12:05 AM Monday21 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಸಂಡೂರಲ್ಲಿ ಬಿಜೆಪಿಗೆ ಅವಕಾಶ ಕೊಟ್ಟರೆ ಗಣಿ ಸಂಪತ್ತು ಲೂಟಿ: ಕೆ. ಸಿ. ಕೊಂಡಯ್ಯ ಎಚ್ಚರಿಕೆ

05/11/2024, 12:54

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಸಂಡೂರಲ್ಲಿ ನಡೆಯು ವಿಧಾನ ಸಭಾ ಉಪ ಚುನಾವಣೆಯಲ್ಲಿ ಬಿಜೆಪಿಗೆ ಅವಕಾಶ ಕೊಟ್ಟರೇ ದೌರ್ಜನ್ಯ, ದಬ್ಬಾಳಿಕೆ ನಡೆಯುವ ಸಾಧ್ಯತೆ ಇದೆ. ಸಂಡೂರಿನಲ್ಲಿ‌ನ‌ ಭಾವೈಕ್ಯತೆಗೆ ಧಕ್ಕೆಯಾಗಲಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಕೆ. ಸಿ. ಕೊಂಡಯ್ಯ ಹೇಳಿದರು.
ಬಳ್ಳಾರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2004-2010 ರವರೆಗೆ ಬಳ್ಳಾರಿ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ‌ನಡೆಸಿದವರು, ಗಣಿ ಸಂಪತ್ತನ್ನು ಲೂಟಿ ಮಾಡಿದವರೆಲ್ಲ ಬಿಜೆಪಿ ಅಭ್ಯರ್ಥಿ ಪರ ನಿಂತು ಪ್ರಚಾರ ಮಾಡುತ್ತಿದ್ದಾರೆ. ಅವರ ಉದ್ದೇಶ ಸಂಡೂರು ಮತ ಕ್ಷೇತ್ರ ‌ಅಭಿವೃದ್ದಿ‌‌ ಮಾಡುವುದಾಗಿಲ್ಲ. ಅಲ್ಲಿನ ಅದಿರು ಸಂಪತ್ತು, ಮ್ಯಾಂಗನೀಸ್ ನ್ನು ಲೂಟಿ‌ ಮಾಡುವುದಾಗಿದೆ ಎಂದು ಆರೋಪಿಸಿದರು.
ಮತ್ತೊಮ್ಮೆ ಗಣಿ‌ಗಾರಿಕೆ ಮೂಲಕ ಇಲ್ಲಿನ ಸಂಪತ್ತು ಲೂಟಿಗೆ ಸಂಡೂರಿನ ಜನ ಅವಕಾಶ ಮಾಡಿಕೊಡ ಬಾರದು. ಸಂಡೂರಿನವರೇ ಆದ ಇ.ತುಕಾರಂ ‌ಪತ್ನಿ ಅನ್ನಪೂರ್ಣ ಅವರನ್ನೇ ಗೆಲ್ಲಿಸುವ ಮೂಲಕ ಸಂಡೂರಿನ ಅಭಿವೃದ್ದಿಗೆ ಬೆಂಬಲ‌ ಕೊಡಿ ಎಂದು ಮತದಾರರಲ್ಲಿ ಮನವಿ‌ ಮಾಡಿದರು.
ಈ ಸಂದರ್ಭದಲ್ಲಿ ಮುಖಂಡರಾದ ರಾಂಪ್ರಸಾದ್, ವೆಂಕಟೇಶ್ ಹೆಗಡೆ ಇತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು