2:57 PM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ನಂಜನಗೂಡು: ಸಂಭ್ರಮದಿಂದ ಸಂಪನ್ನಗೊಂಡ ಶ್ರೀಕಾರ್ಯ ಸಿದ್ದೇಶ್ವರ ಸ್ವಾಮಿ ರಥೋತ್ಸವ

04/11/2024, 11:18

*ರಥೋತ್ಸವದ ಖುರ್ಜನ್ನು ಬೆಟ್ಟದ ಮೇಲಕ್ಕೆ ಹೆಗಲ ಮೇಲೆ ಹೊತ್ತ್ಯೋಯ್ದ ಭಕ್ತರು*
.
ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಕಾರ್ಯ ಶ್ರೀ ಸಿದ್ದೇಶ್ವರ ಸ್ವಾಮಿಯ ರಥೋತ್ಸವವು ವಿಜೃಂಭಣೆಯಿಂದ ಜರುಗಿತು.
ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಹೋಬಳಿ ವ್ಯಾಪ್ತಿಯ ಕಾರ್ಯ ಗ್ರಾಮದಲ್ಲಿ ಶ್ರೀ ಸಿದ್ದೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವ ಸುಮಾರು ಮೂರು ದಿನಗಳ ಕಾಲ ನಡೆಸಲಾಗುತ್ತದೆ. ಮುಂಜಾನೆ ಅರ್ಚಕರು ಕಾಲ್ನಡಿಗೆಯಲ್ಲಿ ನಡೆದುಕೊಂಡು ಹೋಗಿ ಸುತ್ತೂರಿನ ಕಪಿಲಾ ನದಿಯಲ್ಲಿ ನೀರನ್ನು ತಂದು ಶ್ರೀ ಸಿದ್ದೇಶ್ವರ ಸ್ವಾಮಿಯ ವಿಗ್ರಹಕ್ಕೆ ಅಭಿಷೇಕ ಮಾಡಿ ವಿವಿಧ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಲಾಗುತ್ತದೆ. ಗ್ರಾಮದಲ್ಲಿ ಶ್ರೀ ಸಿದ್ದೇಶ್ವರ ಸ್ವಾಮಿಯವರ ಪಲ್ಲಕ್ಕಿ ಉತ್ಸವಕ್ಕೆ ಗ್ರಾಮಸ್ಥರು ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ವಾಟಳು ಮಠದ ಶ್ರೀ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿಗಳು ವಿದ್ಯುಕ್ತವಾಗಿ ಚಾಲನೆ ನೀಡಿದರು.


ನಂತರ ಬಣ್ಣ,ಬಣ್ಣದ ಬಾವುಟ ಹಾಗೂ ಹೂವುಗಳಿಂದ ಶೃಂಗರಿಸಲಾಗಿದ್ದ ಐತಿಹಾಸಿಕ ಖುರ್ಜು ರಥವನ್ನು ಗ್ರಾಮಸ್ಥರು ಊರಿನ ಹೊರವಲಯದ ತನಕ ಎಳೆದರು. ನಂತರ ಗ್ರಾಮಸ್ಥರು ಮತ್ತು ಭಕ್ತರು ತಮ್ಮ ಹೆಗಲ ಮೇಲೆ ಖುರ್ಜು ರಥವನ್ನು ಶ್ರೀ ಸಿದ್ದೇಶ್ವರ ಸ್ವಾಮಿಯ ಬೆಟ್ಟಕ್ಕೆ ಹೊತ್ತುಕೊಂಡು ತೆರಳಿದರು ರಥೋತ್ಸವಕ್ಕೆ ಭಕ್ತರು ಹಣ್ಣು ಜವನ ಎಸೆದು ಪುನೀತರಾದರು. ಬೆಟ್ಟದ ಮೇಲಕ್ಕೆ ಹೆಗಲ ಮೇಲೆ ಹೊತ್ತುಕೊಂಡು ಬರುತ್ತಿದ್ದ ದೃಶ್ಯ ಕಂಡು ಮೈ ರೋಮಾಂಚನಗೊಂಡಿತು. ಉಘೇ ಉಘೇ ಸಿದ್ದೇಶ್ವರ ಎಂದು ಭಕ್ತರು ಘೋಷಣೆ ಕೂಗುತ್ತ ಸಾಗಿದರು. ಲಕ್ಷಾಂತರ ಭಕ್ತರು ಈ ದೃಶ್ಯವನ್ನು ಕಣ್ತುಂಬಿಕೊಂಡರು. ಹರಕೆ ಹೊತ್ತ ಭಕ್ತರು ಮಜ್ಜಿಗೆ ಪಾನಕ ಸೇರಿದಂತೆ ತಂಪು ಪಾನೀಯವನ್ನು ವಿತರಿಸಿದರು. ವಿವಿದೆಡೆಯಿಂದ ಸಾವಿರಾರು ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡು ತಮ್ಮ ಭಕ್ತಿ ಭಾವ ಮೆರೆದರು.ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು ‌.

ಇತ್ತೀಚಿನ ಸುದ್ದಿ

ಜಾಹೀರಾತು