3:38 PM Tuesday1 - September 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಉಸಿರುಗಟ್ಟಿ ಸಾವು: ಬಾಲಕೃಷ್ಣ ಸಾವಿನ ಪ್ರಕರಣಕ್ಕೆ ಮಹತ್ವದ ಸಾಕ್ಷ್ಮ ಲಭ್ಯ; ಪತ್ನಿಯ ದುಷ್ಕೃತ್ಯಕ್ಕೆ ದೊರೆತ ದೊಡ್ಡ ಪುರಾವೆ

04/11/2024, 22:43

ಕಾರ್ಕಳ(reporterkarnataka.com): ಬಾಲಕೃಷ್ಣ ಉಸಿರುಗಟ್ಟಿ ಸಾವು ಸಂಭವಿಸಿದೆ ಎಂದು ಮರಣೋತ್ತರ ವರದಿಯಲ್ಲಿ ಬಹಿರಂಗವಾಗಿದ್ದು, ಇದೀಗ ಕೊಲೆ ಪ್ರಕರಣಕ್ಕೆ ಬಲವಾದ ಸಾಕ್ಷ್ಯಲಭಿಸಿದೆ.


ಅಜೆಕಾರು ನಿವಾಸಿ ಬಾಲಕೃಷ್ಣ ಪೂಜಾರಿ ಅವನ್ನು ಆತನ ಪತ್ನಿ, ರೀಲ್ಸ್ ರಾಣಿ ಎಂದೇ ಖ್ಯಾತಳಾಗಿದ್ದ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ದಿಲೀಪ್‌ ಹೆಗ್ಡೆ ಸೇರಿ ಹತ್ಯೆಗೈದು ಬಳಿಕ ಇದು ಸಹಜ ಸಾವು ಎಂದು ನಾಟಕವಾಡಿದ್ದರು. ಈ ಸಾವಿನ ಕುರಿತು ಮೃತ ಬಾಲಕೃಷ್ಣ ಪೂಜಾರಿಯವರ ತಂದೆ ಸಂಜೀವ ಪೂಜಾರಿ ಹಾಗೂ ಪತ್ನಿ ಪ್ರತಿಮಾಳ ಸಹೋದರ ಸಂದೀಪ್ ಪೂಜಾರಿ ಸಂಶಯ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಅಜೆಕಾರು ಪೊಲೀಸರು ಅಸಹಜ ಸಾವು ಪ್ರಕರಣ ಈ ಹಿನ್ನಲೆಯಲ್ಲಿ ಅಜೆಕಾರು ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ಶವದ ಮರಣೋತ್ತರ ವರದಿ ಹಾಗೂ ಶವದ ಅಂಗಾಗಗಳ ಸ್ಯಾಂಪಲ್‌ಗಳನ್ನು ಎಫ್‌ಎಸ್‌ಎಲ್ ಗೆ ರವಾನಿಸಿದ್ದರು. ಈ ಪೈಕಿ ಮಣಿಪಾಲ ಆಸ್ಪತ್ರೆಯಿಂದ ಶವದ ಮರಣೋತ್ತರ ಪರೀಕ್ಷಾ ವರದಿ ಪೊಲೀಸರ ಕೈಸೇರಿದ್ದು ಬಾಲಕೃಷ್ಣ ಪೂಜಾರಿ ಸಾವಿನ ಕುರಿತು ಆತನ ಸಂಬಧಿಕರು ನೀಡಿರುವ ಸಂಶಯಾಸ್ಪದ ದೂರಿಗೆ ಹಾಗೂ ವೈದ್ಯಕೀಯ ವರದಿಗೆ ತಾಳೆಯಾಗುತ್ತಿದ್ದು ಬಾಲಕೃಷ್ಣ ಪೂಜಾರಿಯವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಹಾಗೂ ಆ ಸಂದರ್ಭದಲ್ಲಿ ಮುಖದ ಮೇಲೆ ಗಾಯದ ಗುರುತುಗಳು ಮೂಡಿವೆ ಎಂದು ಪೋಸ್ಟ್ ಮಾರ್ಟಮ್ ವರದಿಯಲ್ಲಿ ಬಹಿರಂಗವಾಗಿದೆ ಎಂದು ತಿಳಿದು ಬಂದಿದೆ.
ಮರಣೋತ್ತರ ವರದಿ ಆಧಾರಿಸಿ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು