8:31 AM Sunday22 - June 2025
ಬ್ರೇಕಿಂಗ್ ನ್ಯೂಸ್
Bagalkote | ಪಟ್ಟದಕಲ್ಲು ವಿಶ್ವ ಪರಂಪರೆ ತಾಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… Udupi | ನೈತಿಕ ಪಾಠ ಶಾಸಕ ಸುನಿಲ್ ಕುಮಾರ್ ಹೇಳಿ ಕೊಡಬೇಕಿಲ್ಲ: ಸಚಿವೆ… ಜಿಲ್ಲಾಸ್ಪತ್ರೆಗಳು, ಆರೋಗ್ಯ ಕೇಂದ್ರಗಳಲ್ಲಿ ಯೋಗ ಮಂದಿರ ಸ್ಥಾಪನೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪಾಲಿಕೆ ಮೇಲೆ ಲೋಕಾಯುಕ್ತ ದಾಳಿ: ಕಂದಾಯ, ಆರೋಗ್ಯ ಹಾಗೂ ಎಂಜಿನಿಯರಿಂಗ್ ವಿಭಾಗಗಳ ತೀವ್ರ… Bangalore | ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ: ರಾಜ್ಯಾದ್ಯಂತ ಪರಿಸರ… Power Minister | ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ; ನೌಕರರ ಬೇಡಿಕೆಗಳಿಗೆ ಸ್ಪಂದನೆ:… ವಿದ್ಯುತ್ ಪ್ರಸರಣ ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ: ಮುಖ್ಯಮಂತ್ರಿ… ಎಂಜಿಎನ್ ವಿವೈ ಕ್ರಿಯಾ ಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ನಗರಾಭಿವೃದ್ಧಿ ಸಚಿವ… Yoga in Karnataka | ವಿಶ್ವ ಯೋಗ ದಿನದಂದು ‘ಯೋಗ ಸಂಗಮ’: ರಾಜ್ಯಾದ್ಯಂತ… Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ

ಇತ್ತೀಚಿನ ಸುದ್ದಿ

ಸಂಡೂರು ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಪರ ಸಚಿವ ಕೆ.ಜೆ. ಜಾರ್ಜ್ ಪ್ರಚಾರ: ಕೇಂದ್ರದ ವಿರುದ್ಧ ಕಿಡಿ

04/11/2024, 23:22

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಕೇಂದ್ರಕ್ಕೆ ಕರ್ನಾಟಕ ಹೆಚ್ಚಿನ ತೆರಿಗೆ ಸಂಗ್ರಹಿಸಿ ಕೊಡುತ್ತಿದ್ದರೂ ಅದಕ್ಕೆ ಪ್ರತಿಯಾಗಿ ರಾಜ್ಯಕ್ಕೆ ಕೇಂದ್ರ ನೀಡುತ್ತಿರುವುದು ಅಲ್ಪ ಪಾಲು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ಆಕ್ರೋಶ ವ್ಯಕ್ತಪಡಿಸಿದರು.
ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರ ಪರ ಸೋಮವಾರ ಪ್ರಚಾರ ಕೈಗೊಂಡರು. ‘ಓ ಮೇಘ ಬಿಲಿವರ್ಸ್ ಚರ್ಚ್’ ಸಭಾಂಗಣದಲ್ಲಿ ಆಯೋಜಿಸಿದ್ದ ಕ್ರೈಸ್ತ ಸಮುದಾಯದ ಸಭೆಯಲ್ಲಿ ಮಾತನಾಡಿದ ಅವರು ‘ಈ ಹಿಂದೆನಂತೇ ಈ ಬಾರಿಯೂ ಕಾಂಗ್ರೆಸ್‌ಗೆ ಮತ ನೀಡಿ, ಅನ್ನಪೂರ್ಣ ಅವರನ್ನು ಗೆಲ್ಲಿಸಿ’ ಎಂದು ಮನವಿ ಮಾಡಿದರು.
‘ಕರ್ನಾಟಕ ಇಂದು ಕೇಂದ್ರಕ್ಕೆ ಹೆಚ್ಚಿನ ತೆರಿಗೆ ಕೊಡುತ್ತಿದೆ. ಆದರೆ ನಮಗೆ ಕೇಂದ್ರದಿಂದ ಸಿಗುತ್ತಿರುವುದು ಅಲ್ಪ ಪಾಲು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇಲ್ಲ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ಇಂಥ ಅನ್ಯಾಯ ಮಾಡಬಾರದು. ಎಲ್ಲರನ್ನೂ ಜೊತೆ ಸೇರಿಸಿಕೊಂಡು, ಮುನ್ನಡೆಯುತ್ತಿರುವ ಪಕ್ಷ ಕಾಂಗ್ರೆಸ್‌. ಈ ಬಾರಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲ್ಲಿಸಿ’ ಎಂದು ಮನವಿ ಮಾಡಿದರು.
ಅಭ್ಯರ್ಥಿ ಅನ್ನಪೂರ್ಣ ಮಾತನಾಡಿ, ‘ಸಂಡೂರಿನ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕಾಂಗ್ರೆಸ್‌ ಪಕ್ಷ ಮಹಿಳೆಗೆ ಅವಕಾಶ ನೀಡಿದೆ. ಈ ಹಿಂದೆ ಬೆಂಬಲ ನೀಡಿದಂತೆ ಈ ಬಾರಿಯೂ ಅವಕಾಶ ನೀಡಿ’ ಎಂದು ಮನವಿ ಮಾಡಿದರು.
ಎಐಸಿಸಿ ಮುಖಂಡರಾದ ಗೋಪಿನಾಥ್, ಕೆಪಿಸಿಸಿ ವಕ್ತಾರ ವೆಂಕಟೇಶ ಹೆಗಡೆ, ಪದಾಧಿಕಾರಿಗಳು, ಜಿಲ್ಲಾ ಮಹಿಳಾ ಕಾಂಗ್ರೆಸ್‌ ಪದಾಧಿಕಾರಿಗಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು