7:38 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಬಂಟ್ವಾಳ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನ: ಸರ್ವಾಧ್ಯಕ್ಷೆಯಾಗಿ ಶಂಭೂರಿನ ಪ್ರೇಕ್ಷಾ ಆಯ್ಕೆ

05/11/2024, 18:56

ಬಂಟ್ವಾಳ(reporterkarnataka.com): ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ಘಟಕ ವತಿಯಿಂದ ನಡೆಯುವ ಬಂಟ್ವಾಳ ತಾಲೂಕು 18ನೇ ಮಕ್ಕಳ ಸಾಹಿತ್ಯ ಸಮ್ಮೇಳನ ಶಂಭೂರು ದ.ಕ.ಜಿಪಂ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ನಿರ್ಮಿಸಲಾಗುವ ರಾಮಚಂದ್ರ ರಾವ್ ಸಭಾಂಗಣದ ವಿ.ಮ ಭಟ್ ವೇದಿಕೆಯಲ್ಲಿ ನವೆಂಬರ್ 19ರಂದು ನಡೆಯಲಿದ್ದು ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆತಿಥೇಯ ಸಂಸ್ಥೆಯಲ್ಲಿ ಏಳನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಪ್ರೇಕ್ಷಾ ಆಯ್ಕೆಯಾಗಿದ್ದಾರೆ ಎಂದು ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷರಾದ ಹೇಮಚಂದ್ರ ಭಂಡಾರದ ಮನೆ ಮತ್ತು ಪ್ರಧಾನ ಕಾರ್ಯದರ್ಶಿ ಜಯರಾಮ ಡಿ ಪಡ್ರೆ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪ್ರೇಕ್ಷಾ ಅವರು ಶಂಭೂರು ಗ್ರಾಮದ ಸೀನೆರೆ ಪಾಲು ಮೋಹಿನಿ ಮತ್ತು ಸುಣ್ಣಾಜೆ ದಿನೇಶ್ ಅವರ ದ್ವಿತೀಯ ಪುತ್ರಿ. ಪ್ರಾಥಮಿಕ ವಿದ್ಯಾಭ್ಯಾಸವನ್ನು ಉಪ್ಪಿನಂಗಡಿಯ ನಟ್ಟಿಬೈಲು ವೇದಶಂಕರ ನಗರದ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೂರೈಸಿದ್ದಾರೆ. ನಂತರ ಶಂಭೂರು ಶಾಲೆಯಲ್ಲಿ ಐದನೇ ತರಗತಿಯಿಂದ ಕಲಿಕೆ ಮುಂದುವರಿಸುತ್ತಿದ್ದಾರೆ.
ಕಲಿಕೆ ಮತ್ತು ಸಹಪಠ್ಯ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿರುವ ಅವರು ಯಕ್ಷಗಾನದಲ್ಲಿಯೂ ವೇಷ ಮಾಡಿದ ಅನುಭವ ಗಳಿಸಿದ್ದಾರೆ. ಭಕ್ತಿಗೀತೆ ಮತ್ತು ದೇಶಭಕ್ತಿ ಗೀತೆಗಳ ಗಾಯನ ಇವರ ಮೆಚ್ಚಿನ ಹವ್ಯಾಸ. ಪ್ರತಿಭಾ ಕಾರಂಜಿಯ ಕವನ ವಾಚನ ಸ್ಪರ್ಧೆಯಲ್ಲಿ ಭಾಗವಹಿಸಿ ಕಳೆದೆರಡು ವರ್ಷಗಳಿಂದ ಬಹುಮಾನಿತರಾಗುತ್ತಿದ್ದಾರೆ. ಅವರು ಶಂಭೂರು ಶಾಲೆಯ ಪ್ರತಿಭಾವಂತ ವಿದ್ಯಾರ್ಥಿನಿ. ಕಡೆಶಿವಾಲಯದಲ್ಲಿ ಜರಗಿದ 17ನೇ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ಅವರು ಸ್ವರಚಿಸಿದ ಕವನ “ಬೆಳೆಸಿ ಉಳಿಸಿ” ಕವನವು ಆ ವರ್ಷದ ಸ್ಮರಣ ಸಂಚಿಕೆ “ಲಹರಿ” ಯಲ್ಲಿ ಪ್ರಕಟವಾಗಿರುವುದು ಹೆಮ್ಮೆಯ ಸಂಗತಿ ಮತ್ತು ಸಹಪಾಠಿಗಳಿಗೆ ಪ್ರೇರಣೆ. ಶಾಲಾ ಪ್ರತಿಭಾ ದಿನೋತ್ಸವ, ಕ್ರೀಡಾ ಕೂಟಗಳಲ್ಲಿ ಅವರು ತನ್ನ ಸಾಮರ್ಥ್ಯವನ್ನು ಒರೆಗೆ ಹಚ್ಚಿ ಬಹುಮಾನ ಪಡೆಯುತ್ತಿರುವ ಸಾಧನಾ ಮುಖಿ. ಸಾಹಿತ್ಯದಲ್ಲಿ ಬೆಳೆಯಬೇಕಂಬ ಹಂಬಲ ಪ್ರೇಕ್ಷಾ ಅವರಿಗಿದೆ.
ಮಕ್ಕಳ ಕಲಾ ಲೋಕದ ಅಧ್ಯಕ್ಷರಾದ ರಮೇಶ ಎಂ. ಬಾಯಾರು, ಕಾರ್ಯದರ್ಶಿ ಪುಷ್ಪಾ ಎಚ್. ಅವರು ಪ್ರೇಕ್ಷಾ ಅವರನ್ನು ಅಭಿನಂದಿಸಿದ್ದು ಅವರ ಸರ್ವಾಧ್ಯಕ್ಷತೆಯಲ್ಲಿ ಶಂಭೂರಿನಲ್ಲಿ ಜರಗುವ ತಾಲೂಕು ಮಟ್ಟದ ಮಕ್ಕಳ ಹದಿನೆಂಟನೇ ಸಾಹಿತ್ಯ ಸಮ್ಮೇಳನವು ಯಶಸ್ಸುಗಳಿಸಲಿ ಎಂದು ಹಾರೈಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು