3:57 AM Saturday20 - September 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಇತ್ತೀಚಿನ ಸುದ್ದಿ

ನಂಜನಗೂಡು: ಸಂಭ್ರಮದಿಂದ ಸಂಪನ್ನಗೊಂಡ ಶ್ರೀಕಾರ್ಯ ಸಿದ್ದೇಶ್ವರ ಸ್ವಾಮಿ ರಥೋತ್ಸವ

04/11/2024, 11:18

*ರಥೋತ್ಸವದ ಖುರ್ಜನ್ನು ಬೆಟ್ಟದ ಮೇಲಕ್ಕೆ ಹೆಗಲ ಮೇಲೆ ಹೊತ್ತ್ಯೋಯ್ದ ಭಕ್ತರು*
.
ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಕಾರ್ಯ ಶ್ರೀ ಸಿದ್ದೇಶ್ವರ ಸ್ವಾಮಿಯ ರಥೋತ್ಸವವು ವಿಜೃಂಭಣೆಯಿಂದ ಜರುಗಿತು.
ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಹೋಬಳಿ ವ್ಯಾಪ್ತಿಯ ಕಾರ್ಯ ಗ್ರಾಮದಲ್ಲಿ ಶ್ರೀ ಸಿದ್ದೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವ ಸುಮಾರು ಮೂರು ದಿನಗಳ ಕಾಲ ನಡೆಸಲಾಗುತ್ತದೆ. ಮುಂಜಾನೆ ಅರ್ಚಕರು ಕಾಲ್ನಡಿಗೆಯಲ್ಲಿ ನಡೆದುಕೊಂಡು ಹೋಗಿ ಸುತ್ತೂರಿನ ಕಪಿಲಾ ನದಿಯಲ್ಲಿ ನೀರನ್ನು ತಂದು ಶ್ರೀ ಸಿದ್ದೇಶ್ವರ ಸ್ವಾಮಿಯ ವಿಗ್ರಹಕ್ಕೆ ಅಭಿಷೇಕ ಮಾಡಿ ವಿವಿಧ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಲಾಗುತ್ತದೆ. ಗ್ರಾಮದಲ್ಲಿ ಶ್ರೀ ಸಿದ್ದೇಶ್ವರ ಸ್ವಾಮಿಯವರ ಪಲ್ಲಕ್ಕಿ ಉತ್ಸವಕ್ಕೆ ಗ್ರಾಮಸ್ಥರು ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ವಾಟಳು ಮಠದ ಶ್ರೀ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿಗಳು ವಿದ್ಯುಕ್ತವಾಗಿ ಚಾಲನೆ ನೀಡಿದರು.


ನಂತರ ಬಣ್ಣ,ಬಣ್ಣದ ಬಾವುಟ ಹಾಗೂ ಹೂವುಗಳಿಂದ ಶೃಂಗರಿಸಲಾಗಿದ್ದ ಐತಿಹಾಸಿಕ ಖುರ್ಜು ರಥವನ್ನು ಗ್ರಾಮಸ್ಥರು ಊರಿನ ಹೊರವಲಯದ ತನಕ ಎಳೆದರು. ನಂತರ ಗ್ರಾಮಸ್ಥರು ಮತ್ತು ಭಕ್ತರು ತಮ್ಮ ಹೆಗಲ ಮೇಲೆ ಖುರ್ಜು ರಥವನ್ನು ಶ್ರೀ ಸಿದ್ದೇಶ್ವರ ಸ್ವಾಮಿಯ ಬೆಟ್ಟಕ್ಕೆ ಹೊತ್ತುಕೊಂಡು ತೆರಳಿದರು ರಥೋತ್ಸವಕ್ಕೆ ಭಕ್ತರು ಹಣ್ಣು ಜವನ ಎಸೆದು ಪುನೀತರಾದರು. ಬೆಟ್ಟದ ಮೇಲಕ್ಕೆ ಹೆಗಲ ಮೇಲೆ ಹೊತ್ತುಕೊಂಡು ಬರುತ್ತಿದ್ದ ದೃಶ್ಯ ಕಂಡು ಮೈ ರೋಮಾಂಚನಗೊಂಡಿತು. ಉಘೇ ಉಘೇ ಸಿದ್ದೇಶ್ವರ ಎಂದು ಭಕ್ತರು ಘೋಷಣೆ ಕೂಗುತ್ತ ಸಾಗಿದರು. ಲಕ್ಷಾಂತರ ಭಕ್ತರು ಈ ದೃಶ್ಯವನ್ನು ಕಣ್ತುಂಬಿಕೊಂಡರು. ಹರಕೆ ಹೊತ್ತ ಭಕ್ತರು ಮಜ್ಜಿಗೆ ಪಾನಕ ಸೇರಿದಂತೆ ತಂಪು ಪಾನೀಯವನ್ನು ವಿತರಿಸಿದರು. ವಿವಿದೆಡೆಯಿಂದ ಸಾವಿರಾರು ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡು ತಮ್ಮ ಭಕ್ತಿ ಭಾವ ಮೆರೆದರು.ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು ‌.

ಇತ್ತೀಚಿನ ಸುದ್ದಿ

ಜಾಹೀರಾತು