12:34 PM Tuesday1 - September 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಸಂಡೂರು ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಪರ ಸಚಿವ ಕೆ.ಜೆ. ಜಾರ್ಜ್ ಪ್ರಚಾರ: ಕೇಂದ್ರದ ವಿರುದ್ಧ ಕಿಡಿ

04/11/2024, 23:22

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಕೇಂದ್ರಕ್ಕೆ ಕರ್ನಾಟಕ ಹೆಚ್ಚಿನ ತೆರಿಗೆ ಸಂಗ್ರಹಿಸಿ ಕೊಡುತ್ತಿದ್ದರೂ ಅದಕ್ಕೆ ಪ್ರತಿಯಾಗಿ ರಾಜ್ಯಕ್ಕೆ ಕೇಂದ್ರ ನೀಡುತ್ತಿರುವುದು ಅಲ್ಪ ಪಾಲು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ಆಕ್ರೋಶ ವ್ಯಕ್ತಪಡಿಸಿದರು.
ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರ ಪರ ಸೋಮವಾರ ಪ್ರಚಾರ ಕೈಗೊಂಡರು. ‘ಓ ಮೇಘ ಬಿಲಿವರ್ಸ್ ಚರ್ಚ್’ ಸಭಾಂಗಣದಲ್ಲಿ ಆಯೋಜಿಸಿದ್ದ ಕ್ರೈಸ್ತ ಸಮುದಾಯದ ಸಭೆಯಲ್ಲಿ ಮಾತನಾಡಿದ ಅವರು ‘ಈ ಹಿಂದೆನಂತೇ ಈ ಬಾರಿಯೂ ಕಾಂಗ್ರೆಸ್‌ಗೆ ಮತ ನೀಡಿ, ಅನ್ನಪೂರ್ಣ ಅವರನ್ನು ಗೆಲ್ಲಿಸಿ’ ಎಂದು ಮನವಿ ಮಾಡಿದರು.
‘ಕರ್ನಾಟಕ ಇಂದು ಕೇಂದ್ರಕ್ಕೆ ಹೆಚ್ಚಿನ ತೆರಿಗೆ ಕೊಡುತ್ತಿದೆ. ಆದರೆ ನಮಗೆ ಕೇಂದ್ರದಿಂದ ಸಿಗುತ್ತಿರುವುದು ಅಲ್ಪ ಪಾಲು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇಲ್ಲ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ಇಂಥ ಅನ್ಯಾಯ ಮಾಡಬಾರದು. ಎಲ್ಲರನ್ನೂ ಜೊತೆ ಸೇರಿಸಿಕೊಂಡು, ಮುನ್ನಡೆಯುತ್ತಿರುವ ಪಕ್ಷ ಕಾಂಗ್ರೆಸ್‌. ಈ ಬಾರಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲ್ಲಿಸಿ’ ಎಂದು ಮನವಿ ಮಾಡಿದರು.
ಅಭ್ಯರ್ಥಿ ಅನ್ನಪೂರ್ಣ ಮಾತನಾಡಿ, ‘ಸಂಡೂರಿನ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕಾಂಗ್ರೆಸ್‌ ಪಕ್ಷ ಮಹಿಳೆಗೆ ಅವಕಾಶ ನೀಡಿದೆ. ಈ ಹಿಂದೆ ಬೆಂಬಲ ನೀಡಿದಂತೆ ಈ ಬಾರಿಯೂ ಅವಕಾಶ ನೀಡಿ’ ಎಂದು ಮನವಿ ಮಾಡಿದರು.
ಎಐಸಿಸಿ ಮುಖಂಡರಾದ ಗೋಪಿನಾಥ್, ಕೆಪಿಸಿಸಿ ವಕ್ತಾರ ವೆಂಕಟೇಶ ಹೆಗಡೆ, ಪದಾಧಿಕಾರಿಗಳು, ಜಿಲ್ಲಾ ಮಹಿಳಾ ಕಾಂಗ್ರೆಸ್‌ ಪದಾಧಿಕಾರಿಗಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು