2:47 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ದೇಶದ ಅಭಿವೃದ್ಧಿಗೆ ಉತ್ತಮ ಅಧಿಕಾರಿಗಳ ಆವಶ್ಯಕತೆ ಇದೆ: ರಚನಾ ಬೆಳ್ಳಿಹಬ್ಬದ ಸಂಭ್ರಮದಲ್ಲಿ ಆರ್ಚ್ ಬಿಷಪ್ ಡಾ.ಪೀಟರ್ ಮಚಾದೊ

05/11/2024, 11:49

ಮಂಗಳೂರು(reporterkarnataka.com): ಮಂಗಳೂರಿನ ಕ್ರೈಸ್ತ ಯುವ ಸಮುದಾಯ ಉತ್ತಮ ಶಿಕ್ಷಣ ಪಡೆದು ಕೈತುಂಬಾ ಹಣಗಳಿಕೆಯ ಉದ್ದೇಶಕ್ಕಾಗಿ ವಿದೇಶದಲ್ಲಿ ಉದ್ಯೋಗ ಪಡೆಯುವತ್ತ ಗಮನ ಹರಿಸುತ್ತಿರುವುದು ಜಾಸ್ತಿಯಾಗುತ್ತಿದೆ. ಆದರೆ ದೇಶದ ಅಭಿವೃದ್ಧಿಗೆ ಉತ್ತಮ ಐಎಎಸ್, ಐಪಿಎಸ್, ಮಿಲಿಟರಿ ಅಧಿಕಾರಿಗಳು, ಉದ್ಯಮಿಗಳ ಅಗತ್ಯವಿದೆ. ಕ್ರೈಸ್ತ ಯುವ ಸಮುದಾಯ ಈ ನಿಟ್ಟಿನಲ್ಲಿ ಚಿಂತನೆ ನಡೆಸಬೇಕಾಗಿದ
ಎಂದು ಬೆಂಗಳೂರಿನ ಆರ್ಚ್ ಬಿಷಪ್ ಡಾ.ಪೀಟರ್ ಮಚಾದೊ ಅಭಿಪ್ರಾಯಪಟ್ಟಿದ್ದಾರೆ.


ನಗರದ ಕುಲಶೇಖರ ಕೋರ್ಡೆಲ್ ಸಭಾಂಗಣದಲ್ಲಿ ರವಿವಾರ ನಡೆದ ಕೊಂಕಣಿ ಕೆಥೋಲಿಕ್ ಉದ್ಯಮಿಗಳು, ವೃತ್ತಿಪರರು ಮತ್ತು ಕೃಷಿಕರ ಸಂಸ್ಥೆ ‘ರಚನಾ’ದ ಬೆಳ್ಳಿಹಬ್ಬ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಮಕ್ಕಳು ಉದ್ಯೋಗಕ್ಕಾಗಿ ವಿದೇಶಕ್ಕೆ ಹೋಗುತ್ತಿರುವ ಹಿನ್ನೆಲೆಯಲ್ಲಿ ಕೆಲವು ಮನೆಗಳ ಹಿರಿಯರಲ್ಲಿ ಅಭದ್ರತೆ ಕಾಡುತ್ತಿರುವುದು ಮಾತ್ರವಲ್ಲದೆ, ಅವರು ವೃದ್ಧಾಶ್ರಮ ಸೇರಬೇಕಾದ ಅನಿವಾರ್ಯತೆ ಉಂಟಾಗಿದೆ ಎಂದು ಆರ್ಚ್ ಬಿಷಪ್ ಕಳವಳ ವ್ಯಕ್ತಪಡಿಸಿದರು.
ಮುಖ್ಯ ಅತಿಥಿ ಪುಣೆಯ ಮಿಲಿಟರಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಕಮಾಂಡೆಂಟ್ ರಿಯರ್ ಅಡ್ಮಿರಲ್ ನೆಲ್ಸನ್ ಡಿಸೋಜ ಮಾತನಾಡಿ, ರಚನಾ ಸಂಸ್ಥೆ ಉದ್ಯಮದ ಜತೆಗೆ ಉದ್ಯಮಶೀಲತ್ವವನ್ನು ಬೆಳೆಸುವ ವಿಚಾರದಲ್ಲಿ ಸಾಕಷ್ಟು ಕೆಲಸ ಮಾಡುತ್ತಿದ್ದು, ಇದು ಮತ್ತಷ್ಟು ಮುಂದುವರಿಯುವಂತಾಗಬೇಕು ಎಂದರು.
ಮಂಗಳೂರು ಬಿಷಪ್ ಡಾ.ಪೀಟರ್ ಪಾವ್ಲ್ ಸಲ್ದಾನ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈ ವೇಳೆ ಉದ್ಯಮಿಗಳಾದ ಮೈಕಲ್ ಡಿಸೋಜ, ‘ರಚನಾ’ದ ಅಧ್ಯಕ್ಷ ಅಧ್ಯಕ್ಷ ಜಾನ್ ಮೊಂತೆರೊ, ರಚನಾ ಸಂಚಾಲಕಿ ಮಾರ್ಜೊರಿ ಟೆಕ್ಸೇರ, ಕಾರ್ಯದರ್ಶಿ ವಿಜಯ್ ವಿಶ್ವಾಸ್ ಲೋಬೊ, ಕಾರ್ಯಕಾರಿ ಸಮಿತಿ ಸದಸ್ಯ ಜೆ.ಆರ್. ಲೋಬೊ ಉಪಸ್ಥಿತರಿದ್ದರು.
ಈ ಸಂದರ್ಭ 25 ವರ್ಷಗಳ ಸವಿನೆನಪಿಗಾಗಿ ಕೊಂಕಣಿ ಕ್ರೈಸ್ತ ಯುವ ಉದ್ಯಮಿಗಳಿಗೆ ನೆರವಾಗುವ ನಿಟ್ಟಿನಲ್ಲಿ ‘ರಚನಾ ಕೆಥೋಲಿಕ್ ಸೌಹಾರ್ದ ಸಹಕಾರಿ ಸಂಘ’ ಯೋಜನೆಯ ಉದ್ಘಾಟನೆ ನಡೆಯಿತು. ರಚನಾ ಆರಂಭಿಸಲು ಕಾರಣ ಕರ್ತರಾದ ಮಾರಿಟ್ಟೊ ಸಿಕ್ವೇರ ಅವರನ್ನು ಈ ಈ ಸಂದರ್ಭ ಸನ್ಮಾನಿಸಲಾಯಿತು.
ರಚನಾ ಸ್ಥಾಪನೆ ಮತ್ತು ನಡೆದು ಬಂದ ಹಾದಿಯ ಸಾಕ್ಷ್ಯ ಚಿತ್ರ ಪ್ರದರ್ಶನ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು