ್ಲಿ ಈಜಲು ಹೋದಾಗ ನೀರಿನಲ್ಲಿ ಮುಳುಗಿ ಅಮಿತ್ ಸಾವನ್ನಪ್ಪಿದ್ದಾನೆ.
ಫಾರೆಸ್ಟ್ ಗಾರ್ಡ್ ಆಳ ಇದೆ ಬೇಡ ಎಂದರೂ ಈಜಲು ಹೋಗಿದ್ದ ಯುವಕ ನೀರುಪಾಲಾಗಿದ್ದ. ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು