7:38 PM Saturday9 - August 2025
ಬ್ರೇಕಿಂಗ್ ನ್ಯೂಸ್
Bangalore | ಪ್ರಧಾನಿ ಮೋದಿ ನಾಳೆ ಬೆಂಗಳೂರಿಗೆ: ವಂದೇ ಭಾರತ್ ಎಕ್ಸ್ ಪ್ರೆಸ್… ರಾಹುಲ್‌ ಗಾಂಧಿಯದ್ದು ಠುಸ್‌ ಪಟಾಕಿ, ಮತದಾರರ ಪಟ್ಟಿ ತಯಾರಿಯಲ್ಲಿ ಪ್ರಧಾನಿ ಅಥವಾ ಬಿಜೆಪಿಯ… ಧರ್ಮಸ್ಥಳದಲ್ಲಿ ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ: ಓರ್ವ ಆರೋಪಿಯ ಕೊಕ್ಕಡದಲ್ಲಿ ಬಂಧನ ಆಲಮಟ್ಟಿ ಡ್ಯಾಮ್ ಎತ್ತರ 524 ಮೀಟರ್‌ಗೆ ಹೆಚ್ಚಿಸುವುದು ಕರ್ನಾಟಕದ ಹಕ್ಕು: ಕೇಂದ್ರ ಜಲಶಕ್ತಿ… Chikkamagaluru | ಕಾಫಿನಾಡಲ್ಲಿ ನಿಲ್ಲದ ಕಾಡಾನೆ ಉಪಟಳ: ಹೆದ್ದಾರಿ, ಕಾಫಿ ತೋಟದಲ್ಲಿಯೂ ದಾಂಧಲೆ ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ಅಳಿವಿನoಚಿನಲ್ಲಿರುವ ನೀರು ನಾಯಿಗಳ ಕಳ್ಳಬೇಟೆ: ಪ್ರಾಣಿ ಪ್ರಿಯರಿಂದ ಕಾರ್ಯಾಚರಣೆ ಮುತ್ತಾಲಿಕ್ ಜತೆ ವೇದಿಕೆ ಹಂಚಿಕೊಂಡ ಕೈ ಶಾಸಕಿ: ನಯನಾ ಮೋಟಮ್ಮ ವಿರುದ್ಧ ಪ್ರಾಯಶ್ಚಿತ್ತ… ಮತದಾರರ ಹಕ್ಕು ರಕ್ಷಣೆ ರಾಜಕೀಯ ಪಕ್ಷಗಳ ಕರ್ತವ್ಯ: ಡಿಸಿಎಂ ಡಿ.ಕೆ. ಶಿವಕುಮಾರ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ‘ರಿದಂ ಆಫ್ ಬಿಎಲ್‌ಆರ್‌’: ವಿಶಿಷ್ಟ ಧ್ವನಿ ಗುರುತು… ಶಿಬು ಸೊರೇನ್ ನಿಧನ: ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ:…

ಇತ್ತೀಚಿನ ಸುದ್ದಿ

ದೇಶದ ಅಭಿವೃದ್ಧಿಗೆ ಉತ್ತಮ ಅಧಿಕಾರಿಗಳ ಆವಶ್ಯಕತೆ ಇದೆ: ರಚನಾ ಬೆಳ್ಳಿಹಬ್ಬದ ಸಂಭ್ರಮದಲ್ಲಿ ಆರ್ಚ್ ಬಿಷಪ್ ಡಾ.ಪೀಟರ್ ಮಚಾದೊ

05/11/2024, 11:49

ಮಂಗಳೂರು(reporterkarnataka.com): ಮಂಗಳೂರಿನ ಕ್ರೈಸ್ತ ಯುವ ಸಮುದಾಯ ಉತ್ತಮ ಶಿಕ್ಷಣ ಪಡೆದು ಕೈತುಂಬಾ ಹಣಗಳಿಕೆಯ ಉದ್ದೇಶಕ್ಕಾಗಿ ವಿದೇಶದಲ್ಲಿ ಉದ್ಯೋಗ ಪಡೆಯುವತ್ತ ಗಮನ ಹರಿಸುತ್ತಿರುವುದು ಜಾಸ್ತಿಯಾಗುತ್ತಿದೆ. ಆದರೆ ದೇಶದ ಅಭಿವೃದ್ಧಿಗೆ ಉತ್ತಮ ಐಎಎಸ್, ಐಪಿಎಸ್, ಮಿಲಿಟರಿ ಅಧಿಕಾರಿಗಳು, ಉದ್ಯಮಿಗಳ ಅಗತ್ಯವಿದೆ. ಕ್ರೈಸ್ತ ಯುವ ಸಮುದಾಯ ಈ ನಿಟ್ಟಿನಲ್ಲಿ ಚಿಂತನೆ ನಡೆಸಬೇಕಾಗಿದ
ಎಂದು ಬೆಂಗಳೂರಿನ ಆರ್ಚ್ ಬಿಷಪ್ ಡಾ.ಪೀಟರ್ ಮಚಾದೊ ಅಭಿಪ್ರಾಯಪಟ್ಟಿದ್ದಾರೆ.


ನಗರದ ಕುಲಶೇಖರ ಕೋರ್ಡೆಲ್ ಸಭಾಂಗಣದಲ್ಲಿ ರವಿವಾರ ನಡೆದ ಕೊಂಕಣಿ ಕೆಥೋಲಿಕ್ ಉದ್ಯಮಿಗಳು, ವೃತ್ತಿಪರರು ಮತ್ತು ಕೃಷಿಕರ ಸಂಸ್ಥೆ ‘ರಚನಾ’ದ ಬೆಳ್ಳಿಹಬ್ಬ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಮಕ್ಕಳು ಉದ್ಯೋಗಕ್ಕಾಗಿ ವಿದೇಶಕ್ಕೆ ಹೋಗುತ್ತಿರುವ ಹಿನ್ನೆಲೆಯಲ್ಲಿ ಕೆಲವು ಮನೆಗಳ ಹಿರಿಯರಲ್ಲಿ ಅಭದ್ರತೆ ಕಾಡುತ್ತಿರುವುದು ಮಾತ್ರವಲ್ಲದೆ, ಅವರು ವೃದ್ಧಾಶ್ರಮ ಸೇರಬೇಕಾದ ಅನಿವಾರ್ಯತೆ ಉಂಟಾಗಿದೆ ಎಂದು ಆರ್ಚ್ ಬಿಷಪ್ ಕಳವಳ ವ್ಯಕ್ತಪಡಿಸಿದರು.
ಮುಖ್ಯ ಅತಿಥಿ ಪುಣೆಯ ಮಿಲಿಟರಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಕಮಾಂಡೆಂಟ್ ರಿಯರ್ ಅಡ್ಮಿರಲ್ ನೆಲ್ಸನ್ ಡಿಸೋಜ ಮಾತನಾಡಿ, ರಚನಾ ಸಂಸ್ಥೆ ಉದ್ಯಮದ ಜತೆಗೆ ಉದ್ಯಮಶೀಲತ್ವವನ್ನು ಬೆಳೆಸುವ ವಿಚಾರದಲ್ಲಿ ಸಾಕಷ್ಟು ಕೆಲಸ ಮಾಡುತ್ತಿದ್ದು, ಇದು ಮತ್ತಷ್ಟು ಮುಂದುವರಿಯುವಂತಾಗಬೇಕು ಎಂದರು.
ಮಂಗಳೂರು ಬಿಷಪ್ ಡಾ.ಪೀಟರ್ ಪಾವ್ಲ್ ಸಲ್ದಾನ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈ ವೇಳೆ ಉದ್ಯಮಿಗಳಾದ ಮೈಕಲ್ ಡಿಸೋಜ, ‘ರಚನಾ’ದ ಅಧ್ಯಕ್ಷ ಅಧ್ಯಕ್ಷ ಜಾನ್ ಮೊಂತೆರೊ, ರಚನಾ ಸಂಚಾಲಕಿ ಮಾರ್ಜೊರಿ ಟೆಕ್ಸೇರ, ಕಾರ್ಯದರ್ಶಿ ವಿಜಯ್ ವಿಶ್ವಾಸ್ ಲೋಬೊ, ಕಾರ್ಯಕಾರಿ ಸಮಿತಿ ಸದಸ್ಯ ಜೆ.ಆರ್. ಲೋಬೊ ಉಪಸ್ಥಿತರಿದ್ದರು.
ಈ ಸಂದರ್ಭ 25 ವರ್ಷಗಳ ಸವಿನೆನಪಿಗಾಗಿ ಕೊಂಕಣಿ ಕ್ರೈಸ್ತ ಯುವ ಉದ್ಯಮಿಗಳಿಗೆ ನೆರವಾಗುವ ನಿಟ್ಟಿನಲ್ಲಿ ‘ರಚನಾ ಕೆಥೋಲಿಕ್ ಸೌಹಾರ್ದ ಸಹಕಾರಿ ಸಂಘ’ ಯೋಜನೆಯ ಉದ್ಘಾಟನೆ ನಡೆಯಿತು. ರಚನಾ ಆರಂಭಿಸಲು ಕಾರಣ ಕರ್ತರಾದ ಮಾರಿಟ್ಟೊ ಸಿಕ್ವೇರ ಅವರನ್ನು ಈ ಈ ಸಂದರ್ಭ ಸನ್ಮಾನಿಸಲಾಯಿತು.
ರಚನಾ ಸ್ಥಾಪನೆ ಮತ್ತು ನಡೆದು ಬಂದ ಹಾದಿಯ ಸಾಕ್ಷ್ಯ ಚಿತ್ರ ಪ್ರದರ್ಶನ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು