4:04 PM Sunday18 - January 2026
ಬ್ರೇಕಿಂಗ್ ನ್ಯೂಸ್
ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ದೇಶದ ಅಭಿವೃದ್ಧಿಗೆ ಉತ್ತಮ ಅಧಿಕಾರಿಗಳ ಆವಶ್ಯಕತೆ ಇದೆ: ರಚನಾ ಬೆಳ್ಳಿಹಬ್ಬದ ಸಂಭ್ರಮದಲ್ಲಿ ಆರ್ಚ್ ಬಿಷಪ್ ಡಾ.ಪೀಟರ್ ಮಚಾದೊ

05/11/2024, 11:49

ಮಂಗಳೂರು(reporterkarnataka.com): ಮಂಗಳೂರಿನ ಕ್ರೈಸ್ತ ಯುವ ಸಮುದಾಯ ಉತ್ತಮ ಶಿಕ್ಷಣ ಪಡೆದು ಕೈತುಂಬಾ ಹಣಗಳಿಕೆಯ ಉದ್ದೇಶಕ್ಕಾಗಿ ವಿದೇಶದಲ್ಲಿ ಉದ್ಯೋಗ ಪಡೆಯುವತ್ತ ಗಮನ ಹರಿಸುತ್ತಿರುವುದು ಜಾಸ್ತಿಯಾಗುತ್ತಿದೆ. ಆದರೆ ದೇಶದ ಅಭಿವೃದ್ಧಿಗೆ ಉತ್ತಮ ಐಎಎಸ್, ಐಪಿಎಸ್, ಮಿಲಿಟರಿ ಅಧಿಕಾರಿಗಳು, ಉದ್ಯಮಿಗಳ ಅಗತ್ಯವಿದೆ. ಕ್ರೈಸ್ತ ಯುವ ಸಮುದಾಯ ಈ ನಿಟ್ಟಿನಲ್ಲಿ ಚಿಂತನೆ ನಡೆಸಬೇಕಾಗಿದ
ಎಂದು ಬೆಂಗಳೂರಿನ ಆರ್ಚ್ ಬಿಷಪ್ ಡಾ.ಪೀಟರ್ ಮಚಾದೊ ಅಭಿಪ್ರಾಯಪಟ್ಟಿದ್ದಾರೆ.


ನಗರದ ಕುಲಶೇಖರ ಕೋರ್ಡೆಲ್ ಸಭಾಂಗಣದಲ್ಲಿ ರವಿವಾರ ನಡೆದ ಕೊಂಕಣಿ ಕೆಥೋಲಿಕ್ ಉದ್ಯಮಿಗಳು, ವೃತ್ತಿಪರರು ಮತ್ತು ಕೃಷಿಕರ ಸಂಸ್ಥೆ ‘ರಚನಾ’ದ ಬೆಳ್ಳಿಹಬ್ಬ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಮಕ್ಕಳು ಉದ್ಯೋಗಕ್ಕಾಗಿ ವಿದೇಶಕ್ಕೆ ಹೋಗುತ್ತಿರುವ ಹಿನ್ನೆಲೆಯಲ್ಲಿ ಕೆಲವು ಮನೆಗಳ ಹಿರಿಯರಲ್ಲಿ ಅಭದ್ರತೆ ಕಾಡುತ್ತಿರುವುದು ಮಾತ್ರವಲ್ಲದೆ, ಅವರು ವೃದ್ಧಾಶ್ರಮ ಸೇರಬೇಕಾದ ಅನಿವಾರ್ಯತೆ ಉಂಟಾಗಿದೆ ಎಂದು ಆರ್ಚ್ ಬಿಷಪ್ ಕಳವಳ ವ್ಯಕ್ತಪಡಿಸಿದರು.
ಮುಖ್ಯ ಅತಿಥಿ ಪುಣೆಯ ಮಿಲಿಟರಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಕಮಾಂಡೆಂಟ್ ರಿಯರ್ ಅಡ್ಮಿರಲ್ ನೆಲ್ಸನ್ ಡಿಸೋಜ ಮಾತನಾಡಿ, ರಚನಾ ಸಂಸ್ಥೆ ಉದ್ಯಮದ ಜತೆಗೆ ಉದ್ಯಮಶೀಲತ್ವವನ್ನು ಬೆಳೆಸುವ ವಿಚಾರದಲ್ಲಿ ಸಾಕಷ್ಟು ಕೆಲಸ ಮಾಡುತ್ತಿದ್ದು, ಇದು ಮತ್ತಷ್ಟು ಮುಂದುವರಿಯುವಂತಾಗಬೇಕು ಎಂದರು.
ಮಂಗಳೂರು ಬಿಷಪ್ ಡಾ.ಪೀಟರ್ ಪಾವ್ಲ್ ಸಲ್ದಾನ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈ ವೇಳೆ ಉದ್ಯಮಿಗಳಾದ ಮೈಕಲ್ ಡಿಸೋಜ, ‘ರಚನಾ’ದ ಅಧ್ಯಕ್ಷ ಅಧ್ಯಕ್ಷ ಜಾನ್ ಮೊಂತೆರೊ, ರಚನಾ ಸಂಚಾಲಕಿ ಮಾರ್ಜೊರಿ ಟೆಕ್ಸೇರ, ಕಾರ್ಯದರ್ಶಿ ವಿಜಯ್ ವಿಶ್ವಾಸ್ ಲೋಬೊ, ಕಾರ್ಯಕಾರಿ ಸಮಿತಿ ಸದಸ್ಯ ಜೆ.ಆರ್. ಲೋಬೊ ಉಪಸ್ಥಿತರಿದ್ದರು.
ಈ ಸಂದರ್ಭ 25 ವರ್ಷಗಳ ಸವಿನೆನಪಿಗಾಗಿ ಕೊಂಕಣಿ ಕ್ರೈಸ್ತ ಯುವ ಉದ್ಯಮಿಗಳಿಗೆ ನೆರವಾಗುವ ನಿಟ್ಟಿನಲ್ಲಿ ‘ರಚನಾ ಕೆಥೋಲಿಕ್ ಸೌಹಾರ್ದ ಸಹಕಾರಿ ಸಂಘ’ ಯೋಜನೆಯ ಉದ್ಘಾಟನೆ ನಡೆಯಿತು. ರಚನಾ ಆರಂಭಿಸಲು ಕಾರಣ ಕರ್ತರಾದ ಮಾರಿಟ್ಟೊ ಸಿಕ್ವೇರ ಅವರನ್ನು ಈ ಈ ಸಂದರ್ಭ ಸನ್ಮಾನಿಸಲಾಯಿತು.
ರಚನಾ ಸ್ಥಾಪನೆ ಮತ್ತು ನಡೆದು ಬಂದ ಹಾದಿಯ ಸಾಕ್ಷ್ಯ ಚಿತ್ರ ಪ್ರದರ್ಶನ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು