7:21 AM Monday30 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಉಸಿರುಗಟ್ಟಿ ಸಾವು: ಬಾಲಕೃಷ್ಣ ಸಾವಿನ ಪ್ರಕರಣಕ್ಕೆ ಮಹತ್ವದ ಸಾಕ್ಷ್ಮ ಲಭ್ಯ; ಪತ್ನಿಯ ದುಷ್ಕೃತ್ಯಕ್ಕೆ ದೊರೆತ ದೊಡ್ಡ ಪುರಾವೆ

04/11/2024, 22:43

ಕಾರ್ಕಳ(reporterkarnataka.com): ಬಾಲಕೃಷ್ಣ ಉಸಿರುಗಟ್ಟಿ ಸಾವು ಸಂಭವಿಸಿದೆ ಎಂದು ಮರಣೋತ್ತರ ವರದಿಯಲ್ಲಿ ಬಹಿರಂಗವಾಗಿದ್ದು, ಇದೀಗ ಕೊಲೆ ಪ್ರಕರಣಕ್ಕೆ ಬಲವಾದ ಸಾಕ್ಷ್ಯಲಭಿಸಿದೆ.


ಅಜೆಕಾರು ನಿವಾಸಿ ಬಾಲಕೃಷ್ಣ ಪೂಜಾರಿ ಅವನ್ನು ಆತನ ಪತ್ನಿ, ರೀಲ್ಸ್ ರಾಣಿ ಎಂದೇ ಖ್ಯಾತಳಾಗಿದ್ದ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ದಿಲೀಪ್‌ ಹೆಗ್ಡೆ ಸೇರಿ ಹತ್ಯೆಗೈದು ಬಳಿಕ ಇದು ಸಹಜ ಸಾವು ಎಂದು ನಾಟಕವಾಡಿದ್ದರು. ಈ ಸಾವಿನ ಕುರಿತು ಮೃತ ಬಾಲಕೃಷ್ಣ ಪೂಜಾರಿಯವರ ತಂದೆ ಸಂಜೀವ ಪೂಜಾರಿ ಹಾಗೂ ಪತ್ನಿ ಪ್ರತಿಮಾಳ ಸಹೋದರ ಸಂದೀಪ್ ಪೂಜಾರಿ ಸಂಶಯ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಅಜೆಕಾರು ಪೊಲೀಸರು ಅಸಹಜ ಸಾವು ಪ್ರಕರಣ ಈ ಹಿನ್ನಲೆಯಲ್ಲಿ ಅಜೆಕಾರು ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ಶವದ ಮರಣೋತ್ತರ ವರದಿ ಹಾಗೂ ಶವದ ಅಂಗಾಗಗಳ ಸ್ಯಾಂಪಲ್‌ಗಳನ್ನು ಎಫ್‌ಎಸ್‌ಎಲ್ ಗೆ ರವಾನಿಸಿದ್ದರು. ಈ ಪೈಕಿ ಮಣಿಪಾಲ ಆಸ್ಪತ್ರೆಯಿಂದ ಶವದ ಮರಣೋತ್ತರ ಪರೀಕ್ಷಾ ವರದಿ ಪೊಲೀಸರ ಕೈಸೇರಿದ್ದು ಬಾಲಕೃಷ್ಣ ಪೂಜಾರಿ ಸಾವಿನ ಕುರಿತು ಆತನ ಸಂಬಧಿಕರು ನೀಡಿರುವ ಸಂಶಯಾಸ್ಪದ ದೂರಿಗೆ ಹಾಗೂ ವೈದ್ಯಕೀಯ ವರದಿಗೆ ತಾಳೆಯಾಗುತ್ತಿದ್ದು ಬಾಲಕೃಷ್ಣ ಪೂಜಾರಿಯವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಹಾಗೂ ಆ ಸಂದರ್ಭದಲ್ಲಿ ಮುಖದ ಮೇಲೆ ಗಾಯದ ಗುರುತುಗಳು ಮೂಡಿವೆ ಎಂದು ಪೋಸ್ಟ್ ಮಾರ್ಟಮ್ ವರದಿಯಲ್ಲಿ ಬಹಿರಂಗವಾಗಿದೆ ಎಂದು ತಿಳಿದು ಬಂದಿದೆ.
ಮರಣೋತ್ತರ ವರದಿ ಆಧಾರಿಸಿ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು