8:29 AM Tuesday26 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

ಉಸಿರುಗಟ್ಟಿ ಸಾವು: ಬಾಲಕೃಷ್ಣ ಸಾವಿನ ಪ್ರಕರಣಕ್ಕೆ ಮಹತ್ವದ ಸಾಕ್ಷ್ಮ ಲಭ್ಯ; ಪತ್ನಿಯ ದುಷ್ಕೃತ್ಯಕ್ಕೆ ದೊರೆತ ದೊಡ್ಡ ಪುರಾವೆ

04/11/2024, 22:43

ಕಾರ್ಕಳ(reporterkarnataka.com): ಬಾಲಕೃಷ್ಣ ಉಸಿರುಗಟ್ಟಿ ಸಾವು ಸಂಭವಿಸಿದೆ ಎಂದು ಮರಣೋತ್ತರ ವರದಿಯಲ್ಲಿ ಬಹಿರಂಗವಾಗಿದ್ದು, ಇದೀಗ ಕೊಲೆ ಪ್ರಕರಣಕ್ಕೆ ಬಲವಾದ ಸಾಕ್ಷ್ಯಲಭಿಸಿದೆ.


ಅಜೆಕಾರು ನಿವಾಸಿ ಬಾಲಕೃಷ್ಣ ಪೂಜಾರಿ ಅವನ್ನು ಆತನ ಪತ್ನಿ, ರೀಲ್ಸ್ ರಾಣಿ ಎಂದೇ ಖ್ಯಾತಳಾಗಿದ್ದ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ದಿಲೀಪ್‌ ಹೆಗ್ಡೆ ಸೇರಿ ಹತ್ಯೆಗೈದು ಬಳಿಕ ಇದು ಸಹಜ ಸಾವು ಎಂದು ನಾಟಕವಾಡಿದ್ದರು. ಈ ಸಾವಿನ ಕುರಿತು ಮೃತ ಬಾಲಕೃಷ್ಣ ಪೂಜಾರಿಯವರ ತಂದೆ ಸಂಜೀವ ಪೂಜಾರಿ ಹಾಗೂ ಪತ್ನಿ ಪ್ರತಿಮಾಳ ಸಹೋದರ ಸಂದೀಪ್ ಪೂಜಾರಿ ಸಂಶಯ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಅಜೆಕಾರು ಪೊಲೀಸರು ಅಸಹಜ ಸಾವು ಪ್ರಕರಣ ಈ ಹಿನ್ನಲೆಯಲ್ಲಿ ಅಜೆಕಾರು ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ಶವದ ಮರಣೋತ್ತರ ವರದಿ ಹಾಗೂ ಶವದ ಅಂಗಾಗಗಳ ಸ್ಯಾಂಪಲ್‌ಗಳನ್ನು ಎಫ್‌ಎಸ್‌ಎಲ್ ಗೆ ರವಾನಿಸಿದ್ದರು. ಈ ಪೈಕಿ ಮಣಿಪಾಲ ಆಸ್ಪತ್ರೆಯಿಂದ ಶವದ ಮರಣೋತ್ತರ ಪರೀಕ್ಷಾ ವರದಿ ಪೊಲೀಸರ ಕೈಸೇರಿದ್ದು ಬಾಲಕೃಷ್ಣ ಪೂಜಾರಿ ಸಾವಿನ ಕುರಿತು ಆತನ ಸಂಬಧಿಕರು ನೀಡಿರುವ ಸಂಶಯಾಸ್ಪದ ದೂರಿಗೆ ಹಾಗೂ ವೈದ್ಯಕೀಯ ವರದಿಗೆ ತಾಳೆಯಾಗುತ್ತಿದ್ದು ಬಾಲಕೃಷ್ಣ ಪೂಜಾರಿಯವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಹಾಗೂ ಆ ಸಂದರ್ಭದಲ್ಲಿ ಮುಖದ ಮೇಲೆ ಗಾಯದ ಗುರುತುಗಳು ಮೂಡಿವೆ ಎಂದು ಪೋಸ್ಟ್ ಮಾರ್ಟಮ್ ವರದಿಯಲ್ಲಿ ಬಹಿರಂಗವಾಗಿದೆ ಎಂದು ತಿಳಿದು ಬಂದಿದೆ.
ಮರಣೋತ್ತರ ವರದಿ ಆಧಾರಿಸಿ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು