2:00 AM Wednesday2 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ವಕ್ಫ್ ನೋಟಿಸ್ ಸರಕಾರದ ವ್ಯವಸ್ಥಿತ ಷಡ್ಯಂತ್ರ: ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್

05/11/2024, 18:18

ಬೆಂಗಳೂರು(reporterkarnataka.com): ವಕ್ಫ್ ಆಸ್ತಿ ಒತ್ತುವರಿ ನೆಪದಲ್ಲಿ ರಾಜ್ಯದ ರೈತರ ಭೂಮಿ‌ ಕಬಳಿಸಲು ಸರ್ಕಾರ ಮುಂದಾಗಿದ್ದು ಆಕಸ್ಮಿಕವೂ ಅಲ್ಲ, ಕಣ್ತಪ್ಪಿನ ಕಾರ್ಯವೂ ಅಲ್ಲ. ಇದೊಂದು ವ್ಯವಸ್ಥಿತ ಷಡ್ಯಂತ್ರ ಎಂದು ಮಾಜಿ ಸಚಿವ ವಿ.ಸುನೀಲ್ ಕುಮಾರ್ ಆರೋಪಿಸಿದ್ದಾರೆ.
ಈ ಹಿಂದೆ ರಾಜ್ಯ ಸರ್ಕಾರದ ಅಭಿವೃದ್ಧಿ ಆಯುಕ್ತರಾಗಿದ್ದ ಶಾಲಿನಿ ರಜನೀಶ್ ಅವರು ಕಳೆದ ಏಪ್ರಿಲ್ ತಿಂಗಳಲ್ಲಿ ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು 21767 ಎಕರೆ ವಕ್ಫ್ ಭೂಮಿಯನ್ನು ವಶಪಡಿಸಿಕೊಳ್ಳುವಂತೆ ಸೂಚನೆ ನೀಡಿದ್ದರು. ಈ ಸಂಬಂಧ ಕಂದಾಯ ಹಾಗೂ ವಕ್ಫ್ ಇಲಾಖೆ ಜಂಟಿ ಸಭೆ ನಡೆಸಿತ್ತು. ಸಿದ್ದರಾಮಯ್ಯನವರ ಸೂಚನೆ ಇಲ್ಲದೇ ಅಧಿಕಾರಿಗಳು ಇಂಥ ದರಿದ್ರ ನಿರ್ಣಯ ತೆಗದುಕೊಳ್ಳಲು ಸಾಧ್ಯವಿತ್ತೇ ? ಎಂದು ಪ್ರಶ್ನಿಸಿದ್ದಾರೆ.
ಈಗ ಪರಿಸ್ಥಿತಿ ವಿಕೋಪಕ್ಕೆ ಹೋದ ನಂತರ ಬಿಜೆಪಿಯವರು ಅನಗತ್ಯ ರಾಜಕಾರಣ ನಡೆಸುತ್ತಿದ್ದಾರೆ ಎಂದು ಸಿದ್ದರಾಮಯ್ಯನವರು ಬುರುಡೆ ಬಿಡುತ್ತಿದ್ದಾರೆ. ಇಷ್ಟೆಲ್ಲ ಸ್ಪಷ್ಟೀಕರಣ ನೀಡುವ ಮೊದಲು ಶಾಲಿನಿ ರಜನೀಶ್ ಅವರು ರಾಜೇಂದ್ರ ಕುಮಾರ್ ಕಟಾರಿಯಾ ಅವರಿಗೆ ಪತ್ರ ಬರೆದಿದ್ದು ಸತ್ಯವೋ, ಸುಳ್ಳೋ ಎಂಬುದನ್ನು ನೀವು ಸ್ಪಷ್ಟಪಡಿಸಿ. ಆಗ ನಿಮ್ಮ ಸರ್ಕಾರದ ಜೆಹಾದಿ ನೀತಿ ಬಯಲಾಗುತ್ತದೆ ಎಂದು ಟೀಕಿಸಿದ್ದಾರೆ.
*ರಾಜೀನಾಮೆಗೆ ಆಗ್ರಹ*: ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ್ ರಾಜೀನಾಮೆಗೆ ಆಗ್ರಹಿಸಿರುವ ಅವರು, ಹಲೋ ಅಪ್ಪಾದಿಂದ ಪ್ರಾರಂಭವಾದ ರಾಜ್ಯ ಸರ್ಕಾರದ ವರ್ಗಾವಣೆ ವ್ಯವಹಾರ ಈಗ ಅಬಕಾರಿ ಇಲಾಖೆ ಸಚಿವ ತಿಮ್ಮಾಪುರ್ ವರೆಗೆ ಬಂದು ನಿಂತಿದೆ.
ವರ್ಗಾವಣೆ ವ್ಯವಹಾರ, ಲೈಸೆನ್ಸ್ ಗೆ ಕಾಸು, ಸನ್ನದುದಾರರಿಂದ ಮಂಥ್ಲಿ ಸಂಗ್ರಹಣೆ ಸೇರಿದಂತೆ ಅಬಕಾರಿ ಸಚಿವರು ವಾರ್ಷಿಕ 500 ಕೋಟಿ ರೂ.ಖಮಾಯಿ ಸಂಗ್ರಹಿಸುತ್ತಿದ್ದಾರೆ ಎಂದು ಮದ್ಯ ಮಾರಾಟಗಾರರ ಸಂಘ ಆರೋಪ ಮಾಡಿದೆ.
ರಾಜ್ಯ ಸರ್ಕಾರದ ಹಗರಣಗಳ ಪಟ್ಟಿಗೆ ಈಗ ನಿಜಾರ್ಥದಲ್ಲಿ ಕಿಕ್ಕೇರಿದೆ ಎಂದು ವ್ಯಂಗ್ಯವಾಡಿದ್ದಾರೆ.
ಸಿದ್ದರಾಮಯ್ಯನವರೇ ಮಂಥ್ಲಿ ಕಲೆಕ್ಟರ್ ತಿಮ್ಮಾಪುರ ಅವರನ್ನು ಸಂಪುಟದಿಂದ ಕಿತ್ತೊಗೆಯುತ್ತೀರೋ ಅಥವಾ ವರಿಷ್ಠರ ರಾಜಸ್ವ ಕೊರತೆ ನೀಗಿಸಲು ಪಾಲು ಕೇಳುತ್ತೀರೋ ? ಎಂದು ಟೀಕಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು