9:04 AM Monday30 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ವಕ್ಫ್ ಬೋರ್ಡ್ ಪ್ರಕರಣ ನಿಜಾಮರ ಕಾಲ ನೆನಪಾಗುತ್ತಿದೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಿಡಿ

04/11/2024, 19:09

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail com

ರಾಜ್ಯದ ದೇವಾಲಯ, ಮಠ, ಬಡವರ ದಲಿತರ ಜಮೀನುಗಳನ್ನು ವಕ್ಫ್ ಹೆಸರಲ್ಲಿ ಲಪಟಾಯಿಸುವ ಪ್ರಯತ್ನ ನಡೆಯುತ್ತಿರುವುದು ನಿಜಾಮರ ಕಾಲದ ದರೋಡೆ ನೆನೆಪಾಗುತ್ತಿದೆ ಎಂದು ಬಿಜೆಪಿಯ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಅವರು ರೈತರ ಪಹಣಿಗಳಲ್ಲಿ ವಕ್ಪ್ ಹೆಸರು ಸೇರಿಸುತ್ತಿರುವುದರ ವಿರುದ್ದ ಇಂದು ನಗರದಲ್ಲಿ ನಾರಾಯಣರಾವ್ ಪಾರಗಕ್ ನಿಂದ ಡಿಸಿ ಕಚೇರಿ ವರೆಗೆ ಹಮ್ಮಿಕೊಂಡಿದ್ದ ಪ್ರತಿಭಟನಾ ರ್‍ಯಾಲಿಯಲ್ಲಿ ಮಾತನಾಡಿದರು.
ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರದ ಆಡಳಿತ 15 ಸಾವಿರಕ್ಕೂ ಹೆಚ್ಚು ಎಕರೆ ಜಮೀನು ಕೊಳ್ಳೆ ಹೊಡೆಯುವ ಪ್ರಯತ್ನ ಸಚಿವ ಜಮೀರ್ ಅಹಮ್ಮದ್ ಮೂಲಕ ಮಾಡುತ್ತಿದೆ. ರೈತ ವಿರೋಧಿಯಾಗಿರುವ ಜಮೀರ್ ಡಿಸಿಗಳನ್ನು ಬೆದರಿಸಿ ರೈತರ ಜಮೀನು ಒಕ್ಕಲೆಬ್ಬಿಸುವ ಕೆಲಸ ಮಾಡುತ್ತಿದ್ದಾರೆ.
ಜಮೀರ್ ಅಹಮ್ಮದ್ ತೀವ್ರ ವಾಗ್ದಾಳಿ ನಡೆಸಿದ ಅವರು, ಬಿಜಾಪುರ, ಕೊಪ್ಪಳ, ಕಲ್ಬುರ್ಗಿ ಜಿಲ್ಲೆಗಳಲ್ಲಿ ವಕ್ಫ್ ಆಸ್ತಿ ಎಂದು ಸಿದ್ದರಾಮಯ್ಯನವರೇ 420 ಜಮೀರನಿಂದ ಈ ದಬ್ಬಾಳಿಕೆ ಮಾಡುತ್ತಿದ್ದಾರೆ.
ಇದನ್ನು ನೋಡಿ ಸುಮ್ಮನಿರಲ್ಲ. ಅದಕ್ಕಾಗಿ ಪ್ರಧಾನ ಮಂತ್ರಿಮೋದಿ ಅವರು ವಕ್ಫ್ ಕಾಯ್ದೆ ತಿದ್ದುಪಡಿಗೆ ಸಂಸತ್ ಉಪ ಸಮಿತಿ ರಚಿಸಿದ್ದಾರೆಂದರು.
ಜಮೀರ್ ಅವರ ದುಸ್ಸಾಹಸ ಹಿಂದು ವಿರೋಧಿಯಾಗಿದೆ. ಇದು ರಾಜ್ಯದ ದುರ್ದೈವ ಎಂದ ವಿಜಯೇಂದ್ರ, ನೀವು ಪ್ರಾಮಾಣಿಕರಿದ್ದರೆ ವಕ್ಫ್ ಹೆಸರಲ್ಲಿ ಜಮೀನು ಲೂಟಿ ಮಾಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಸವಾಲು ಹಾಕಿದರು.
ವಕ್ಫ್ ದಬ್ಬಾಳಿಕೆ ವಿರುದ್ಧ ಹೋರಾಟಕ್ಕೆ ರಾಜ್ಯಾದ್ಯಂತ ನ್ಯಾಯವಾದಿಗಳ ತಂಡ ರಚನೆ ಮಾಡಿದೆ. ವಕ್ಪ್ ನೋಟೀಸ್ ನೀಡಿದರೆ ನಮ್ಮ ವಕೀಲರನ್ನು ಭೇಟಿ ಮಾಡಿ. ಯಾವುದೇ ಕಾರಣಕ್ಕೂ ರೈತರ ಒಂದು ಇಂಚು ಜಮೀನು ವಕ್ಪ್ ಪಾಲಾಗ ಬಾರದು ಎಂದು ಈ ಪ್ರತಿಭಟನೆಯ ಹೋರಾಟದ ಮೂಲಕ ರಾಜ್ಯದ ರೈತರಿಗೆ ಧೈರ್ಯ ನೀಡಲಿದೆ ಎಂದರು.
ಈ ವೇಳೆ ಸಂಸದ ಗೋವಿಂದ ಕಾರಜೋಳ,ಬಿ. ಶ್ರೀರಾಮುಲು, ಜನಾರ್ಧನ ರೆಡ್ಡಿ, ಅನಿಲ್ ನಾಯ್ಡು, ಸೋಮಶೇಖರ ರೆಡ್ಡಿ, ಗಣಪಾಲ ಐನಾಥ ರೆಡ್ಡಿ, ಸಣ್ಣ ಪಕ್ಕೀರಪ್ಪ. ಕೆ.ಎ.ರಾಲಿಲಿಂಗಪ್ಪ, ಡಾ.ಎಸ್.ಜೆವಿ.ಮಹಿಪಾಲ್ , ಎಸ್. ಗುರುಲಿಂಗನಗೌಡ, ಹೆಚ್.ಹನುಂಮತಪ್ಪ, ಪಾರ್ವತಿ ಇಂದು ಶೇಖರ್, ಸುರೇಖ ಮಲ್ಲನಗೌಡ ಮೊದಲಾದವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು