7:05 PM Tuesday24 - March 2026
ಬ್ರೇಕಿಂಗ್ ನ್ಯೂಸ್
ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ

ಇತ್ತೀಚಿನ ಸುದ್ದಿ

ಸಂಡೂರಲ್ಲಿ ಬಿಜೆಪಿಗೆ ಅವಕಾಶ ಕೊಟ್ಟರೆ ಗಣಿ ಸಂಪತ್ತು ಲೂಟಿ: ಕೆ. ಸಿ. ಕೊಂಡಯ್ಯ ಎಚ್ಚರಿಕೆ

05/11/2024, 12:54

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಸಂಡೂರಲ್ಲಿ ನಡೆಯು ವಿಧಾನ ಸಭಾ ಉಪ ಚುನಾವಣೆಯಲ್ಲಿ ಬಿಜೆಪಿಗೆ ಅವಕಾಶ ಕೊಟ್ಟರೇ ದೌರ್ಜನ್ಯ, ದಬ್ಬಾಳಿಕೆ ನಡೆಯುವ ಸಾಧ್ಯತೆ ಇದೆ. ಸಂಡೂರಿನಲ್ಲಿ‌ನ‌ ಭಾವೈಕ್ಯತೆಗೆ ಧಕ್ಕೆಯಾಗಲಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಕೆ. ಸಿ. ಕೊಂಡಯ್ಯ ಹೇಳಿದರು.
ಬಳ್ಳಾರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2004-2010 ರವರೆಗೆ ಬಳ್ಳಾರಿ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ‌ನಡೆಸಿದವರು, ಗಣಿ ಸಂಪತ್ತನ್ನು ಲೂಟಿ ಮಾಡಿದವರೆಲ್ಲ ಬಿಜೆಪಿ ಅಭ್ಯರ್ಥಿ ಪರ ನಿಂತು ಪ್ರಚಾರ ಮಾಡುತ್ತಿದ್ದಾರೆ. ಅವರ ಉದ್ದೇಶ ಸಂಡೂರು ಮತ ಕ್ಷೇತ್ರ ‌ಅಭಿವೃದ್ದಿ‌‌ ಮಾಡುವುದಾಗಿಲ್ಲ. ಅಲ್ಲಿನ ಅದಿರು ಸಂಪತ್ತು, ಮ್ಯಾಂಗನೀಸ್ ನ್ನು ಲೂಟಿ‌ ಮಾಡುವುದಾಗಿದೆ ಎಂದು ಆರೋಪಿಸಿದರು.
ಮತ್ತೊಮ್ಮೆ ಗಣಿ‌ಗಾರಿಕೆ ಮೂಲಕ ಇಲ್ಲಿನ ಸಂಪತ್ತು ಲೂಟಿಗೆ ಸಂಡೂರಿನ ಜನ ಅವಕಾಶ ಮಾಡಿಕೊಡ ಬಾರದು. ಸಂಡೂರಿನವರೇ ಆದ ಇ.ತುಕಾರಂ ‌ಪತ್ನಿ ಅನ್ನಪೂರ್ಣ ಅವರನ್ನೇ ಗೆಲ್ಲಿಸುವ ಮೂಲಕ ಸಂಡೂರಿನ ಅಭಿವೃದ್ದಿಗೆ ಬೆಂಬಲ‌ ಕೊಡಿ ಎಂದು ಮತದಾರರಲ್ಲಿ ಮನವಿ‌ ಮಾಡಿದರು.
ಈ ಸಂದರ್ಭದಲ್ಲಿ ಮುಖಂಡರಾದ ರಾಂಪ್ರಸಾದ್, ವೆಂಕಟೇಶ್ ಹೆಗಡೆ ಇತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು